Homeಅಂತರಾಷ್ಟ್ರೀಯಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

ಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

- Advertisement -
- Advertisement -

ಕ್ಯೂಬಾ ಕಮ್ಯುನಿಸ್ಟ್ ಪಕ್ಷದ ನಾಯಕತ್ವವನ್ನು ಉತ್ಸಾಹಭರಿತ ಮತ್ತು ಸಾಮ್ರಾಜ್ಯಶಾಹಿ ವಿರೋಧಿ ಮನೋಭಾವ ತುಂಬಿದ ಯುವ ಪೀಳಿಗೆಗೆ ವಹಿಸುವ ಇಂಗಿತವನ್ನು ಪಕ್ಷದ ಅಧ್ಯಕ್ಷ ರೌಲ್‌ ಕ್ಯಾಸ್ಟ್ರೊ ಶುಕ್ರವಾರ ವ್ಯಕ್ತಪಡಿಸಿದ್ದಾರೆ. ಜೂನ್‌ನಲ್ಲಿ 90 ನೇ ವರ್ಷಕ್ಕೆ ಕಾಲಿಡುತ್ತಿರುವ ರೌಲ್‌ ಕ್ಯಾಸ್ಟ್ರೊ, ಶುಕ್ರವಾರ ಕಮ್ಯುನಿಸ್ಟ್ ಪಕ್ಷದ ಸಭೆಯಲ್ಲಿ ತಾನು ನಾಯಕತ್ವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ಸೋಮವಾರ ಸಮಾವೇಶ ಮುಗಿಯುವ ಮೊದಲು ಅವರು ಔಪಚಾರಿಕವಾಗಿ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದು ಮತ್ತು ಅವರ ಬದಲಿಯನ್ನು ಘೋಷಿಸುವ ನಿರೀಕ್ಷೆಯಿದೆ.

ರೌಲ್‌ ಕ್ಟ್ಯಾಸ್ಟ್ರೊ

ಕ್ಯೂಬಾದ ಅಧ್ಯಕ್ಷರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದ ರೌಲ್‌ ಕ್ಯಾಸ್ಟ್ರೋ 2018 ರಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಅವರ ಉತ್ತರಾಧಿಕಾರಿಯಾಗಿ ಮಿಗುಯೆಲ್ ಡಿಯಾಜ್-ಕ್ಯಾನೆಲ್ ಬರ್ಮಡೆಜ್ ಅವರನ್ನು ನೇಮಿಸಲಾಗಿತ್ತು.

ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?

ಯುವ ಪೀಳಿಗೆಗೆ ಅಧಿಕಾರವನ್ನು ಹಸ್ತಾಂತರಿಸುವ ಸಲುವಾಗಿ, ಈ ವರ್ಷ ನಡೆಯುವ ಪಕ್ಷದ ಸಮಾವೇಶದಲ್ಲಿ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತ್ಯಜಿಸುವುದಾಗಿ ರೌಲ್‌ ಕ್ಯಾಸ್ಟ್ರೊ 2016 ರಲ್ಲಿ ಘೋಷಿಸಿದ್ದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನವು ಕ್ಯೂಬಾದ ಅತ್ಯಂತ ದೊಡ್ಡ ಸ್ಥಾನವಾಗಿದ್ದು, ಇದು ಅಧ್ಯಕ್ಷ ಸ್ಥಾನಕ್ಕಿಂತ ಹೆಚ್ಚು ಅಧಿಕಾರವಿರುವ ಸ್ಥಾನವಾಗಿದೆ. ಅಧ್ಯಕ್ಷ ಸ್ಥಾನವು ಪ್ರಧಾನ ಕಾರ್ಯದರ್ಶಿಗಿಂತ ನಂತರದ ಸ್ಥಾನವಾಗಿದೆ.

ವಾರಾಂತ್ಯದಲ್ಲಿ ಕಮ್ಯುನಿಸ್ಟ್ ಪಕ್ಷದ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಡಿಯಾಜ್-ಕ್ಯಾನೆಲ್ ಆಯ್ಕೆಯಾಗುತ್ತಾರೆ ಎನ್ನಲಾಗಿದೆ. ದೇಶದ ಅಧ್ಯಕ್ಷರಾಗಿ ಮತ್ತು ಪಕ್ಷದ ಕಾರ್ಯದರ್ಶಿಯಾಗಿ ಎರಡೂ ಹುದ್ದೆಗಳನ್ನು ಅವರು ನಿರ್ವಹಿಸಲಿದ್ದಾರೆ. ಕ್ರಾಂತಿಕಾರಿ ಹೋರಾಟಗಾರ ಫಿಡೆಲ್ ಕ್ಯಾಸ್ಟ್ರೊ ಕೂಡಾ ಸುಮಾರು 30 ವರ್ಷಗಳ ಕಾಲ ಎರಡೂ ಹುದ್ದೆಗಳನ್ನು ನಿರ್ವಹಿಸಿದ್ದರು.

ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...