Homeಮುಖಪುಟಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

- Advertisement -
- Advertisement -

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ತೈಲ ಮಾರಾಟ ಕಂಪನಿಗಳು (ಒಎಂಸಿಗಳು) ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 14-16 ಪೈಸೆ ಕಡಿತಗೊಳಿಸಿದವು. ಕಳೆದ 15 ದಿನಗಳಲ್ಲಿ ದರಗಳಲ್ಲಿ ಯಾವ ಬದಲಾವಣೆಯನ್ನೂ ಮಾಡಿರಲಿಲ್ಲ. ಆದರೆ ಚುನಾವಣೆಯ ನಂತರ ಮತ್ತೆ ಪೆಟ್ರೋಲ್-ಡಿಸೇಲ್ ದರಗಳು ಏರುಗತಿಯಲ್ಲೇ ಇರಲಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಚುನಾವಣೆಗೂ ಪೆಟ್ರೋಲ್-ಡಿಸೇಲ್ ದರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಂಪನಿಗಳು ಹೇಳುತ್ತವಾದರೂ ಪ್ರತಿ ಪ್ರಮುಖ ಚುನಾವಣೆಯಲ್ಲಿ ದರ ಸ್ಥಿರವಾಗಿರುವುದನ್ನು ಅಥವಾ ಅಲ್ಪ ಇಳಿಕೆಯಾಗುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತ ಬಂದಿದ್ದೇವೆ. ಚುನಾವಣೆಯ ಸಮಯದಲ್ಲಿ ಬೆಲೆ ಸ್ಥಗಿತದ ಪರಿಣಾಮವಾಗಿ ಚುನಾವಣೆ ಮುಗಿದ ನಂತರ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚಿನ ಬೆಲೆ ನೀಡಬೇಕಾಗಿರುವುದನ್ನು ಇತಿಹಾಸ ತೋರಿಸಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯ ಸಮಯದಲ್ಲಿ ಇಂಧನ ಬೆಲೆಗಳು ಏಕೆ ಕಡಿಮೆ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲು ತೈಲ ಮಾರಾಟ ಕಂಪನಿಗಳು ಮುಕ್ತವಾಗಿದ್ದರೂ ಕೂಡ ಅವು ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸುತ್ತವೆ ಅಥವಾ ಇಂಧನ ಬೆಲೆಗಳು ರಾಜಕೀಯ ವಿಷಯವಾಗಿ ಪರಿಣಮಿಸುವುದರಿಂದ ಚುನಾವಣೆಗಳ ಸಮಯದಲ್ಲಿ ಅವುಗಳನ್ನು ಸ್ಥಿರವಾಗಿ ಇಡುತ್ತವೆ. ಇದು ಸಹಜವಾಗಿ ಕೇಂದ್ರದಲ್ಲಿ ಆಳುವ ಪಕ್ಷದ ಹಿತಾಸಕ್ತಿ ಕಾಪಾಡುವುದೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ಇಲ್ಲಿ ಇಂಧನ ದರ ಇರುತ್ತವೆ ಎಂಬುದು ಇತ್ತೀಚಿನ ತಿಂಗಳುಗಳಲ್ಲಿ ಹುಸಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ಹೊರೆ ಮಾತ್ರ ಸ್ಥಿರವಾಗಿ ಇದ್ದೇ ಇದೆ.

ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಏರಿಳಿತವಾದರೂ ಕೂಡ ಇತ್ತೀಚಿನ 47 ದಿನಗಳ ಅವಧಿಯಲ್ಲಿ ಕೇವಲ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಚುನಾವಣೆ ಘೋಷಣೆಯಾದ ಪರಿಣಾಮ ಈ ಪ್ರಕ್ರಿಯೆ ನಡೆದಿದೆ ಎಂದು ತಜ್ಞರು ಹೇಳುತ್ತಾರೆ.

ಚುನಾವಣೆಯ ನಂತರ ಹೇಗೆ ಬದಲಾಗುತ್ತವೆ?

ಚುನಾವಣೆ ನಂತರ ತೈಲ ಮಾರಾಟ ಕಂಪನಿಗಳು ತಮ್ಮ ಮಾರುಕಟ್ಟೆ ಮಾರ್ಜಿನ್‌ಗಳನ್ನು ಸಾಮಾನ್ಯ ಮಟ್ಟಕ್ಕೆ ಪುನಃಸ್ಥಾಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆಯ ಯಾವುದೇ ಕುಸಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸಲು ತೈಲ ಮಾರಾಟ ಕಂಪನಿಗಳು ನಿಧಾನವಾಗಿರುವುದರಿಂದ ಚುನಾವಣೆ ನಂತರ ಗ್ರಾಹಕರು ಹೆಚ್ಚು ಪಾವತಿಸಬೇಕಾಗಬಹುದು ಎಂದು ತಜ್ಞರು ಹೇಳುತ್ತಾರೆ.

ತೈಲ ಮಾರಾಟ ಕಂಪನಿಗಳು ಮತ್ತು ಚುನಾವಣೆ

ಚುನಾವಣೆಯ ಸಮಯದಲ್ಲಿ ಹೂಡಿಕೆದಾರರು ಇಂತಹ ಕ್ರಮಗಳನ್ನು ನಿರೀಕ್ಷಿಸುತ್ತಾರೆ ಮತ್ತು ನಂತರದ ಅವಧಿಯಲ್ಲಿ ಮರಳಿ ಪ್ರಮಾಣಿತ ಮಾರ್ಜಿನ್‌ಗಳಿಗೆ ಹಿಂತಿರುಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆಬ್ರವರಿ 27 ರ ಆರಂಭದಿಂದ ಒಎಂಸಿಗಳು ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿದಾಗ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನ ಷೇರಿನ ಬೆಲೆ ಶೇಕಡಾ 8 ರಷ್ಟು ಕುಸಿದಿದ್ದರೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಷೇರಿನ ಬೆಲೆ ಶೇ. 10 ಕುಸಿದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಶೇ 1.4 ರಷ್ಟು ಕುಸಿದಿದೆ.
ಅಂತಹ ಪ್ರಕ್ರಿಯೆಗಳು ಒಎಂಸಿಗಳ ದೀರ್ಘಕಾಲೀನ ಮೌಲ್ಯಮಾಪನಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಮುಖ್ಯವಾಗಿ ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಯ ಮೇಲೆ ಇದರ ಪರಿಣಾಮ ಹೆಚ್ಚು ಎನ್ನಲಾಗಿದೆ.

“ರಾಜಕೀಯವಾಗಿ ಲಾಭದಾಯಕವಾದಾಗಲೆಲ್ಲಾ ಸರ್ಕಾರವು ನಿಮ್ಮ ಮಾರ್ಕೆಟಿಂಗ್ ಮಾರ್ಜಿನ್‌ಗಳನ್ನು ಕಡಿತಗೊಳಿಸಿದಾಗ ಯಾರಾದರೂ ಹೆಚ್ಚಿನ ಮೌಲ್ಯಮಾಪನವನ್ನು (ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಗೆ) ಏಕೆ ನೀಡುತ್ತಾರೆ ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಖಾಸಗೀಕರಣದ ನಂತರವೂ, ಉಳಿದ ಸರ್ಕಾರಿ ಸ್ವಾಮ್ಯದ ರಿಫೈನರ್‌ಗಳು – ಐಒಸಿಎಲ್ ಮತ್ತು ಎಚ್‌ಪಿಸಿಎಲ್- ಚುನಾವಣೆಯ ಸಮಯದಲ್ಲಿ ಬೆಲೆಗಳನ್ನು ಕಡಿತಗೊಳಿಸಿದರೆ, ಬಿಪಿಸಿಎಲ್ ಕೂಡ ಆ ಬೆಲೆಗಳೊಂದಿಗೆ ಹೊಂದಿಕೆಯಾಗಬೇಕಾಗುತ್ತದೆ.


ಇದನ್ನೂ ಓದಿ: ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...