Homeಮುಖಪುಟಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

- Advertisement -
- Advertisement -

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ತೈಲ ಮಾರಾಟ ಕಂಪನಿಗಳು (ಒಎಂಸಿಗಳು) ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 14-16 ಪೈಸೆ ಕಡಿತಗೊಳಿಸಿದವು. ಕಳೆದ 15 ದಿನಗಳಲ್ಲಿ ದರಗಳಲ್ಲಿ ಯಾವ ಬದಲಾವಣೆಯನ್ನೂ ಮಾಡಿರಲಿಲ್ಲ. ಆದರೆ ಚುನಾವಣೆಯ ನಂತರ ಮತ್ತೆ ಪೆಟ್ರೋಲ್-ಡಿಸೇಲ್ ದರಗಳು ಏರುಗತಿಯಲ್ಲೇ ಇರಲಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಚುನಾವಣೆಗೂ ಪೆಟ್ರೋಲ್-ಡಿಸೇಲ್ ದರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಂಪನಿಗಳು ಹೇಳುತ್ತವಾದರೂ ಪ್ರತಿ ಪ್ರಮುಖ ಚುನಾವಣೆಯಲ್ಲಿ ದರ ಸ್ಥಿರವಾಗಿರುವುದನ್ನು ಅಥವಾ ಅಲ್ಪ ಇಳಿಕೆಯಾಗುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತ ಬಂದಿದ್ದೇವೆ. ಚುನಾವಣೆಯ ಸಮಯದಲ್ಲಿ ಬೆಲೆ ಸ್ಥಗಿತದ ಪರಿಣಾಮವಾಗಿ ಚುನಾವಣೆ ಮುಗಿದ ನಂತರ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚಿನ ಬೆಲೆ ನೀಡಬೇಕಾಗಿರುವುದನ್ನು ಇತಿಹಾಸ ತೋರಿಸಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯ ಸಮಯದಲ್ಲಿ ಇಂಧನ ಬೆಲೆಗಳು ಏಕೆ ಕಡಿಮೆ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲು ತೈಲ ಮಾರಾಟ ಕಂಪನಿಗಳು ಮುಕ್ತವಾಗಿದ್ದರೂ ಕೂಡ ಅವು ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸುತ್ತವೆ ಅಥವಾ ಇಂಧನ ಬೆಲೆಗಳು ರಾಜಕೀಯ ವಿಷಯವಾಗಿ ಪರಿಣಮಿಸುವುದರಿಂದ ಚುನಾವಣೆಗಳ ಸಮಯದಲ್ಲಿ ಅವುಗಳನ್ನು ಸ್ಥಿರವಾಗಿ ಇಡುತ್ತವೆ. ಇದು ಸಹಜವಾಗಿ ಕೇಂದ್ರದಲ್ಲಿ ಆಳುವ ಪಕ್ಷದ ಹಿತಾಸಕ್ತಿ ಕಾಪಾಡುವುದೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ಇಲ್ಲಿ ಇಂಧನ ದರ ಇರುತ್ತವೆ ಎಂಬುದು ಇತ್ತೀಚಿನ ತಿಂಗಳುಗಳಲ್ಲಿ ಹುಸಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ಹೊರೆ ಮಾತ್ರ ಸ್ಥಿರವಾಗಿ ಇದ್ದೇ ಇದೆ.

ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಏರಿಳಿತವಾದರೂ ಕೂಡ ಇತ್ತೀಚಿನ 47 ದಿನಗಳ ಅವಧಿಯಲ್ಲಿ ಕೇವಲ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಚುನಾವಣೆ ಘೋಷಣೆಯಾದ ಪರಿಣಾಮ ಈ ಪ್ರಕ್ರಿಯೆ ನಡೆದಿದೆ ಎಂದು ತಜ್ಞರು ಹೇಳುತ್ತಾರೆ.

ಚುನಾವಣೆಯ ನಂತರ ಹೇಗೆ ಬದಲಾಗುತ್ತವೆ?

ಚುನಾವಣೆ ನಂತರ ತೈಲ ಮಾರಾಟ ಕಂಪನಿಗಳು ತಮ್ಮ ಮಾರುಕಟ್ಟೆ ಮಾರ್ಜಿನ್‌ಗಳನ್ನು ಸಾಮಾನ್ಯ ಮಟ್ಟಕ್ಕೆ ಪುನಃಸ್ಥಾಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆಯ ಯಾವುದೇ ಕುಸಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸಲು ತೈಲ ಮಾರಾಟ ಕಂಪನಿಗಳು ನಿಧಾನವಾಗಿರುವುದರಿಂದ ಚುನಾವಣೆ ನಂತರ ಗ್ರಾಹಕರು ಹೆಚ್ಚು ಪಾವತಿಸಬೇಕಾಗಬಹುದು ಎಂದು ತಜ್ಞರು ಹೇಳುತ್ತಾರೆ.

ತೈಲ ಮಾರಾಟ ಕಂಪನಿಗಳು ಮತ್ತು ಚುನಾವಣೆ

ಚುನಾವಣೆಯ ಸಮಯದಲ್ಲಿ ಹೂಡಿಕೆದಾರರು ಇಂತಹ ಕ್ರಮಗಳನ್ನು ನಿರೀಕ್ಷಿಸುತ್ತಾರೆ ಮತ್ತು ನಂತರದ ಅವಧಿಯಲ್ಲಿ ಮರಳಿ ಪ್ರಮಾಣಿತ ಮಾರ್ಜಿನ್‌ಗಳಿಗೆ ಹಿಂತಿರುಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆಬ್ರವರಿ 27 ರ ಆರಂಭದಿಂದ ಒಎಂಸಿಗಳು ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿದಾಗ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನ ಷೇರಿನ ಬೆಲೆ ಶೇಕಡಾ 8 ರಷ್ಟು ಕುಸಿದಿದ್ದರೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಷೇರಿನ ಬೆಲೆ ಶೇ. 10 ಕುಸಿದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಶೇ 1.4 ರಷ್ಟು ಕುಸಿದಿದೆ.
ಅಂತಹ ಪ್ರಕ್ರಿಯೆಗಳು ಒಎಂಸಿಗಳ ದೀರ್ಘಕಾಲೀನ ಮೌಲ್ಯಮಾಪನಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಮುಖ್ಯವಾಗಿ ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಯ ಮೇಲೆ ಇದರ ಪರಿಣಾಮ ಹೆಚ್ಚು ಎನ್ನಲಾಗಿದೆ.

“ರಾಜಕೀಯವಾಗಿ ಲಾಭದಾಯಕವಾದಾಗಲೆಲ್ಲಾ ಸರ್ಕಾರವು ನಿಮ್ಮ ಮಾರ್ಕೆಟಿಂಗ್ ಮಾರ್ಜಿನ್‌ಗಳನ್ನು ಕಡಿತಗೊಳಿಸಿದಾಗ ಯಾರಾದರೂ ಹೆಚ್ಚಿನ ಮೌಲ್ಯಮಾಪನವನ್ನು (ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಗೆ) ಏಕೆ ನೀಡುತ್ತಾರೆ ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಖಾಸಗೀಕರಣದ ನಂತರವೂ, ಉಳಿದ ಸರ್ಕಾರಿ ಸ್ವಾಮ್ಯದ ರಿಫೈನರ್‌ಗಳು – ಐಒಸಿಎಲ್ ಮತ್ತು ಎಚ್‌ಪಿಸಿಎಲ್- ಚುನಾವಣೆಯ ಸಮಯದಲ್ಲಿ ಬೆಲೆಗಳನ್ನು ಕಡಿತಗೊಳಿಸಿದರೆ, ಬಿಪಿಸಿಎಲ್ ಕೂಡ ಆ ಬೆಲೆಗಳೊಂದಿಗೆ ಹೊಂದಿಕೆಯಾಗಬೇಕಾಗುತ್ತದೆ.


ಇದನ್ನೂ ಓದಿ: ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...