Homeಕರೋನಾ ತಲ್ಲಣಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ ಎಂದು ವೈದ್ಯರೊಬ್ಬರು ಹೇಳಿದ್ದಾರೆ

- Advertisement -
- Advertisement -

ಕೊರೊನಾ ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳು, ಖಾಲಿ ಇರುವ ಹಾಸಿಗೆಗಳು ಮತ್ತು ಪರೀಕ್ಷೆಗಳ ಅಂಕಿ-ಅಂಶವನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕಾಗಿ ಗುಜರಾತ್ ಹೈಕೋರ್ಟ್‌‌ ರಾಜ್ಯ ಸರ್ಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಪೀಠವು ರಾಜ್ಯದ ಆರೋಗ್ಯ ಸೌಲಭ್ಯದ ವೆಬ್‌ಸೈಟ್‌‌ ಪ್ರಸ್ತುತ ಸಮಯದ ಅಂಕಿಅಂಶಗಳನ್ನು ಒದಗಿಸುವುದಿಲ್ಲ ಎಂದು ಹೇಳಿದ್ದಾರೆ. “ಅದರಲ್ಲಿ ಆರೋಗ್ಯ ಸೌಲಭ್ಯದ ಲಭ್ಯತೆ ಇದೆ ಎಂದು ಇದು ತೋರಿಸುತ್ತದೆ, ಆದರೆ ಆಸ್ಪತ್ರೆಗೆ ಹೋಗಿ ನೋಡಿದಾಗ ಅಲ್ಲಿ ಸೌಲಭ್ಯವು ಇಲ್ಲದೆ ಇರುವುದನ್ನು ಕಾಣಬಹುದು” ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮ್‌ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಆರೋಗ್ಯ ಸೌಲಭ್ಯದ ಪೋರ್ಟಲ್‌ ಅನ್ನು ಆಸ್ಪತ್ರೆಗಳ ಸಂಘವು ನಿರ್ವಹಿಸುತ್ತಿದೆ ಎಂದು ರಾಜ್ಯ ಸರ್ಕಾವು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು ಅಂಕಿ ಅಂಶವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಮತ್ತು ನಿಖರವಾದ ಮಾಹಿತಿಯನ್ನು ಒದಗಿಸಬೇಕು ಎಂದು ಆದೇಶ ನೀಡಿದೆ.

“ಅದನ್ನು ಆಸ್ಪತ್ರೆಗಳ ಸಂಘಕ್ಕೆ ಬಿಡಲು ಸಾಧ್ಯವಿಲ್ಲ. ಬಹಳಷ್ಟು ಕುಟುಂಬಗಳು ಸಣ್ಣ ಮನೆಯಲ್ಲಿ ವಾಸಿಸುತ್ತವೆ. ಎರಡು ಪರೀಕ್ಷೆಗಳಲ್ಲೂ ಪಾಸಿಟಿವ್‌ ಬಂದರೆ, ಇತರರು ಏನು ಮಾಡಬೇಕು? ಪೋಷಕರು ಪಾಸಿಟಿವ್ ಆದರೆ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಕುಟುಂಬ ಸದಸ್ಯರಿಗೆ ಏನಾದರೂ ವ್ಯವಸ್ಥೆ ಇದೆಯೇ?” ಎಂದು ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.

ಗುಜರತ್‌‌ನಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಪರಿಸ್ಥಿತಿ ಕೈಮೀರಿದೆ ಎಂದು ವರದಿಯಾಗಿದೆ. ಸೋಂಕಿನಿಂದಾಗಿ ಮೃತಪಟ್ಟವರ ಅಂತ್ಯಕ್ರಿಯೆಗೂ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಅಲ್ಲಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು: ಮಣಿಪಾಲ ಆಸ್ಪತ್ರೆಗೆ ದಾಖಲು

ಈ ನಡುವೆ ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ.

ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.

ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...