Homeಕರೋನಾ ತಲ್ಲಣಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಕೇವಲ ರೋಗ ತರುವುದಕ್ಕೆ ಸೀಮಿತವಾಗಿಲ್ಲ. ಕಳೆದ ಬಾರಿಗಿಂತ ಈ ಬಾರಿ ಕೊರೊನಾ ಸಾವುಗಳು ಕೂಡ ಅಧಿಕವಾಗುತ್ತಿದೆ. ಹಲವು ರಾಜ್ಯಗಳು ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆಯನ್ನು ಮರೆ ಮಾಚುತ್ತಿವೆ. ಉತ್ತರ ಪ್ರದೇಶ ಮತ್ತು ಗುಜರಾತ್ ಇದಕ್ಕೆ ಜೀವಂತ ಸಾಕ್ಷಿಯಾಗಿವೆ. ಇನ್ನು ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸ್ಮಶಾನಗಳ ಸಮಸ್ಯೆ ಕೂಡ ಮತ್ತೊಂದು ತರಹದ್ದು.

ಗುಜರಾತ್‌ನ ಸೂರತ್‌ನಲ್ಲಿ ಕೊರೊನಾ ಪ್ರಕರಣಗಳು, ಕೊರೊನಾ ಸಾವುಗಳು ಹೆಚ್ಚಾಗಿ ಪರಿಸ್ಥಿತಿ ಮೀತಿ ಮೀರಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುತ್ತಿರುವ ವಿದ್ಯುತ್‌ ಚಿತಾಗಾರದಲ್ಲಿ ಲೋಹದ ಯಂತ್ರಗಳು ಕೂಡ ಕರಗಿ ಹೋಗುತ್ತಿವೆ.

ಸೂರತ್‌ನಲ್ಲಿ ಕೊರೊನಾ ರೋಗಿಗಳಿಗೆ ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೆ ಶ್ಮಶಾನದಲ್ಲಿಯೂ ಸಹ ಸಾಲುಗಳಲ್ಲಿ ನಿಲ್ಲಬೇಕಾಗಿದೆ. ಅಲ್ಲಿಯೂ ವಿಪರೀತ ಜನಸಂದಣಿ ಇರುವ ಕಾರಣ ಕಾಯುವ ಟೋಕನ್‌ಗಳನ್ನು ನೀಡಲಾಗುತ್ತಿದೆ.

ಸೂತರ್‌ ನಗರದ ಮೂರು ಮುಖ್ಯ ಸ್ಮಶಾನಗಳಲ್ಲಿ ಪ್ರತಿದಿನ ಸರಾಸರಿ 300 ಶವಗಳ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಆದರರೂ ಕೂಡ ಸ್ಮಶಾನಕ್ಕೆ ಅಂತ್ಯಕ್ರಿಯೆಗಾಗಿ ಬರುವ ಸಂಬಂಧಿಕರು, ಮನೆಯವರು ಕನಿಷ್ಠ 6 ಗಂಟೆಯಿಂದ 10 ಗಂಟೆಗಳವರೆಗೆ ಕಾಯಬೇಕಾಗಿರುವ ಪರಿಸ್ಥಿತಿ ಇದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ಈ 300 ಮೃತದೇಹಗಳಲ್ಲಿ, ಕೊರೊನಾ ಮಾರ್ಗಸೂಚಿಗಳ ಪ್ರಕಾರ ಅಂದಾಜು 100 ರಿಂದ 120 ಶವಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಅಶ್ವಿನಿ ಕುಮಾರ್ ಸ್ಮಶಾನದಲ್ಲಿ ದಿನಕ್ಕೆ 125 ಕ್ಕೂ ಹೆಚ್ಚು ಶವಗಳು, ಜಹಾಂಗೀರ್‌ಪುರದ ಕುರುಕ್ಷೇತ್ರ ಶ್ಮಶಾನದಲ್ಲಿ ಸುಮಾರು 100 ಶವಗಳು ಮತ್ತು ಉಮ್ರಾದಲ್ಲಿರುವ ರಾಮನಾಥ ಘೇಲಾ ಸ್ಮಶಾನದಲ್ಲಿ ಸರಾಸರಿ 90 ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೊತೆಗೆ ಸೂರತ್‌ನಿಂದ ಮೃತದೇಹಗಳನ್ನು ಶವಸಂಸ್ಕಾರಕ್ಕಾಗಿ ಹತ್ತಿರದ ಪಟ್ಟಣಗಳಾದ ಬಾರ್ಡೋಲಿ ಮತ್ತು ನವಸಾರಿಗಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಮೂರು ಶ್ಮಶಾನಗಳ ಟ್ರಸ್ಟಿಯೊಬ್ಬರು ಮಾಹಿತಿ ನೀಡಿದ್ದಾರೆ.

ಎಲ್ಲಾ ಮೂರು ಪ್ರಮುಖ ಸ್ಮಶಾನಗಳ ವ್ಯವಸ್ಥಾಪಕರ ಪ್ರಕಾರ, ’ವಿದ್ಯುತ್‌ ಚಿತಾಗಾರದಲ್ಲಿ ಅತಿಯಾದ ಬಳಕೆಯಿಂದಾಗಿ, ಅನಿಲ ಕುಲುಮೆಗಳ ಚೌಕಟ್ಟುಗಳು ಕರಗಿ ಹೋಗಿವೆ ಮತ್ತು ಬರ್ನರ್‌ಗಳು ಮುಚ್ಚಿಹೋಗಿವೆ. ಅಶ್ವಿನಿ ಕುಮಾರ್ ಚಿತಾಗಾರದಲ್ಲಿ ಎರಡು ಅನಿಲ ಕುಲುಮೆಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದವು. ತಕ್ಷಣ ಅವುಗಳನ್ನು ದುರಸ್ತಿ ಮಾಡಬೇಕಾಯಿತು’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ಈ ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ. ಇಲ್ಲಿ ಪ್ರತಿದಿನ ಸರಾಸರಿ 30 ರಿಂದ 40 ಮೃತದೇಹಗಳ ಅಂತ್ಯಕ್ರಿಯೆ ನಡೆಸಬಹುದಾಗಿದೆ. ಮತ್ತೊಂದು ತಾತ್ಕಾಲಿಕ ಸ್ಮಶಾನವನ್ನು ವರಾಚಾ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ. ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.


ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...