Homeಮುಖಪುಟ40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

40 ಶಾಸಕರ ಖರೀದಿ ವಿಚಾರ: ಮೋದಿಯವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

- Advertisement -
- Advertisement -

| ಮೋಹನ್ ದಾಸರಿ | ಆಮ್ ಆದ್ಮಿ ಪಕ್ಷ

40ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಮತ್ತು ದೀದಿಯ ಸರ್ಕಾರ ಯಾವಾಗ ಬೇಕಾದ್ರು ಬೀಳಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿಯವರು ದೇಶದ ಪ್ರಧಾನಿಯಾಗಿ ಆಪರೇಷನ್ ಕಮಲವೆಂಬ ಅನೈತಿಕ ಕಮಲದ ಬಗ್ಗೆ ಮಾತನಾಡುತ್ತಿರುವುದು ಅವರು ಕೂತಿರುವ ಕುರ್ಚಿಗೆ ಶೋಭೆ ತರುವಂತಹ ವಿಷಯವಲ್ಲ.

2008ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುವಾಗ ಆಪರೇಷನ್ ಕಮಲ ಅನೈತಿಕ ಕಮಲ ಮಾಡಿ ನೂರಾರು ಕೋಟಿಗಳನ್ನು ಕೊಟ್ಟು ಶಾಸಕರನ್ನು ಕುದುರೆ ವ್ಯಾಪಾರದ ಮುಖಾಂತರ ಖರೀದಿ ಮಾಡಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದರು. ಅಂದು ಇಡೀ ದೇಶವೇ ಕರ್ನಾಟಕದ ರಾಜಕಾರಣದತ್ತ ನೋಡುವ ಹಾಗೆ ಮಾಡಿತು. ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿಯವರು ಯಾವ ಯಾವ ರೀತಿ ಎಷ್ಟು ಶಾಸಕರನ್ನು ಕುದುರೆ ವ್ಯಾಪಾರ ಮಾಡಿದರು ಎನ್ನುವುದು ಜಗದ್ ಜಾಹೀರಾಗಿದೆ. ನಂತರ ಬಿಜೆಪಿ ಸರ್ಕಾರದ 5 ವರ್ಷಗಳು ಯಾವ ರೀತಿ ಇತ್ತು, ಯಾರ್ಯಾರು ಜೈಲಿಗೆ ಹೋದರು, ಎಷ್ಟು ಮಂದಿ ಮುಖ್ಯಮಂತ್ರಿಗಳಾದರೆಂಬುದನ್ನು ಕರ್ನಾಟಕದ ಜನತೆ ಮರೆಯಲಾರದ ಇತಿಹಾಸ.

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಕ್ತಿ ಅಷ್ಟೇನು ಇಲ್ಲ. ಬರೀ 3 ಸಂಸದರನ್ನು ಹೊಂದಿರುವ ಪಕ್ಷ, ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ ಐಟಿ ಇಡಿಗಳನ್ನೂ ದುರುಪಯೋಗ ಪಡಿಸಿಕೊಂಡು ಶಾರದಾ ಚಿಟ್ ಫಂಡ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ಸಿಬಿಐಗೆ ಸಿಕ್ಕಿಕೊಂಡಿದ್ದ ಮುಕುಲ್ ರಾಯ್‍ರನ್ನು ಬಿಜೆಪಿಗೆ ಇಂಪೋರ್ಟ್ ಮಾಡಿಕೊಂಡಿದೆ. ಅವರ ಮೇಲಿದ್ದ ಎಲ್ಲ ಕೇಸ್‍ಗಳನ್ನೂ ತೆಗೆದು ಹಾಕಿ ಗಂಗೆಯಲ್ಲಿ ಮುಳುಗಿ ಕ್ಲೀನ್ ಮಾಡಿಸಿ ಅವರನ್ನು ಮುಂದಿಟ್ಟುಕೊಂಡು ಈ ಅನೈತಿಕ ಕಮಲಕ್ಕೆ ಕೈ ಹಾಕಿದ್ದಾರೆ. ಇದೇ ರೀತಿಯಲ್ಲಿ ಮುಕುಲ್ ರಾಯ್‍ರ ಆತ್ಮೀಯರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾರತೀ ಘೋಷ್‍ರವರನ್ನು BJP ಗೆ ಸೇರಿಸಿಕೊಂಡಿದ್ದಾರೆ. ಅವರ ಬಗ್ಗೆ ಹೇಳುವುದಾದರೆ 300 ಕೋಟಿ ರೂಗಳಿಗೂ ಹೆಚ್ಚು ಭೂ ಹಗರಣದಲ್ಲಿ ಸಿಕ್ಕಿ ಹಾಕಿ ಕೊಂಡು 2 FIR ಹಾಕಿಸಿಕೊಂಡು ಸುಮಾರು ತಿಂಗಳುಗಳು ತಲೆಮರೆಸಿಕೊಂಡಿದ್ದರು. ಈ ತರಹದವರನ್ನು ಮುಂದಿಟ್ಟುಕೊಂಡು ಬಂಗಾಳದಲ್ಲಿ ಸರ್ಕಾರ ರಚಿಸುವಲ್ಲಿ ಕೈ ಹಾಕಿದ್ದಾರೆ ಅದನ್ನು ಮೋದಿಯವರೇ ನೇರವಾಗಿ ಹೇಳುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆಗಳ ಪ್ರಚಾರ ನೋಡುತ್ತಿದ್ದರೆ ಮೋದಿಯವರು ಪುಲ್ವಾಮಾ ಬಾಲಕೋಟ್ ದಾಳಿ, ಸೈನಿಕರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡುತ್ತಿದ್ದಾರೆ. ಐದು ವರ್ಷಗಳ ನಂತರ ತಾವು ಮಾಡಿರುವ ಕೆಲಸಗಳ ಬಗ್ಗೆ ಯಾವೊಂದು ಭಾಷಣದಲ್ಲೂ ಮಾತನಾಡುತ್ತಿಲ್ಲ, ಮೋದಿಯವರ ಸಾಧನೆಗಳೆಂದರೆ 1. ನೋಟು ರದ್ದತಿ ಮಾಡಿ ಇಡೀ ದೇಶವನ್ನೇ ಬ್ಯಾಂಕುಗಳ ಸುತ್ತ ಸುತ್ತುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತವನ್ನು ಕೊಡುವಂತೆ ಮಾಡಿದರು, ಇದು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೇ ಅಂದರೂ ಸರಿ. 2. GST ತರಾತುರಿಯಲ್ಲಿ ಜಾರಿಗೆ ತಂದು ದೇಶದ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಸಾವಿರಾರು ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನೂ ಮುಚ್ಚುವಂತೆ ಮಾಡಿ ದೇಶದಲ್ಲಿ ಲಕ್ಷಾನುಗಟ್ಟಲೆ ಕೆಲಸಗಳನ್ನು ಕಸಿದುಕೊಂಡರು. 3. ಫಸಲ್ ಬಿಮಾ ಯೋಜನೆ ಮುಖಾಂತರ ಪ್ರೈವೇಟ್ ಇನ್ಶೂರೆನ್ಸ್ ಕಂಪನಿಗಳಿಗೆ ಲಾಭ ಬರುವಂತೆ ಮಾಡಿ ದೇಶದ ರೈತರ ಹೊಟ್ಟೆಯ ಮೇಲೆ ಹೊಡೆದರು. 4. ಪ್ರತಿ ವರ್ಷ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಅಂತ ಹೇಳಿ 5 ವರ್ಷಗಳ ನಂತರ ಹೊಸ ಉದ್ಯೋಗವಿರಲಿ ಇರುವ ಉದ್ಯೋಗಗಳಲ್ಲಿ ಸುಮಾರು 3.2 ಕೋಟಿಗಳಷ್ಟು ಉದ್ಯೋಗಳನ್ನು ಕಳೆದುಕೊಳ್ಳುವ ಹಾಗೆ ಮಾಡಿದರು. 5. ಮೋದಿ ಸರ್ಕಾರದ ವೈಫಲ್ಯಗಳನ್ನು ಹೇಳುತ್ತಾ ಹೋದರೆ ಪುಸ್ತಕಗಳನ್ನೇ ಬರೆಯಬಹುದು.

ಈ ರೀತಿಯ ಬರೀ ವೈಫಲ್ಯಗಳನ್ನೇ ಕೊಂಡಿರುವ ಮೋದಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಹೇಗೆ ತಾನೇ ಸಾಧ್ಯ..? ಆದ್ದರಿಂದ ಈ ರೀತಿಯ ಅನೈತಿಕ ಆಪರೇಷನ್ ಕಮಲದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...