Homeಕರೋನಾ ತಲ್ಲಣಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ ಎಂದು ವೈದ್ಯರೊಬ್ಬರು ಹೇಳಿದ್ದಾರೆ

- Advertisement -
- Advertisement -

ಕೊರೊನಾ ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳು, ಖಾಲಿ ಇರುವ ಹಾಸಿಗೆಗಳು ಮತ್ತು ಪರೀಕ್ಷೆಗಳ ಅಂಕಿ-ಅಂಶವನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕಾಗಿ ಗುಜರಾತ್ ಹೈಕೋರ್ಟ್‌‌ ರಾಜ್ಯ ಸರ್ಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಪೀಠವು ರಾಜ್ಯದ ಆರೋಗ್ಯ ಸೌಲಭ್ಯದ ವೆಬ್‌ಸೈಟ್‌‌ ಪ್ರಸ್ತುತ ಸಮಯದ ಅಂಕಿಅಂಶಗಳನ್ನು ಒದಗಿಸುವುದಿಲ್ಲ ಎಂದು ಹೇಳಿದ್ದಾರೆ. “ಅದರಲ್ಲಿ ಆರೋಗ್ಯ ಸೌಲಭ್ಯದ ಲಭ್ಯತೆ ಇದೆ ಎಂದು ಇದು ತೋರಿಸುತ್ತದೆ, ಆದರೆ ಆಸ್ಪತ್ರೆಗೆ ಹೋಗಿ ನೋಡಿದಾಗ ಅಲ್ಲಿ ಸೌಲಭ್ಯವು ಇಲ್ಲದೆ ಇರುವುದನ್ನು ಕಾಣಬಹುದು” ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮ್‌ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಆರೋಗ್ಯ ಸೌಲಭ್ಯದ ಪೋರ್ಟಲ್‌ ಅನ್ನು ಆಸ್ಪತ್ರೆಗಳ ಸಂಘವು ನಿರ್ವಹಿಸುತ್ತಿದೆ ಎಂದು ರಾಜ್ಯ ಸರ್ಕಾವು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು ಅಂಕಿ ಅಂಶವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಮತ್ತು ನಿಖರವಾದ ಮಾಹಿತಿಯನ್ನು ಒದಗಿಸಬೇಕು ಎಂದು ಆದೇಶ ನೀಡಿದೆ.

“ಅದನ್ನು ಆಸ್ಪತ್ರೆಗಳ ಸಂಘಕ್ಕೆ ಬಿಡಲು ಸಾಧ್ಯವಿಲ್ಲ. ಬಹಳಷ್ಟು ಕುಟುಂಬಗಳು ಸಣ್ಣ ಮನೆಯಲ್ಲಿ ವಾಸಿಸುತ್ತವೆ. ಎರಡು ಪರೀಕ್ಷೆಗಳಲ್ಲೂ ಪಾಸಿಟಿವ್‌ ಬಂದರೆ, ಇತರರು ಏನು ಮಾಡಬೇಕು? ಪೋಷಕರು ಪಾಸಿಟಿವ್ ಆದರೆ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಕುಟುಂಬ ಸದಸ್ಯರಿಗೆ ಏನಾದರೂ ವ್ಯವಸ್ಥೆ ಇದೆಯೇ?” ಎಂದು ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.

ಗುಜರತ್‌‌ನಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಪರಿಸ್ಥಿತಿ ಕೈಮೀರಿದೆ ಎಂದು ವರದಿಯಾಗಿದೆ. ಸೋಂಕಿನಿಂದಾಗಿ ಮೃತಪಟ್ಟವರ ಅಂತ್ಯಕ್ರಿಯೆಗೂ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಅಲ್ಲಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು: ಮಣಿಪಾಲ ಆಸ್ಪತ್ರೆಗೆ ದಾಖಲು

ಈ ನಡುವೆ ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ.

ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.

ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...