Homeಅಂತರಾಷ್ಟ್ರೀಯಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

ಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

- Advertisement -
- Advertisement -

ಕೆನಡಾದ ಹೌಸ್ ಆಫ್ ಕಾಮನ್ಸ್ ಜೂಮ್ ಕಾನ್ಫರೆನ್ಸ್‌ನಲ್ಲಿ ಎಂಪಿಯೊಬ್ಬರು ನಗ್ನರಾಗಿ ಕಾಣಿಸಿಕೊಂಡು ನಂತರ ಕ್ಷಮೆ ಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಲಿಬರಲ್ ಸಂಸದ ಅಮೋಸ್ ವಿಲಿಯಮ್ಸ್, ವರ್ಚುವಲ್ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್ ಕ್ಯಾಮೆರಾ ಆನ್ ಮಾಡಿದಾಗ ತನ್ನ ದೇಹದ ಮುಂಭಾಗವನ್ನು ಮುಚ್ಚಿಕೊಳ್ಳಲು ಒದ್ದಾಡಿ ನಂತರ ಮಾಯವಾದರು.

“ನಾನು ಇಂದು ನಿಜವಾಗಿಯೂ ದುರದೃಷ್ಟಕರ ತಪ್ಪು ಮಾಡಿದ್ದೇನೆ. ಇದರಿಂದ ನಾನು ಮುಜುಗರಕ್ಕೊಳಗಾಗಿದ್ದೇನೆ” ಎಂದು 46 ವರ್ಷದ ಸಂಸದ, ಬುಧವಾರ ತಡರಾತ್ರಿ ತಮ್ಮ ಕಚೇರಿಯಲ್ಲಿ ನಡೆದ ಘಟನೆಯನ್ನು ಸಾರ್ವಜನಿಕಗೊಳಿಸಿದ ನಂತರ ಟ್ವೀಟ್ ಮಾಡಿದ್ದಾರೆ.

“ನಾನು ಜಾಗಿಂಗ್‌ಗೆ ಹೋಗಿ ಬಂದ ನಂತರ ನಂತರ ದಿನಿತ್ಯದ ಬಟ್ಟೆ ಬದಲಾಯಿಸುವ ಸಂದರ್ಭದಲ್ಲಿ ನನ್ನ ಲ್ಯಾಪ್‌ಟಾಪ್ ಕ್ಯಾಮೆರಾ ಆಕಸ್ಮಿಕವಾಗಿ ಆನ್ ಆಗಿಯೇ ಇತ್ತು. ಸದನದಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ, ಇದು ಮತ್ತೆ ಸಂಭವಿಸುವುದಿಲ್ಲ” ಎಂದು ಸಂಸದ ಕ್ಷಮಾಪಣೆ ಕೇಳಿದ್ದಾರೆ.

ಆಗ ಪ್ರಶ್ನೋತ್ತರ ಅವಧಿ ನಡೆಯುತ್ತಿತ್ತು. ಈ ಸಂಸದ ಆಗ ಸಭೆ ಉದ್ದೇಶ ಮಾತನಾಡಿದ್ದರೆ ಹೌಸ್ ಆಫ್ ಕಾಮನ್ಸ್ ಮಾರ್ಗದರ್ಶಿ ಪುಸ್ತಕವನ್ನು ಉಲ್ಲಂಘಿಸುತ್ತಿದ್ದರು. ಆದರೆ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿಲ್ಲ.

‘ರೂಲ್ಸ್ ಆಫ್ ಆರ್ಡರ್ ಮತ್ತು ಡೆಕೋರಮ್’ ವಿಭಾಗದ ಅಡಿಯಲ್ಲಿ, ಚರ್ಚೆಯಲ್ಲಿ ಭಾಗವಹಿಸಲು ಯಾವುದೇ ಡ್ರೆಸ್ ಕೋಡ್ ಅಗತ್ಯವಿಲ್ಲ, ಆದರೆ ಪುರುಷ ಭಾಷಣಕಾರರು ಜಾಕೆಟ್, ಶರ್ಟ್ ಮತ್ತು ಟೈಗಳಂತಹ “ಸಮಕಾಲೀನ ವ್ಯವಹಾರ ಉಡುಪನ್ನು ಧರಿಸಿರಬೇಕು” ಎಂದು ನವಿವರಿಸಲಾಗಿದೆ.

ಅಮೋಸ್‌ರ ಲಿಬರಲ್ ಪಕ್ಷವನ್ನು ಮುನ್ನಡೆಸುತ್ತಿರುವ ಪ್ರಧಾನಿ ಜಸ್ಟಿನ್ ಟ್ರುಡೊ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಬೇಕಾಗಿಲ್ಲ ಎಂದಿದ್ದಾರೆ.

ವಿಪಕ್ಷ ನಾಯಕಿ ಕ್ಲಾಡ್ ಡೆಬೆಲ್ಲೆಫ್ಯೂಲೆ “ಸಂಸದ ಉತ್ತಮ ದೈಹಿಕ ಆಕಾರದಲ್ಲಿದ್ದಾರೆ ಎಂದು ನಾವು ನೋಡಿದ್ದೇವೆ, ಆದರೆ ಸದಸ್ಯರು ಜಾಗರೂಕರಾಗಿರಿ ಮತ್ತು ಕ್ಯಾಮೆರಾವನ್ನು ಚೆನ್ನಾಗಿ ನಿಯಂತ್ರಿಸಲು ಎಚ್ಚರ ವಹಿಸಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಹೇಳಿದ್ದಾಗಿ ಕೆನಡಿಯನ್ ಪ್ರೆಸ್ ವರದಿ ಮಾಡಿದೆ.

“ಟೈ ಮತ್ತು ಜಾಕೆಟ್ ಕಡ್ಡಾಯವಾಗಿದೆ ಎಂದು ಸದಸ್ಯರಿಗೆ, ವಿಶೇಷವಾಗಿ ಪುರುಷರಿಗೆ ನೆನಪಿಸುವ ಅಗತ್ಯವಿರಬಹುದು, ಆದರೆ ಶರ್ಟ್, ಬಾಕ್ಸರ್ ಶಾರ್ಟ್ಸ್ ಅಥವಾ ಪ್ಯಾಂಟ್ ಕೂಡಾ ಇದೆ” ಎಂದು ಕೆನಡಿಯನ್ ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಮೇ 15ರ ವರೆಗೆ ತಾಜ್‌ ಮಹಲ್, ಕುತುಬ್‌ ಮಿನಾರ್‌ ಬಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...