Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...