Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...