Homeಅಂತರಾಷ್ಟ್ರೀಯಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

ಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

- Advertisement -
- Advertisement -

ಕೆನಡಾದ ಹೌಸ್ ಆಫ್ ಕಾಮನ್ಸ್ ಜೂಮ್ ಕಾನ್ಫರೆನ್ಸ್‌ನಲ್ಲಿ ಎಂಪಿಯೊಬ್ಬರು ನಗ್ನರಾಗಿ ಕಾಣಿಸಿಕೊಂಡು ನಂತರ ಕ್ಷಮೆ ಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಲಿಬರಲ್ ಸಂಸದ ಅಮೋಸ್ ವಿಲಿಯಮ್ಸ್, ವರ್ಚುವಲ್ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್ ಕ್ಯಾಮೆರಾ ಆನ್ ಮಾಡಿದಾಗ ತನ್ನ ದೇಹದ ಮುಂಭಾಗವನ್ನು ಮುಚ್ಚಿಕೊಳ್ಳಲು ಒದ್ದಾಡಿ ನಂತರ ಮಾಯವಾದರು.

“ನಾನು ಇಂದು ನಿಜವಾಗಿಯೂ ದುರದೃಷ್ಟಕರ ತಪ್ಪು ಮಾಡಿದ್ದೇನೆ. ಇದರಿಂದ ನಾನು ಮುಜುಗರಕ್ಕೊಳಗಾಗಿದ್ದೇನೆ” ಎಂದು 46 ವರ್ಷದ ಸಂಸದ, ಬುಧವಾರ ತಡರಾತ್ರಿ ತಮ್ಮ ಕಚೇರಿಯಲ್ಲಿ ನಡೆದ ಘಟನೆಯನ್ನು ಸಾರ್ವಜನಿಕಗೊಳಿಸಿದ ನಂತರ ಟ್ವೀಟ್ ಮಾಡಿದ್ದಾರೆ.

“ನಾನು ಜಾಗಿಂಗ್‌ಗೆ ಹೋಗಿ ಬಂದ ನಂತರ ನಂತರ ದಿನಿತ್ಯದ ಬಟ್ಟೆ ಬದಲಾಯಿಸುವ ಸಂದರ್ಭದಲ್ಲಿ ನನ್ನ ಲ್ಯಾಪ್‌ಟಾಪ್ ಕ್ಯಾಮೆರಾ ಆಕಸ್ಮಿಕವಾಗಿ ಆನ್ ಆಗಿಯೇ ಇತ್ತು. ಸದನದಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ, ಇದು ಮತ್ತೆ ಸಂಭವಿಸುವುದಿಲ್ಲ” ಎಂದು ಸಂಸದ ಕ್ಷಮಾಪಣೆ ಕೇಳಿದ್ದಾರೆ.

ಆಗ ಪ್ರಶ್ನೋತ್ತರ ಅವಧಿ ನಡೆಯುತ್ತಿತ್ತು. ಈ ಸಂಸದ ಆಗ ಸಭೆ ಉದ್ದೇಶ ಮಾತನಾಡಿದ್ದರೆ ಹೌಸ್ ಆಫ್ ಕಾಮನ್ಸ್ ಮಾರ್ಗದರ್ಶಿ ಪುಸ್ತಕವನ್ನು ಉಲ್ಲಂಘಿಸುತ್ತಿದ್ದರು. ಆದರೆ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿಲ್ಲ.

‘ರೂಲ್ಸ್ ಆಫ್ ಆರ್ಡರ್ ಮತ್ತು ಡೆಕೋರಮ್’ ವಿಭಾಗದ ಅಡಿಯಲ್ಲಿ, ಚರ್ಚೆಯಲ್ಲಿ ಭಾಗವಹಿಸಲು ಯಾವುದೇ ಡ್ರೆಸ್ ಕೋಡ್ ಅಗತ್ಯವಿಲ್ಲ, ಆದರೆ ಪುರುಷ ಭಾಷಣಕಾರರು ಜಾಕೆಟ್, ಶರ್ಟ್ ಮತ್ತು ಟೈಗಳಂತಹ “ಸಮಕಾಲೀನ ವ್ಯವಹಾರ ಉಡುಪನ್ನು ಧರಿಸಿರಬೇಕು” ಎಂದು ನವಿವರಿಸಲಾಗಿದೆ.

ಅಮೋಸ್‌ರ ಲಿಬರಲ್ ಪಕ್ಷವನ್ನು ಮುನ್ನಡೆಸುತ್ತಿರುವ ಪ್ರಧಾನಿ ಜಸ್ಟಿನ್ ಟ್ರುಡೊ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಬೇಕಾಗಿಲ್ಲ ಎಂದಿದ್ದಾರೆ.

ವಿಪಕ್ಷ ನಾಯಕಿ ಕ್ಲಾಡ್ ಡೆಬೆಲ್ಲೆಫ್ಯೂಲೆ “ಸಂಸದ ಉತ್ತಮ ದೈಹಿಕ ಆಕಾರದಲ್ಲಿದ್ದಾರೆ ಎಂದು ನಾವು ನೋಡಿದ್ದೇವೆ, ಆದರೆ ಸದಸ್ಯರು ಜಾಗರೂಕರಾಗಿರಿ ಮತ್ತು ಕ್ಯಾಮೆರಾವನ್ನು ಚೆನ್ನಾಗಿ ನಿಯಂತ್ರಿಸಲು ಎಚ್ಚರ ವಹಿಸಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಹೇಳಿದ್ದಾಗಿ ಕೆನಡಿಯನ್ ಪ್ರೆಸ್ ವರದಿ ಮಾಡಿದೆ.

“ಟೈ ಮತ್ತು ಜಾಕೆಟ್ ಕಡ್ಡಾಯವಾಗಿದೆ ಎಂದು ಸದಸ್ಯರಿಗೆ, ವಿಶೇಷವಾಗಿ ಪುರುಷರಿಗೆ ನೆನಪಿಸುವ ಅಗತ್ಯವಿರಬಹುದು, ಆದರೆ ಶರ್ಟ್, ಬಾಕ್ಸರ್ ಶಾರ್ಟ್ಸ್ ಅಥವಾ ಪ್ಯಾಂಟ್ ಕೂಡಾ ಇದೆ” ಎಂದು ಕೆನಡಿಯನ್ ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಮೇ 15ರ ವರೆಗೆ ತಾಜ್‌ ಮಹಲ್, ಕುತುಬ್‌ ಮಿನಾರ್‌ ಬಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...