Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...