Homeಮುಖಪುಟಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

ಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

ಜಾಮೀನು ಮಂಜೂರಾಗಿದ್ದರೂ, ಲಾಲೂ ಪ್ರಸಾದ್ ಯಾದವ್ ಜೈಲಿನಿಂದ ಹೊರಬರಲು ಇನ್ನು 2-3 ದಿನಗಳು ಬೇಕಾಗುತ್ತವೆ ಎಂದು ತಿಳಿಸಲಾಗಿದೆ.

- Advertisement -
- Advertisement -

ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳದ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು (ಏಪ್ರಿಲ್ 17) ಜಾಮೀನು ನೀಡಿದೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ದುಮ್ಕಾ ಖಜಾನೆ ಪ್ರಕರಣ ಎಂದು ಕರೆಯಲ್ಪಡುವ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಜಾರ್ಖಂಡ್ ನಗರದ ಖಜಾನೆಯಿಂದ 3.13 ಕೋಟಿ ರೂಪಾಯಿ ಹಣವನ್ನು ವಿತ್ ಡ್ರಾ ಮಾಡಿದ ಪ್ರಕರಣ ಇದಾಗಿದೆ.

ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ಜಾಮೀನು ಮಂಜೂರಾಗಿದ್ದರೂ, ಲಾಲು ಪ್ರಸಾದ್ ಯಾದವ್ ಜೈಲಿನಿಂದ ಹೊರಬರಲು ಇನ್ನು 2-3 ದಿನಗಳು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿನ ನಿಯಮದಿಂದಾಗಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸ್ವಲ್ಪ ವಿಳಂಬವಾಗಬಹುದು. ಬೆಲ್ ಬಾಂಡ್‌ಗಳು ತುಂಬಿದ ನಂತರ ಜೈಲಿನಿಂದ ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎನ್ನಲಾಗಿದೆ.

ಪ್ರಸ್ತುತ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್‌ನಲ್ಲಿರುವ ಯಾದವ್ ಅವರು ಬಿಹಾರದ ಮೇವಿನ ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಪಡೆದಿದ್ದರು. ದುಮ್ಕಾ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಕಾರಣ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮನೆಗೆ ಮರಳಬಹುದು.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

2017 ರ ಡಿಸೆಂಬರ್‌ನಿಂದ ಜೈಲಿನಲ್ಲಿರುವ 72 ವರ್ಷದ ಲಾಲೂ ಪ್ರಸಾದ್ ಯಾದವ್,. ಜಾರ್ಖಂಡ್‌ನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತಮ್ಮ ಜೈಲು ಶಿಕ್ಷೆಯ ಹೆಚ್ಚಿನ ಭಾಗವನ್ನು ಕಳೆದಿದ್ದಾರೆ. ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಜನವರಿಯಲ್ಲಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

“ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿದೆ. ಸುಪ್ರೀಂ ಕೋರ್ಟ್ ಮಾಡಿದ ನಿಯಮದಡಿಯಲ್ಲಿ ಜಾಮೀನು ನೀಡಲಾಗಿದೆ. ಬೆಲ್ ಬಾಂಡ್ ಸೇರಿದಂತೆ ಸಂಪೂರ್ಣ ಪ್ರಕ್ರಿಯೆಯನ್ನು ಗಮನಿಸಿದರೆ, ಲಾಲೂ ಪ್ರಸಾದ್ ಯಾದವ್ ಹೊರಬರಲು 3-4 ದಿನಗಳು ತೆಗೆದುಕೊಳ್ಳಬಹುದು” ಎಂದು ಆರ್‌ಜೆಡಿ ಮುಖಂಡ ಶಿವಾನಂದ್ ತಿವಾರಿ ಹೇಳಿದ್ದಾರೆ.

ಲಾಲೂ ಯಾದವ್ ಅವರ ಅನುಪಸ್ಥಿತಿಯಲ್ಲಿ, ಅವರ ಮಗ ತೇಜಶ್ವಿ ಯಾದವ್ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಕಳೆದ ವರ್ಷ ಬಿಹಾರ ಚುನಾವಣೆಯಲ್ಲಿ ಪಕ್ಷ ತೇಜಶ್ವಿ ಯಾದವ್ ನೇತೃತ್ವದಲ್ಲಿ ಉತ್ತಮ ಸಾಧನ ಮಾಡಿದೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...