Homeಅಂತರಾಷ್ಟ್ರೀಯಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

ಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

- Advertisement -
- Advertisement -

ಕೆನಡಾದ ಹೌಸ್ ಆಫ್ ಕಾಮನ್ಸ್ ಜೂಮ್ ಕಾನ್ಫರೆನ್ಸ್‌ನಲ್ಲಿ ಎಂಪಿಯೊಬ್ಬರು ನಗ್ನರಾಗಿ ಕಾಣಿಸಿಕೊಂಡು ನಂತರ ಕ್ಷಮೆ ಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಲಿಬರಲ್ ಸಂಸದ ಅಮೋಸ್ ವಿಲಿಯಮ್ಸ್, ವರ್ಚುವಲ್ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್ ಕ್ಯಾಮೆರಾ ಆನ್ ಮಾಡಿದಾಗ ತನ್ನ ದೇಹದ ಮುಂಭಾಗವನ್ನು ಮುಚ್ಚಿಕೊಳ್ಳಲು ಒದ್ದಾಡಿ ನಂತರ ಮಾಯವಾದರು.

“ನಾನು ಇಂದು ನಿಜವಾಗಿಯೂ ದುರದೃಷ್ಟಕರ ತಪ್ಪು ಮಾಡಿದ್ದೇನೆ. ಇದರಿಂದ ನಾನು ಮುಜುಗರಕ್ಕೊಳಗಾಗಿದ್ದೇನೆ” ಎಂದು 46 ವರ್ಷದ ಸಂಸದ, ಬುಧವಾರ ತಡರಾತ್ರಿ ತಮ್ಮ ಕಚೇರಿಯಲ್ಲಿ ನಡೆದ ಘಟನೆಯನ್ನು ಸಾರ್ವಜನಿಕಗೊಳಿಸಿದ ನಂತರ ಟ್ವೀಟ್ ಮಾಡಿದ್ದಾರೆ.

“ನಾನು ಜಾಗಿಂಗ್‌ಗೆ ಹೋಗಿ ಬಂದ ನಂತರ ನಂತರ ದಿನಿತ್ಯದ ಬಟ್ಟೆ ಬದಲಾಯಿಸುವ ಸಂದರ್ಭದಲ್ಲಿ ನನ್ನ ಲ್ಯಾಪ್‌ಟಾಪ್ ಕ್ಯಾಮೆರಾ ಆಕಸ್ಮಿಕವಾಗಿ ಆನ್ ಆಗಿಯೇ ಇತ್ತು. ಸದನದಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ, ಇದು ಮತ್ತೆ ಸಂಭವಿಸುವುದಿಲ್ಲ” ಎಂದು ಸಂಸದ ಕ್ಷಮಾಪಣೆ ಕೇಳಿದ್ದಾರೆ.

ಆಗ ಪ್ರಶ್ನೋತ್ತರ ಅವಧಿ ನಡೆಯುತ್ತಿತ್ತು. ಈ ಸಂಸದ ಆಗ ಸಭೆ ಉದ್ದೇಶ ಮಾತನಾಡಿದ್ದರೆ ಹೌಸ್ ಆಫ್ ಕಾಮನ್ಸ್ ಮಾರ್ಗದರ್ಶಿ ಪುಸ್ತಕವನ್ನು ಉಲ್ಲಂಘಿಸುತ್ತಿದ್ದರು. ಆದರೆ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿಲ್ಲ.

‘ರೂಲ್ಸ್ ಆಫ್ ಆರ್ಡರ್ ಮತ್ತು ಡೆಕೋರಮ್’ ವಿಭಾಗದ ಅಡಿಯಲ್ಲಿ, ಚರ್ಚೆಯಲ್ಲಿ ಭಾಗವಹಿಸಲು ಯಾವುದೇ ಡ್ರೆಸ್ ಕೋಡ್ ಅಗತ್ಯವಿಲ್ಲ, ಆದರೆ ಪುರುಷ ಭಾಷಣಕಾರರು ಜಾಕೆಟ್, ಶರ್ಟ್ ಮತ್ತು ಟೈಗಳಂತಹ “ಸಮಕಾಲೀನ ವ್ಯವಹಾರ ಉಡುಪನ್ನು ಧರಿಸಿರಬೇಕು” ಎಂದು ನವಿವರಿಸಲಾಗಿದೆ.

ಅಮೋಸ್‌ರ ಲಿಬರಲ್ ಪಕ್ಷವನ್ನು ಮುನ್ನಡೆಸುತ್ತಿರುವ ಪ್ರಧಾನಿ ಜಸ್ಟಿನ್ ಟ್ರುಡೊ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಬೇಕಾಗಿಲ್ಲ ಎಂದಿದ್ದಾರೆ.

ವಿಪಕ್ಷ ನಾಯಕಿ ಕ್ಲಾಡ್ ಡೆಬೆಲ್ಲೆಫ್ಯೂಲೆ “ಸಂಸದ ಉತ್ತಮ ದೈಹಿಕ ಆಕಾರದಲ್ಲಿದ್ದಾರೆ ಎಂದು ನಾವು ನೋಡಿದ್ದೇವೆ, ಆದರೆ ಸದಸ್ಯರು ಜಾಗರೂಕರಾಗಿರಿ ಮತ್ತು ಕ್ಯಾಮೆರಾವನ್ನು ಚೆನ್ನಾಗಿ ನಿಯಂತ್ರಿಸಲು ಎಚ್ಚರ ವಹಿಸಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಹೇಳಿದ್ದಾಗಿ ಕೆನಡಿಯನ್ ಪ್ರೆಸ್ ವರದಿ ಮಾಡಿದೆ.

“ಟೈ ಮತ್ತು ಜಾಕೆಟ್ ಕಡ್ಡಾಯವಾಗಿದೆ ಎಂದು ಸದಸ್ಯರಿಗೆ, ವಿಶೇಷವಾಗಿ ಪುರುಷರಿಗೆ ನೆನಪಿಸುವ ಅಗತ್ಯವಿರಬಹುದು, ಆದರೆ ಶರ್ಟ್, ಬಾಕ್ಸರ್ ಶಾರ್ಟ್ಸ್ ಅಥವಾ ಪ್ಯಾಂಟ್ ಕೂಡಾ ಇದೆ” ಎಂದು ಕೆನಡಿಯನ್ ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಮೇ 15ರ ವರೆಗೆ ತಾಜ್‌ ಮಹಲ್, ಕುತುಬ್‌ ಮಿನಾರ್‌ ಬಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...