Homeಕರ್ನಾಟಕಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ

ಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ

ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಮಾರ್ಗಸೂಚಿಗಳನ್ನು ಬಿಜೆಪಿ ನಾಯಕರು ಯಾಕೆ ಅನುಸರಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅಡಿಯಲ್ಲಿನ ದುರ್ಬಲವಾದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕೊರೊನಾ 2 ನೇ ಅಲೆಯ ಬಿಕ್ಕಟ್ಟು ಬಹಿರಂಗಪಡಿಸಿದೆ. ಕೊರೊನಾಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಜನರು ಅಸಹಾಯಕರಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಅವರು ಸರಣಿ ಟ್ವೀಟ್ ಮಾಡಿದ್ದು, “ಕೊರೊನಾ 1 ನೇ ಅಲೆಯಲ್ಲಿ ಭಾರತಕ್ಕೆ ಗಂಭೀರ ಪರಣಾಮ ಬೀರಿದೆ. ಆದರೂ ಸರ್ಕಾರ ಯಾವುದೇ ಪಾಠ ಕಲಿತಿಲ್ಲ. ಕೊರೊನಾ ಚಿಕಿತ್ಸೆಗೆ ವ್ಯಾಪಕವಾಗಿ ಬಳಸಲಾಗುವ ರೆಮ್‌ಡೆಸಿವಿರ್ ಲಭ್ಯವಿಲ್ಲ. ಸರ್ಕಾರವು ಔಷಧಿಗಳೊಂದಿಗೆ ಯಾಕೆ ಸಿದ್ಧವಾಗಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ

“ಕೊರೊನಾ ರೋಗಿಗಳಿಗೆ ಸಾಮಾನ್ಯ ಮತ್ತು ಐಸಿಯು ಹಾಸಿಗೆಗಳ ಕೊರತೆಯೂ ಇದೆ. ಆಮ್ಲಜನಕ ಮತ್ತು ಇತರ ಬೆಂಬಲ ವ್ಯವಸ್ಥೆಗಳಿಲ್ಲದೆ ಜನರು ಬಳಲುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸುವ ಬದಲು ಆಂತರಿಕ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಸರ್ಕಾರ ನಿರತವಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಿ ಆಸ್ಪತ್ರೆಗಳು ತುಂಬಿರುವುದರಿಂದ, ಜನರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳತ್ತ ಸಾಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಯ ಶುಲ್ಕವನ್ನು ಭರಿಸಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ. ಎಲ್ಲಾ ರೋಗಿಗಳಿಗೆ ಕೊರೊನಾ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಉಚಿತವಾಗಿ ನೀಡಿ” ಎಂದು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರನ್ನು ಅವರು ಕೋರಿದ್ದಾರೆ.

“ಬಿಜೆಪಿ ನಾಯಕರು ಚುನಾವಣೆಯ ಬಗ್ಗೆ ಮಾತ್ರ ಚಿಂತಿತರಾಗಿದ್ದು, ಆಡಳಿತದ ಬಗ್ಗೆ ಚಿಂತಿತರಾಗಿಲ್ಲ ಎಂಬುದು ನಿಜಕ್ಕೂ ದುರದೃಷ್ಟಕರ. ಬಿಜೆಪಿ ನಾಯಕರು ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಮಾರ್ಗಸೂಚಿಗಳನ್ನು ಯಾಕೆ ಅನುಸರಿಸುತ್ತಿಲ್ಲ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

ವಿಡಿಯೋ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...