Homeಮುಖಪುಟದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

- Advertisement -
- Advertisement -

ಜಾರ್ಖಂಡ್‌ನ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ದೇವಸ್ಥಾನವೊಂದರಲ್ಲಿ ಪೂಜೆ ನಡೆಸುವ ಮೂಲಕ ಹಿಂದೂ ಭಾವನೆಗಳಿಗೆ ಘಾಸಿ ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.

ದಿಯೋಘರ್‌ನ ಬಾಬಾ ಬೈದ್ಯನಾಥ ಧಾಮ್ ದೇವಸ್ಥಾನದಲ್ಲಿ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಪೂಜೆ ನಡೆಸಿದ್ದರು. ಇದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ನಿಶಿಕಾಂತ್ ದುಬೆ  ಬೆದರಿಕೆ ಹಾಕಿದ್ದಾರೆ.

ಅನ್ಸಾರಿ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕಾಯ್ದೆ ಪ್ರಕಾರ ಒಂದು ವರ್ಷದವರೆಗೆ ವಿಚಾರಣೆಯಿಲ್ಲದೆ ಬಂಧನದಲ್ಲಿ ಇಡಬಹುದು.

ಇರ್ಫಾನ್ ಅನ್ಸಾರಿ ಮೊದಲು ಹಿಂದೂ ಧರ್ಮವನ್ನು ಅಳವಡಿಸಿಕೊಳ್ಳಲಿ, ನಿಜವಾಗಿಯೂ ಅವರು ಶಿವನ ಭಕ್ತನಾಗಿದ್ದರೆ ನಂತರ ಪೂಜೆ ನಡೆಸಲಿ ಎಂದು ನಿಶಿಕಾಂತ್ ದುಬೆ ಹೇಳಿದ್ದಾರೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

“ಬಾಬಾ ಬೈದ್ಯನಾಥ ಧಾಮ್ ದೇವಾಲಯದ ಗರ್ಭಗುಡಿಯಲ್ಲಿ ಮುಸ್ಲಿಮರಿಗೆ ಪ್ರವೇಶಿಸಲು ಅಥವಾ ಪೂಜೆ ನಡೆಸಲು ಅನುಮತಿ ಇಲ್ಲ. ಮಕ್ಕಾನಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ? ಇಲ್ಲ. ಹಾಗಾಗಿ ಬೈದ್ಯನಾಥ ಧಾಮ್ ದೇವಾಲಯದಲ್ಲೂ ಮುಸ್ಲಿಮರಿಗೆ ಪೂಜೆ ಸಲ್ಲಿಸಲು ಅನುಮತಿಯಿಲ್ಲ” ಎಂದು ದುಬೆ ಹೇಳಿದ್ದಾರೆ.

’ಇದು ರಾಜಕೀಯ ವಿಷಯವಲ್ಲ ಆದರೆ, ಧಾರ್ಮಿಕ ನಂಬಿಕೆಗೆ ಸಂಬಂಧಿಸಿದೆ. ಇರ್ಫಾನ್ ಅನ್ಸಾರಿ ಉದ್ದೇಶಪೂರ್ವಕವಾಗಿ ಕೋಟಿಗಟ್ಟಲೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

“ನಾನು ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಮುಖ್ಯ ಕಾರ್ಯದರ್ಶಿ ಮತ್ತು ಇತರ ಸಂಬಂಧಪಟ್ಟ ವ್ಯಕ್ತಿಗೆ ಕಳುಹಿಸಿದ್ದೇನೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ, ಆದರೆ, ಅನ್ಸಾರಿ ಧಾರ್ಮಿಕ ಮನೋಭಾವವನ್ನು ಕೆರಳಿಸಲು ಪ್ರಯತ್ನಿಸಿದ್ದಾರೆ. ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾನು ನ್ಯಾಯ ಕೋರಿ ನ್ಯಾಯಾಲಯಕ್ಕೆ ಹೋಗುತ್ತೇನೆ” ಎಂದಿದ್ದಾರೆ.

ದುಬೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅನ್ಸಾರಿ, ’ಉಪಚುನಾವಣೆಗೆ ಮುಂಚಿತವಾಗಿ ನಿಶಿಕಾಂತ್ ದುಬೆ ಅನಗತ್ಯವಾಗಿ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿದ್ದಾರೆ. ಬಾಬಾ ನಾಗ್ರಿ ನನ್ನ ಜನ್ಮಸ್ಥಳ. ನಾನು ಬಾಬಾ ಬೈದ್ಯನಾಥ್ ಧಾಮ್ ದೇವಸ್ಥಾನಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದೇನೆ”. ಎಂದಿದ್ದಾರೆ.

ಉಪಚುನಾವಣೆಯಲ್ಲಿ ಜಯಗಳಿಸಿದ ನಂತರ ಮತ್ತೆ ಇಲ್ಲಿಯೇ ಪೂಜೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನನ್ನನ್ನು ಯಾರು ತಡೆಯುತ್ತಾರೆಂದು ನಾನು ನೋಡುತ್ತೇನೆ. ಶಿವ ಯಾರೊಬ್ಬರ ವೈಯಕ್ತಿಕ ಆಸ್ತಿಯಲ್ಲ. ಶಿವನ ಮೇಲೆ ನನಗೆ ನಂಬಿಕೆಯಿದೆ” ಎಂದು ಸವಾಲು ಹಾಕಿದ್ದಾರೆ.

ಸಚಿವ ಹಾಜಿ ಹುಸೇನ್ ಅನ್ಸಾರಿ ಅವರ ನಿಧನದ ನಂತರ ಮಧುಪುರ ಸ್ಥಾನ ಖಾಲಿ ಬಿದ್ದಿದೆ. ಆ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂ ಧರ್ಮವನ್ನು ತಮಗೆ ಬೇಕಾದಂತೆ ತಮ್ಮ ಅಪ್ಪನ ಮನೆ ಆಸ್ತಿ ಅನ್ನು ತರಹ ಉಪಯೋಗಿಸುವ ಈ ದುರ್ಮಾಗಿಗಳ ವಿರುದ್ಧ ಮೊದಲು ಕ್ರಮ ತೆಗೆದುಕೊಳ್ಳಬೇಕು. ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ತಾನು ನೀಡಿದ ಹೇಳಿದ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಕೇಳಬೇಕು. ಹಿಂದೂ ಧರ್ಮ ಒಂದು ನೀಚ ಧರ್ಮವೆಂದು ಸಾರಿದಕ್ಕೂ ಕ್ಷಮೆಯಾಚಿಸಬೇಕು.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...