Homeಮುಖಪುಟಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಪ್ರಧಾನಿಯವರಿಗೆ ರಾಜ್ಯಕ್ಕೆ ಸ್ವಾಗತವಿದೆ. ಆದರೆ ಅವರು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಜನರನ್ನು ಏಕೆ ಕರೆತರಬೇಕು?" ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

- Advertisement -
- Advertisement -

ಆರ್‌ಟಿ-ಪಿಸಿಆರ್ ವರದಿಯಿಲ್ಲದೆ ಪಶ್ಚಿಮ ಬಂಗಾಳಕ್ಕೆ ಬರುವ ಹೊರಗಿನವರಿಗೆ ಅನುಮತಿಸದಂತೆ ಚುನಾವಣಾ ಆಯೋಗಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಬಿಜೆಪಿಯ ರ್‍ಯಾಲಿಗಳಲ್ಲಿ ಹೊರಗಿನಿಂದ ಬಂದು ಹಾಜರಾಗುವವರು ಮತ್ತು ಕಾರ್ಯಕ್ರಮ ಸಂಘಟಿಸುವವರು ಕೊರೊನಾ ವೈರಸ್‌ ಸೋಂಕನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಚುನಾವಣೆಗಳನ್ನು ನಡೆಸುವ ಪ್ರಯತ್ನದಲ್ಲಿ, ಕೊರೊನಾ ಸೋಂಕನ್ನು ನಿರ್ಲಕ್ಷಿಸಿದೆ, ಇದರ ಪರಿಣಾಮವಾಗಿ ಈಗ ಪ್ರಕರಣಗಳು ಹೆಚ್ಚುತ್ತಿವೆ. ಕೋವಿಡ್ -19 ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯಿಲ್ಲದೆ ಯಾರನ್ನೂ ರಾಜ್ಯಕ್ಕೆ ಪ್ರವೇಶಿಸಲು ಅನುಮತಿಸಬಾರದು ಎಂದು ನಾವು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ ”ಎಂದು ಉತ್ತರ 24 ಪರಗಣಗಳಲ್ಲಿ ನಡೆದ ಸಾರ್ವಜನಿಕ ಪ್ರಚಾರ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಗುರುವಾರ 6,769 ಹೊಸ ಪ್ರಕರಣಗಳು ಪತ್ತೆಯಾಗಿವೆ. 2020 ರ ಆರಂಭದಲ್ಲಿ ಇಷ್ಟು ಪ್ರಕರಣಗಳು ವರದಿಯಾಗಿದ್ದವು. ನಂತರದ ದಿನಗಳಲ್ಲಿ ಗುರುವಾರವೇ ರಾಜ್ಯದಲ್ಲಿ ಅತಿ ಹೆಚ್ಚು ದೈನಂದಿನ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಚುನಾವಣಾ ಕಾರ್ಯಕ್ರಮವನ್ನು ಆಯೋಜಿಸಲು, ವೇದಿಕೆ ಮತ್ತು ಪೆಂಡಾಲ್‌ಗಳನ್ನು ನಿರ್ಮಿಸಲು ಪ್ರಧಾನಿ ಮೋದಿ ರ್‍ಯಾಲಿ ಇದ್ದಾಗ ರಾಜ್ಯದ ಹೊರಗಿನಿಂದ ಸಾವಿರಾರು ಜನರು ಬರುತ್ತಿದ್ದಾರೆ. ಎಲ್ಲಾ ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳನ್ನು ಅವರಿಗಾಗಿ ಕಾಯ್ದಿರಿಸಲಾಗುತ್ತಿದೆ. ಅವರು ಕೊರೊನಾ ಸೋಂಕಿತರಾಗಿದ್ದಾರೆಯೇ ಇಲ್ಲವೇ ಎಂದು ಹೇಗೆ ತಿಳಿಯುವುದು? ಅವರು ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಗೂ ಒಳಗಾಗಿರುವುದಿಲ್ಲ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇತರ ರಾಜ್ಯಗಳ ಬಿಜೆಪಿ ಮುಖಂಡರೊಂದಿಗೆ ಹೊರಗಿನವರು ಜೊತೆಯಾಗಿರುವುದರಿಂದ ರಾಜ್ಯದಲ್ಲಿ ದೈನಂದಿನ ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗಿದೆ ಎಂದು ಟಿಎಂಸಿ ಮುಖ್ಯಸ್ಥರು ಕಳೆದ ಕೆಲವು ದಿನಗಳಿಂದ ಆರೋಪಿಸುತ್ತಿದ್ದಾರೆ.

“ನೆಗೆಟಿವ್ ವರದಿಯಿಲ್ಲದೆ ಬಂಗಾಳದಲ್ಲಿ ಹೊರಗಿನವರಿಗೆ ಅವಕಾಶ ನೀಡದಂತೆ ನಾವು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ. ಪ್ರಧಾನಿ ಮೋದಿಯವರಿಗೆ ರಾಜ್ಯಕ್ಕೆ ಸ್ವಾಗತವಿದೆ. ಆದರೆ ಅವರು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಜನರನ್ನು ಏಕೆ ಕರೆತರಬೇಕು?” ಎಂದು ಪ್ರಶ್ನಿಸಿದ್ದಾರೆ.

“ಕೊರೊನಾ ಸೋಂಕನ್ನು ಬಂಗಾಳದಲ್ಲಿ ಹರಡಬೇಡಿ, ನರೇಂದ್ರ ಮೋದಿಯವರೇ, ನಾವು ನಿಮ್ಮನ್ನು ಪದೇ ಪದೇ ಒತ್ತಾಯಿಸುತ್ತಿದ್ದೇವೆ. ನೀವು ರಾಜಕೀಯವನ್ನು ಹೊರತುಪಡಿಸಿ ಬೇರೆ ಏನನ್ನೂ ಮಾಡಿಲ್ಲ” ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಕೊರೊನಾ ಉಲ್ಬಣ ಹಿನ್ನೆಲೆ ಉಳಿದ ಎಲ್ಲಾ ಹಂತದ ವಿಧಾನಸಭಾ ಚುನಾವಣೆಯನ್ನು ಒಂದೇ ಸಮಯದಲ್ಲಿ ನಡೆಸಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದರೆ ಅದು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...