Homeಅಂಕಣಗಳುಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

- Advertisement -
- Advertisement -

ಅಂಬೇಡ್ಕರ್ ಸಿದ್ಧಾಂತವ ನಿತ್ಯ ಬದುಕಿನಲಿ ವಧಿಸಿ ಅವರ ಹೆಸರಿನ ಸ್ಮಾರಕಗಳ ನಿರ್ಮಿಸುವುದು ಕಪಟ ನಾಟಕ
1956ರಲ್ಲಿ ಮರೆಯಾದದ್ದು ಬಾಬಾಸಾಹೇಬರ ನಶ್ವರ ದೇಹವೇ ವಿನಾ ಅವರ ಪ್ರಖರ ಜೀವಪರ ವಿಚಾರಗಳಲ್ಲ ಎಂಬ ಕಠೋರ ಸತ್ಯವನ್ನು ಆಳುವವರ ಕಣ್ಣುಗಳು ಕಾಣದಾಗಿವೆ. ಈ ನೆಲವನ್ನು ಈವರೆಗೆ ಆಳಿಕೊಂಡು ಬಂದಿರುವ ಬಹುತೇಕ ಎಲ್ಲ ಸರ್ಕಾರಗಳು ಮಾಡಿಕೊಂಡು ಬಂದಿರುವ ತಪ್ಪನ್ನೇ ನರೇಂದ್ರ ಮೋದಿ ಮತ್ತು ಅವರ ಸಂಗಾತಿಗಳು ಮಾಡುತ್ತಿದ್ದಾರೆ.

ತುಳಿದಿಟ್ಟ ಸಮುದಾಯಗಳು ಎದೆಯೊಳಗೆ ಧರಿಸಿರುವ ದೀಪವಾಗಿ ಬಾಬಾಸಾಹೇಬರು ಧಗಧಗಿಸಿ ಹೊಳೆದಿದ್ದಾರೆ. ಸಮಸಮಾಜವನ್ನು ಅರಸುವ ಆಂದೋಲನಗಳಲ್ಲಿ, ಸ್ವಾತಂತ್ರ್ಯ ಸಮಾನತೆ ಸೋದರಭಾವ ಸಾರುವ ಸಂವಿಧಾನದಲ್ಲಿ ಅವರು ಇಂದಿಗೂ ಜೀವಂತವಾಗಿದ್ದಾರೆ. ಬದುಕಿರುವ ಈ ಅಂಬೇಡ್ಕರರನ್ನು ಕಣ್ಣು ತೆರೆದು ಕಾಣಬೇಕಿದೆ. ಹಾಗೆ ಕಣ್ಣು ತೆರೆಯುವುದನ್ನು ಒಲ್ಲದವರು ಯಥಾಸ್ಥಿತಿಯ ಪೋಷಕರು ಮತ್ತು ಫಲಾನುಭವಿಗಳು. ಹಾಗೆ ಸತ್ಯವನ್ನು ಕಣ್ಣಲ್ಲಿ ಕಟ್ಟಿಟ್ಟು ನೋಡುವುದಾದರೆ ಅಸಮಾನತೆಯ ತಳಪಾಯದ ಮೇಲೆ ಅವರು ಕಟ್ಟಿಕೊಂಡು ಬಂದಿರುವ ಶೋಷಣೆಯ ಸೌಧಗಳು ಬುಡಮೇಲಾಗಲಿವೆ.

ಹೀಗಾಗಿ ನಶ್ವರ ದೇಹಕ್ಕೆ ಮತ್ತು ನಾಮಧೇಯಕ್ಕೆ ಪ್ರತಿಮೆಗಳು, ಮಹಲುಗಳು, ಭವನಗಳು, ಭವ್ಯ ಸ್ಮಾರಕಗಳನ್ನು ಕಟ್ಟಿಸಿ ನಿಲ್ಲಿಸಲಾಗುತ್ತಿದೆ. ಅಂಬೇಡ್ಕರ್ ಅವರನ್ನು ಗೌರವಿಸುವವರು ನಾವು ಎಂದು ಎದೆಬಡಿದು ಹೇಳಿಕೊಳ್ಳಲಾಗುತ್ತಿದೆ.

ಏಣಿ ಶ್ರೇಣಿಗಳು, ಭೇದ ಭಾವಗಳ ಸಾಮಾಜಿಕ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರದೆ ಆರ್ಥಿಕ ಸುಧಾರಣೆಯಾದರೂ ಹೇಗೆ ಸಾಧ್ಯ ಎಂಬ ಅಂಬೇಡ್ಕರ್ ಪ್ರಶ್ನೆ ಇಂದಿಗೂ ಪ್ರಸ್ತುತ. ಬಹುತೇಕ ರಾಜಕೀಯ ಪಕ್ಷಗಳಿಗೆ ಅಂಬೇಡ್ಕರ್ ರೂಪವಾಗಿ ಬೇಕೇ ವಿನಾ ಸಾರವಾಗಿ ಅಲ್ಲ. “ಕಲ್ಲ ನಾಗರಕೆ ಹಾಲೆರೆವ” ಮತ್ತು “ಉಣ್ಣದ ಲಿಂಗಕ್ಕೆ ಬೋನವ ಹಿಡಿವ” ಡಾಂಭಿಕತನವನ್ನು ನಮ್ಮ ರಾಜಕೀಯ ಪಕ್ಷಗಳು ಅಂಬೇಡ್ಕರರ ಕುರಿತು ಪ್ರದರ್ಶಿಸಿವೆ. ಜಾತಿ ವ್ಯವಸ್ಥೆಯ ವಿರುದ್ಧ ಅಂಬೇಡ್ಕರ್ ಸಿಡಿಸಿದ ವಿಚಾರಗಳು ಈ ಪಕ್ಷಗಳಿಗೆ ಬೇಕಿಲ್ಲ. ಅವುಗಳನ್ನು ಮಡಿಕೋಲಿನಿಂದಲೂ ಮುಟ್ಟಿಲ್ಲ.

PC :ShareChat

ಹಿಂದೂ ಸಮಾಜ ನಿರ್ವಂಚನೆಯಿಂದ ದಲಿತರನ್ನು ಸರಿಸಮನಾಗಿ ನಡೆಸಿಕೊಳ್ಳಬೇಕು ಎಂಬ ಅಂಬೇಡ್ಕರ್ ಆಗ್ರಹಕ್ಕೆ ಇಂದಿಗೂ ರಾಜಕೀಯ ಪಕ್ಷ-ಪರಿವಾರಗಳು ಜಾಣ ಕಿವುಡು ಮತ್ತು ಕುರುಡನ್ನೇ ತೋರಿವೆ. ಶೂದ್ರರು ಸೃಷ್ಟಿಯಾದದ್ದು ಬ್ರಾಹ್ಮಣ, ಕ್ಷತ್ರಿಯ, ವೈಶ್ಯರ ಸೇವೆಗೆ ಎಂದು ಸಾರಿದ್ದ ಪ್ರಾಚೀನ ಭಾರತದ ಕಾನೂನು ಸಂಹಿತೆ ಮನುಸ್ಮೃತಿಯನ್ನು ಅಂತರಂಗದಲ್ಲಿ ಆರಾಧಿಸುವ ವಿಚಾರಧಾರೆಗೆ ಸೇರಿದವರು ನರೇಂದ್ರ ಮೋದಿ. ಇದೇ ಮನುಸ್ಮೃತಿಯ ಪ್ರತಿಯನ್ನು ಸಾಂಕೇತಿಕವಾಗಿ ಸುಟ್ಟಿದ್ದವರು ಅಂಬೇಡ್ಕರ್.

ಅಸಮಾನತೆಯ ನರಕಕೂಪದಿಂದ ನಿಜ ಸಮಾನತೆಯ ಎತ್ತರವನ್ನು ಭಾರತ ಏರಬೇಕೆಂಬ ಅಂಬೇಡ್ಕರ್ ಕನಸು ಇಂದಿಗೂ ನನಸಾಗಿಲ್ಲ. ಅವರು ನೀಡಿದ ಈ ದಸ್ತಾವೇಜನ್ನು ತಿದ್ದಿ ಬರೆಯುತ್ತೇವೆಂದು ಎದೆ ಸೆಟೆಸುವುದು ಈ ನಾಯಕನಿಗೆ ಮಾಡುವ ಅವಮಾನ. ಏಕಕಾಲಕ್ಕೆ ಹಲವು ನಾಲಗೆಗಳಲ್ಲಿ ನುಡಿಯುವ ಧೂರ್ತತನವನ್ನು ಆಳುವವರು ಬಿಡಬೇಕು. ಒಂದೇ ನಾಲಗೆಯಲ್ಲಿ ಮಾತಾಡಬೇಕು. ಏಕಕಾಲಕ್ಕೆ ಬೇಟೆನಾಯಿಯೊಂದಿಗೆ ಬೆನ್ನಟ್ಟುವ ಮತ್ತು ಪ್ರಾಣ ಉಳಿಸಿಕೊಳ್ಳಲು ಧಾವಿಸುವ ಮೊಲದೊಂದಿಗೆ ಓಡುವ ಆಷಾಡಭೂತಿತನದ ಮರ್ಮವೇನು?

ಆಚರಣೆಯಲ್ಲಿ ಅಂಬೇಡ್ಕರ್ ಸಿದ್ಧಾಂತವನ್ನು ಇಡಿಯಾಗಿ ವಿರೋಧಿಸಿ, ನಿತ್ಯದ ಬದುಕಿನಲ್ಲಿ ದಲಿತ ದ್ವೇಷವನ್ನು ಕಾರುವ ಜಾತಿ ವರ್ಗಗಳ ಜೊತೆ ನಿಲ್ಲುವವರು ಅಂಬೇಡ್ಕರ್ ಅವರಿಗೆ ತೋರುವ ಆದರವು ಅಪ್ಪಟ ಕಪಟ.

ದಲಿತರ ಮತಗಳನ್ನು ಸೆಳೆಯುವ ಕೇವಲ ಪ್ರತಿಮೆ- ಪ್ರತೀಕ- ಸ್ಮಾರಕ ರೂಪಕಗಳಾಗಿ ಮಾತ್ರವೇ ಪಕ್ಷ ಪರಿವಾರಗಳು ಅಂಬೇಡ್ಕರ್ ವರ್ಚಸ್ಸನ್ನು ದೋಚತೊಡಗಿವೆ. ನಿಜದ ಬಾಬಾಸಾಹೇಬರನ್ನೂ ಅವರ ಪ್ರಖರ ವಿಚಾರಗಳನ್ನು ದಿನನಿತ್ಯ ಬಗೆ ಬಗೆಯಲ್ಲಿ ವಧಿಸಲಾಗುತ್ತಿದೆ.

ಹನ್ನೆರಡನೆಯ ಶತಮಾನದಲ್ಲಿ ಸಮಸಮಾಜವನ್ನು ಕನಸಿ ಅದನ್ನು ನನಸಾಗಿಸಲು ಕ್ರಾಂತಿಯನ್ನೇ ನಡೆಸಿ ಪಟ್ಟಭದ್ರ ಹಿತಗಳಿಗೆ ಬಲಿಯಾದ ಬಸವಣ್ಣನವರ ಈ ವಚನ ಈಗಲೂ ಅತ್ಯಂತ ಪ್ರಸ್ತುತ.

ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು; ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ! ಉಂಬ ಜಂಗಮ ಬಂದರೆ ನಡೆ ಎಂಬರು; ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ! ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದರೆ, ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯ! ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ. ನೀಡ ನೀಡಿ ಕೆಟ್ಟರು ನಿಜವಿಲ್ಲದೆ. ಮಾಡುವ ನೀಡುವ ನಿಜಗುಣವುಳ್ಳಡೆ. ಕೂಡಿಕೊಂಬ ನಮ್ಮ ಕೂಡಲಸಂಗಮದೇವ.


ಇದನ್ನೂ ಓದಿ: ಹಳತು ವಿವೇಕ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕಿರುವ ನಿರೀಕ್ಷೆಗಳು: ಡಾ. ಬಿ ಆರ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಲೇಖನವನ್ನು ಡಾಬಸ್ಪೇಟೆ ವಾಯ್ಸ್ ನ ಮುಂದಿನ ಸಂಚಿಕೆಯಲ್ಲಿ (ಮೇ 2021) ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...