Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...