Homeಮುಖಪುಟಕೊರೊನಾ ಪ್ರಧಾನವಾಗಿ ಹರಡುವುದು ಗಾಳಿಯ ಮೂಲಕವೇ: 10 ಪುರಾವೆ ನೀಡಿದ ತಜ್ಞರು

ಕೊರೊನಾ ಪ್ರಧಾನವಾಗಿ ಹರಡುವುದು ಗಾಳಿಯ ಮೂಲಕವೇ: 10 ಪುರಾವೆ ನೀಡಿದ ತಜ್ಞರು

- Advertisement -
- Advertisement -

ತಜ್ಞರ ತಂಡವೊಂದು ಲಭ್ಯವಿರುವ ಸಂಶೋಧನೆಗಳನ್ನು ಪರಿಷ್ಕರಣೆ ಮಾಡಿ, SARS-CoV-2 ನ ಪ್ರಾಥಮಿಕ ಪ್ರಸರಣ ಮಾರ್ಗವು ನಿಜಕ್ಕೂ ವಾಯುಗಾಮಿ (airborne) ಎಂಬುದಕ್ಕೆ ಬಲವಾದ, ಸ್ಥಿರವಾದ ಪುರಾವೆಗಳಿವೆ ಎಂದು ಮೌಲ್ಯಮಾಪನವನ್ನು ಪ್ರಕಟಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಳೆದ ವರ್ಷದಿಂದ, ಕೊರೊನಾ ವೈರಸ್ SARS-CoV-2 ಮುಖ್ಯವಾಗಿ ಗಾಳಿಯ ಮೂಲಕ ಹರಡುತ್ತದೆ ಎಂದು ಹಲವಾರು ಅಧ್ಯಯನಗಳು ಕಂಡುಹಿಡಿದವು. ವಿಶ್ವ ಆರೋಗ್ಯ ಸಂಸ್ಥೆಯಿಂದ ಧನಸಹಾಯ ಪಡೆದಿರುವ ಇತರ ಅಧ್ಯಯನಗಳು ಸಹ ನಡೆದಿವೆ, ಅವುಗಳು ಸಾಕ್ಷ್ಯ, ಆಧಾರಗಳನ್ನು ಅನಿರ್ದಿಷ್ಟವೆಂದು ಹೇಳಿದ್ದವು.

ಈಗ, ತಜ್ಞರ ಒಂದು ತಂಡವು ಲಭ್ಯವಿರುವ ಸಂಶೋಧನೆಗಳನ್ನು ಪರೀಕ್ಷಿಸಿ ಅದರ ಮೌಲ್ಯಮಾಪನವನ್ನು ದಿ ಲ್ಯಾನ್ಸೆಟ್‌ನಲ್ಲಿ ಪ್ರಕಟಿಸಿದೆ: SARS-CoV-2 ಪ್ರಾಥಮಿಕ ಪ್ರಸರಣ ಮಾರ್ಗವು ನಿಜಕ್ಕೂ ವಾಯುಗಾಮಿ (ಗಾಳಿಯ ಮೂಲಕ) ಎಂಬುದಕ್ಕೆ ಬಲವಾದ, ಸ್ಥಿರವಾದ ಪುರಾವೆಗಳಿವೆ ಎಂದು ಅದು ಪ್ರತಿಪಾದಿಸಿದೆ.

ತಜ್ಞರು ಈ ತೀರ್ಮಾನಕ್ಕೆ ಹೇಗೆ ಬಂದರು?

ಅಸ್ತಿತ್ವದಲ್ಲಿರುವ ಸಂಶೋಧನೆಗಳನ್ನು ಪರಿಶೀಲಿಸಿರುವ ಯುಕೆ, ಯುಎಸ್ ಮತ್ತು ಕೆನಡಾದ ಆರು ತಜ್ಞರು SARS-CoV-2 ಕೊರೊನಾ ಪ್ರಾಥಮಿಕವಾಗಿ ವಾಯುಗಾಮಿ ಮಾರ್ಗದ ಮೂಲಕ ಹರಡುತ್ತದೆ ಎಂಬ ಪ್ರಮೇಯವನ್ನು ಒಟ್ಟಾಗಿ ಬೆಂಬಲಿಸುವ 10 ಪುರಾವೆಗಳನ್ನು ಗುರುತಿಸಿದ್ದಾರೆ. ಅವುಗಳೆಂದರೆ

1. ಸೂಪರ್-ಸ್ಪ್ರೆಡರ್ ಘಟನೆಗಳು ಗಣನೀಯ SARS-CoV-2 ಪ್ರಸರಣಕ್ಕೆ ಕಾರಣವಾಗಿವೆ. ವಾಸ್ತವವಾಗಿ, ಅಂತಹ ಘಟನೆಗಳು ಸಾಂಕ್ರಾಮಿಕ ರೋಗದ ಪ್ರಾಥಮಿಕ ಚಾಲಕರಾಗಿರಬಹುದು. ಸಂಗೀತ ಕಚೇರಿಗಳು, ಕ್ರೂಸ್ ಹಡಗುಗಳು ಇತ್ಯಾದಿಗಳಲ್ಲಿನ ಮಾನವ ನಡವಳಿಕೆಗಳು ಮತ್ತು ಇತರ ಅಸ್ಥಿರಗಳ ವಿವರವಾದ ವಿಶ್ಲೇಷಣೆಗಳು “SARS-CoV-2 ವಾಯುಗಾಮಿ ಹರಡುವಿಕೆಗೆ ಅನುಗುಣವಾಗಿರುತ್ತವೆ, ಅದನ್ನು ಹನಿಗಳು ಅಥವಾ ಫೋಮೈಟ್‌ಗಳಿಂದ ಸಮರ್ಪಕವಾಗಿ ವಿವರಿಸಲಾಗುವುದಿಲ್ಲ” ಎಂದು ಅವರು ಬರೆದಿದ್ದಾರೆ.

2. ಅಕ್ಕಪಕ್ಕದ ಕೋಣೆಗಳಲ್ಲಿನ ಜನರ ನಡುವೆ SARS-CoV-2 ನ ದೀರ್ಘ-ವ್ಯಾಪ್ತಿಯ ಪ್ರಸರಣವನ್ನು ಕ್ವಾರಂಟೈನ್ ಹೋಟೆಲ್‌ಗಳಲ್ಲಿ ದಾಖಲಿಸಲಾಗಿದೆ. ಆದರೆ ಅವರು ಎಂದಿಗೂ ಪರಸ್ಪರ ಭೇಟಿ ಆಗಿರಲಿಲ್ಲ.

3. ರೋಗ ಲಕ್ಷಣ ಇರದ ಅಥವಾ ಇರುವ ಕೊರೊನಾ ಪೀಡಿತರ ಕೆಮ್ಮು ಅಥವಾ ಸೀನದೇ ಇರುವಾಗಲೂ ಸಂಭವಿಸುವ ಹರಡುವಿಕೆಯು ಜಾಗತಿಕವಾಗಿ ಎಲ್ಲಾ ಪ್ರಸರಣಗಳಲ್ಲಿ ಕನಿಷ್ಠ ಮೂರನೇ ಒಂದು ಭಾಗದಷ್ಟು, ಮತ್ತು ಬಹುಶಃ 59% ವರೆಗೆ ಕಾರಣವಾಗಬಹುದು. ಇದು ಕೂಡ ಗಾಳಿಯ ಮೂಲಕ ಪ್ರಸರಣದ ಸಾಧ್ಯತೆಯನ್ನು ತೋರಿಸುತ್ತದೆಯೇ ಹೊರು ಡ್ರಾಪಲೆಟ್‌ಗಳ ಮೂಲಕ ಅಲ್ಲ.

4. ಕೊರೊನಾ ಪ್ರಸಾರವು ಹೊರಾಂಗಣಕ್ಕಿಂತ ಒಳಾಂಗಣದಲ್ಲಿ ಹೆಚ್ಚಾಗಿದೆ. ಆದರೆ ಒಳಾಂಗಣ ವಾತಾಯನದಿಂದ (ವೆಂಟಿಲೇಷನ್) ಗಣನೀಯವಾಗಿ ಕಡಿಮೆಯಾಗುತ್ತದೆ. ಎರಡೂ ಅವಲೋಕನಗಳು ಪ್ರಧಾನವಾಗಿ ವಾಯುಗಾಮಿ ಪ್ರಸರಣ ಮಾರ್ಗವನ್ನು ಬೆಂಬಲಿಸುತ್ತವೆ ಎಂದು ಲೇಖಕರು ಬರೆದಿದ್ದಾರೆ.

5. ಆರೋಗ್ಯ ಸಂಸ್ಥೆಗಳಲ್ಲಿ ಹೊಸ ಸೋಂಕುಗಳನ್ನು ದಾಖಲಿಸಲಾಗಿದೆ, ಅಲ್ಲಿ ಕಟ್ಟುನಿಟ್ಟಾದ ಸಂಪರ್ಕ ಮತ್ತು ಡ್ರಾಪ್‌ಲೆಟ್ ಮುನ್ನೆಚ್ಚರಿಕೆಗಳ ಜಾರಿ ಮತ್ತು ಪಿಪಿಇ ಬಳಕೆಯನ್ನು ಹನಿಗಳಿಂದ ರಕ್ಷಿಸಲು ವಿನ್ಯಾಸಗೊಳಿಸಲಾಗಿದೆ. ಆದರೆ ಏರೋಸಾಲ್ (ಗಾಳಿ ಪ್ರಸರಣದ) ವ್ಯವಸ್ಥೆ ಇಲ್ಲ.

6. ಸಕ್ರಿಯ ಕೊರೊನಾ ಗಾಳಿಯಲ್ಲಿ ಪತ್ತೆಯಾಗಿದೆ. ಪ್ರಯೋಗಾಲಯದ ಪ್ರಯೋಗಗಳಲ್ಲಿ, ಕೊರೊನಾ 3 ಗಂಟೆಗಳವರೆಗೆ ಗಾಳಿಯಲ್ಲಿ ಸಾಂಕ್ರಾಮಿಕವಾಗಿ ಉಳಿಯಿತು.

7. ಕೋವಿಡ್ -19 ರೋಗಿಗಳಿರುವ ಆಸ್ಪತ್ರೆಗಳಲ್ಲಿ ಏರ್ ಫಿಲ್ಟರ್‌ಗಳು ಮತ್ತು ಕಟ್ಟಡದ ನಾಳಗಳಲ್ಲಿ ಕೊರೋನಾ ಅನ್ನು ಗುರುತಿಸಲಾಗಿದೆ; ಅಂತಹ ಸ್ಥಳಗಳನ್ನು ಏರೋಸಾಲ್ ಅಂದರೆ ಗಾಳಿಯಿಂದ ಮಾತ್ರ ತಲುಪಬಹುದು.

8. ಒಂದು ಪಂಜರದಲ್ಲಿ ಸೋಂಕುಯುಕ್ತ ಪ್ರಾಣಿಗಳು ಮತ್ತು ಇನ್ನೊಂದರಲ್ಲಿ ಸೋಂಕುರಹಿತ ಪ್ರಾಣಿಗಳನ್ನು ಇರಿಸಿ ಎರಡರ ನಡುವೆ ನಾಳದ ಮೂಲಕ ಗಾಳಿ ಸಂಪರ್ಕ ಏರ್ಪಡಿಸಿದಾಗ ಸೋಂಕು ಪ್ರಸಾರವಾಗಿದ್ದನ್ನು ಹಲವು ಅಧ್ಯನಗಳು ತೋರಿಸಿವೆ.

9. ವಾಯುಗಾಮಿ ಪ್ರಸರಣದ ಊಹೆಯನ್ನು ನಿರಾಕರಿಸಲು “ನಮ್ಮ ಜ್ಞಾನಕ್ಕೆ” ಯಾವುದೇ ಅಧ್ಯಯನವು ಬಲವಾದ ಅಥವಾ ಸ್ಥಿರವಾದ ಪುರಾವೆಗಳನ್ನು ಒದಗಿಸಿಲ್ಲ. ಸೋಂಕಿತ ಜನರೊಂದಿಗೆ ಗಾಳಿಯನ್ನು ಹಂಚಿಕೊಂಡಾಗ ಕೆಲವರು ಸೋಂಕನ್ನು ಪಡೆದಿಲ್ಲ, ಆದರೆ ಸಾಂಕ್ರಾಮಿಕ ವ್ಯಕ್ತಿಗಳ ನಡುವಿನ ವೈರಲ್ ಹರಡುವಿಕೆ ಪ್ರಮಾಣದಲ್ಲಿನ ವ್ಯತ್ಯಾಸ ಮತ್ತು ವಿವಿಧ ಪರಿಸರ ಪರಿಸ್ಥಿತಿಗಳು ಸೇರಿದಂತೆ ಹಲವು ಅಂಶಗಳ ಸಂಯೋಜನೆಯಿಂದ ಈ ಪರಿಸ್ಥಿತಿಯನ್ನು ವಿವರಿಸಬಹುದು.

10. ಪ್ರಸರಣದ ಇತರ ಪ್ರಬಲ ಮಾರ್ಗಗಳನ್ನು ಬೆಂಬಲಿಸಲು ಸೀಮಿತ ಪುರಾವೆಗಳಿವೆ. ಅಂದರೆ, ಉಸಿರಾಟದ ಹನಿ ಅಥವಾ ಫೋಮೈಟ್ ಪ್ರಸರಣ ಬೆಂಬಲಿಸಲು ಸಿಮೀತ ಆಧಾರಗಳಿವೆ.


ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...