Homeಮುಖಪುಟರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಭಾರತವು ಸಿಕ್ಕಿಕೊಂಡ ಸಂದರ್ಭದಲ್ಲಿ ಗೋದಿ ಮಾಧ್ಯಮಗಳು ಇನ್ನೂ ಹಿಂದೂ ಮುಸ್ಲಿಂ ಎನ್ನುತ್ತ ಆಳುವವರ ಅಭಿಲಾಷೆಗಳನ್ನು ಪೂರೈಸುತ್ತಿವೆ. ನಮ್ಮ ಸಿನಿಕತೆಯ ಹೊರತಾಗಿಯೂ, ಮಾನವೀಯತೆಯ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುವ ಕೆಲವು ನಿದರ್ಶನಗಳು ಸಂಭವಿಸುತ್ತವೆ.

ರಾಜಸ್ಥಾನದ ಉದಯಪುರದ 32 ವರ್ಷದ ಅಕೀಲ್ ಮನ್ಸೂರಿ, ಪವಿತ್ರ ರಂಜಾನ್ ತಿಂಗಳ ತನ್ನ ಮೊದಲ ರೋಜಾವನ್ನು ಮುರಿದು ಇಬ್ಬರು ಹಿಂದೂ ಮಹಿಳೆಯರಿಗೆ ಪ್ಲಾಸ್ಮಾ ದಾನ ಮಾಡಿ ಅವರ ಜೀವ ಉಳಿಸಿದ್ದಾರೆ. ಮನ್ಸೂರಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊರೋನಾದಿಂದ ಚೇತರಿಸಿಕೊಂಡಿದ್ದರು.

ಸೋಶಿಯಲ್ ಮೀಡಿಯಾ ನೆಟ್‌ವರ್ಕ್‌ಗಳು ಮತ್ತು ರಕ್ತದಾನ ಗುಂಪುಗಳ ಮೂಲಕ, ಕೊರೋನಾ ಸೋಂಕಿಗೆ ಒಳಗಾದ ಇಬ್ಬರು ಮಹಿಳೆಯರ ಬಗ್ಗೆ ಮನ್ಸೂರಿಗೆ ಗೊತ್ತಾಯಿತು. ಆ ಮಹಿಳೆಯರು ಆಮ್ಲಜನಕದ ಬೆಂಬಲದಲ್ಲಿದ್ದರು ಮತ್ತು ಅವರಿಗೆ ತುರ್ತಾಗಿ ಎ+ ಪ್ಲಾಸ್ಮಾ ಅಗತ್ಯವಿತ್ತು.
ಉದಯಪುರದ ಪೆಸಿಫಿಕ್ ಆಸ್ಪತ್ರೆಯ ವೈದ್ಯರು ಪ್ಲಾಸ್ಮಾ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದರೂ ವ್ಯರ್ಥವಾಯಿತು. ಈ ಸಮಯದಲ್ಲಿಯೇ ರಕ್ತ ಯುವ ವಾಹಿನಿ (ಯುವ ರಕ್ತದಾನ ಗುಂಪು)ಗೆ ಸುದ್ದಿ ಸಿಕ್ಕಿತು. ಅಕೀಲ್ ಈ ಹಿಂದೆ 17 ಬಾರಿ ದಾನ ಮಾಡಿದ್ದರಿಂದ ಅವರನ್ನು ಸಂಪರ್ಕಿಸಿದರು. ಅಕೀಲ್ ಮನ್ಸೂರಿ ಅದೇ ರಕ್ತದ ಗುಂಪನ್ನು ಹೊಂದಿದ್ದರು.

“ಸಂದೇಶವನ್ನು ನೋಡಿದ ಕೂಡಲೇ ನಾನು ಆಸ್ಪತ್ರೆಗೆ ಧಾವಿಸಿ ನನ್ನ ಪ್ಲಾಸ್ಮಾ ದಾನಕ್ಕಾಗಿ ಸ್ವಯಂಪ್ರೇರಿತನಾಗಿ ಸಜ್ಜಾದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್ -19ನಿಂದ ಚೇತರಿಸಿಕೊಂಡ ನಂತರ ನಾನು ಈ ಹಿಂದೆ ಪ್ಲಾಸ್ಮಾ ದಾನ ಮಾಡಿದ್ದರಿಂದ, ಆ ಕಾರ್ಯವಿಧಾನ ನನಗೆ ತಿಳಿದಿತ್ತು” ಎಂದು ಮನ್ಸೂರಿ ಹೇಳಿದ್ದನ್ನು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಆಸ್ಪತ್ರೆಯಲ್ಲಿಯೇ ಮನ್ಸೂರಿ ಉಪವಾಸ ಮುರಿಯಬೇಕಾಯಿತು. “ವೈದ್ಯರು ನನ್ನನ್ನು ತಯಾರಾಗಲು ಕೇಳಿದಾಗ, ಅವರು ನನ್ನನ್ನು ಏನಾದರೂ ತಿನ್ನಲು ಕೇಳಿದ್ದರು. ಅದಕ್ಕಾಗಿಯೇ ನಾನು ನನ್ನ ರೋಜಾವನ್ನು ಮುರಿಯಬೇಕಾಯಿತು ಮತ್ತು ಆಸ್ಪತ್ರೆಯವರಿಂದಲೇ ಅಲ್ಪ ಆಹಾರ ಸೇವಿಸಿ ನನ್ನ ರಕ್ತವನ್ನು ದಾನ ಮಾಡಿದೆ’ ಎನ್ನುತ್ತಾರೆ ಮನ್ಸೂರಿ. ಪ್ರಶಂಸೆಯ ಮಾತುಗಳು ಬಂದಾಗ ನಾನೇನೂ ಅಸಾಧಾರಣವಾದುದನ್ನು ಮಾಡಿಲ್ಲ ಎಂದು ಅವರು ಹೇಳುತ್ತಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಕೀಲ್, ಖಾಲಿ ಹೊಟ್ಟೆಯಲ್ಲಿದ್ದರೆ ಪ್ಲಾಸ್ಮಾ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ವೈದ್ಯರು ಹೇಳಿದರು. ಹಾಗಾಗಿ ನನ್ನ ರೋಜಾವನ್ನು ಮುರಿದು ಆಹಾರವನ್ನು ಸೇವಿಸಿದ ನಂತರ ಪ್ಲಾಸ್ಮಾವನ್ನು ದಾನ ಮಾಡಿದೆ ಎಂದಿದ್ದಾರೆ.

“ಇದು ಮನುಷ್ಯನಾಗಿ ನನ್ನ ಜವಾಬ್ದಾರಿಯಾಗಿದೆ ಮತ್ತು ರೋಜಾ ಮುರಿದಿದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ” ಎಂದು ಮನ್ಸೂರಿ ಹೇಳಿದರು, ಇಬ್ಬರು ಮಹಿಳೆಯರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಮನ್ಸೂರಿ ಹೇಳಿದ್ದಾರೆ.

ಮನ್ಸೂರಿ ಪ್ರಕಾರ, ಅವರು ತಮ್ಮ ಜೀವನದಲ್ಲಿ 17 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡಾಗಿನಿಂದ, ಅವರು ತಮ್ಮ ಪ್ಲಾಸ್ಮಾವನ್ನು ಮೂರು ಬಾರಿ ದಾನ ಮಾಡಿದ್ದಾರೆ.


ಇದನ್ನೂ ಓದಿ: ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...