Homeಮುಖಪುಟಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

- Advertisement -
- Advertisement -

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ತೈಲ ಮಾರಾಟ ಕಂಪನಿಗಳು (ಒಎಂಸಿಗಳು) ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 14-16 ಪೈಸೆ ಕಡಿತಗೊಳಿಸಿದವು. ಕಳೆದ 15 ದಿನಗಳಲ್ಲಿ ದರಗಳಲ್ಲಿ ಯಾವ ಬದಲಾವಣೆಯನ್ನೂ ಮಾಡಿರಲಿಲ್ಲ. ಆದರೆ ಚುನಾವಣೆಯ ನಂತರ ಮತ್ತೆ ಪೆಟ್ರೋಲ್-ಡಿಸೇಲ್ ದರಗಳು ಏರುಗತಿಯಲ್ಲೇ ಇರಲಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಚುನಾವಣೆಗೂ ಪೆಟ್ರೋಲ್-ಡಿಸೇಲ್ ದರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಂಪನಿಗಳು ಹೇಳುತ್ತವಾದರೂ ಪ್ರತಿ ಪ್ರಮುಖ ಚುನಾವಣೆಯಲ್ಲಿ ದರ ಸ್ಥಿರವಾಗಿರುವುದನ್ನು ಅಥವಾ ಅಲ್ಪ ಇಳಿಕೆಯಾಗುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತ ಬಂದಿದ್ದೇವೆ. ಚುನಾವಣೆಯ ಸಮಯದಲ್ಲಿ ಬೆಲೆ ಸ್ಥಗಿತದ ಪರಿಣಾಮವಾಗಿ ಚುನಾವಣೆ ಮುಗಿದ ನಂತರ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚಿನ ಬೆಲೆ ನೀಡಬೇಕಾಗಿರುವುದನ್ನು ಇತಿಹಾಸ ತೋರಿಸಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯ ಸಮಯದಲ್ಲಿ ಇಂಧನ ಬೆಲೆಗಳು ಏಕೆ ಕಡಿಮೆ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲು ತೈಲ ಮಾರಾಟ ಕಂಪನಿಗಳು ಮುಕ್ತವಾಗಿದ್ದರೂ ಕೂಡ ಅವು ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸುತ್ತವೆ ಅಥವಾ ಇಂಧನ ಬೆಲೆಗಳು ರಾಜಕೀಯ ವಿಷಯವಾಗಿ ಪರಿಣಮಿಸುವುದರಿಂದ ಚುನಾವಣೆಗಳ ಸಮಯದಲ್ಲಿ ಅವುಗಳನ್ನು ಸ್ಥಿರವಾಗಿ ಇಡುತ್ತವೆ. ಇದು ಸಹಜವಾಗಿ ಕೇಂದ್ರದಲ್ಲಿ ಆಳುವ ಪಕ್ಷದ ಹಿತಾಸಕ್ತಿ ಕಾಪಾಡುವುದೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ಇಲ್ಲಿ ಇಂಧನ ದರ ಇರುತ್ತವೆ ಎಂಬುದು ಇತ್ತೀಚಿನ ತಿಂಗಳುಗಳಲ್ಲಿ ಹುಸಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ಹೊರೆ ಮಾತ್ರ ಸ್ಥಿರವಾಗಿ ಇದ್ದೇ ಇದೆ.

ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಏರಿಳಿತವಾದರೂ ಕೂಡ ಇತ್ತೀಚಿನ 47 ದಿನಗಳ ಅವಧಿಯಲ್ಲಿ ಕೇವಲ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಚುನಾವಣೆ ಘೋಷಣೆಯಾದ ಪರಿಣಾಮ ಈ ಪ್ರಕ್ರಿಯೆ ನಡೆದಿದೆ ಎಂದು ತಜ್ಞರು ಹೇಳುತ್ತಾರೆ.

ಚುನಾವಣೆಯ ನಂತರ ಹೇಗೆ ಬದಲಾಗುತ್ತವೆ?

ಚುನಾವಣೆ ನಂತರ ತೈಲ ಮಾರಾಟ ಕಂಪನಿಗಳು ತಮ್ಮ ಮಾರುಕಟ್ಟೆ ಮಾರ್ಜಿನ್‌ಗಳನ್ನು ಸಾಮಾನ್ಯ ಮಟ್ಟಕ್ಕೆ ಪುನಃಸ್ಥಾಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆಯ ಯಾವುದೇ ಕುಸಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸಲು ತೈಲ ಮಾರಾಟ ಕಂಪನಿಗಳು ನಿಧಾನವಾಗಿರುವುದರಿಂದ ಚುನಾವಣೆ ನಂತರ ಗ್ರಾಹಕರು ಹೆಚ್ಚು ಪಾವತಿಸಬೇಕಾಗಬಹುದು ಎಂದು ತಜ್ಞರು ಹೇಳುತ್ತಾರೆ.

ತೈಲ ಮಾರಾಟ ಕಂಪನಿಗಳು ಮತ್ತು ಚುನಾವಣೆ

ಚುನಾವಣೆಯ ಸಮಯದಲ್ಲಿ ಹೂಡಿಕೆದಾರರು ಇಂತಹ ಕ್ರಮಗಳನ್ನು ನಿರೀಕ್ಷಿಸುತ್ತಾರೆ ಮತ್ತು ನಂತರದ ಅವಧಿಯಲ್ಲಿ ಮರಳಿ ಪ್ರಮಾಣಿತ ಮಾರ್ಜಿನ್‌ಗಳಿಗೆ ಹಿಂತಿರುಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆಬ್ರವರಿ 27 ರ ಆರಂಭದಿಂದ ಒಎಂಸಿಗಳು ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿದಾಗ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನ ಷೇರಿನ ಬೆಲೆ ಶೇಕಡಾ 8 ರಷ್ಟು ಕುಸಿದಿದ್ದರೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಷೇರಿನ ಬೆಲೆ ಶೇ. 10 ಕುಸಿದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಶೇ 1.4 ರಷ್ಟು ಕುಸಿದಿದೆ.
ಅಂತಹ ಪ್ರಕ್ರಿಯೆಗಳು ಒಎಂಸಿಗಳ ದೀರ್ಘಕಾಲೀನ ಮೌಲ್ಯಮಾಪನಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಮುಖ್ಯವಾಗಿ ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಯ ಮೇಲೆ ಇದರ ಪರಿಣಾಮ ಹೆಚ್ಚು ಎನ್ನಲಾಗಿದೆ.

“ರಾಜಕೀಯವಾಗಿ ಲಾಭದಾಯಕವಾದಾಗಲೆಲ್ಲಾ ಸರ್ಕಾರವು ನಿಮ್ಮ ಮಾರ್ಕೆಟಿಂಗ್ ಮಾರ್ಜಿನ್‌ಗಳನ್ನು ಕಡಿತಗೊಳಿಸಿದಾಗ ಯಾರಾದರೂ ಹೆಚ್ಚಿನ ಮೌಲ್ಯಮಾಪನವನ್ನು (ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಗೆ) ಏಕೆ ನೀಡುತ್ತಾರೆ ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಖಾಸಗೀಕರಣದ ನಂತರವೂ, ಉಳಿದ ಸರ್ಕಾರಿ ಸ್ವಾಮ್ಯದ ರಿಫೈನರ್‌ಗಳು – ಐಒಸಿಎಲ್ ಮತ್ತು ಎಚ್‌ಪಿಸಿಎಲ್- ಚುನಾವಣೆಯ ಸಮಯದಲ್ಲಿ ಬೆಲೆಗಳನ್ನು ಕಡಿತಗೊಳಿಸಿದರೆ, ಬಿಪಿಸಿಎಲ್ ಕೂಡ ಆ ಬೆಲೆಗಳೊಂದಿಗೆ ಹೊಂದಿಕೆಯಾಗಬೇಕಾಗುತ್ತದೆ.


ಇದನ್ನೂ ಓದಿ: ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...