Homeಅಂಕಣಗಳುಬದುಕು ಮತ್ತು ಅನುಭವಕ್ಕೆ ಅಲ್ಪನಿಷ್ಠೆಯ ಭೈರಪ್ಪನ ಕುರಿತು 

ಬದುಕು ಮತ್ತು ಅನುಭವಕ್ಕೆ ಅಲ್ಪನಿಷ್ಠೆಯ ಭೈರಪ್ಪನ ಕುರಿತು 

- Advertisement -
- Advertisement -

ಗೌರಿ ಲಂಕೇಶ್|

ಭೈರಪ್ಪನವರ ಸಾಹಿತ್ಯ ಮತ್ತು ಜೀವನ ದರ್ಶನಗಳ ಬಗ್ಗೆ ವಸ್ತುನಿಷ್ಠವಾಗಿ ಚರ್ಚಿಸುವ ಅಗತ್ಯತೆ ಇದ್ದೇ ಇದೆ. ಯಾಕೆಂದರೆ ಭೈರಪ್ಪನವರ ಸಾಹಿತ್ಯಿಕ ಜನಪ್ರಿಯತೆಯನ್ನೇ ಅವರು ಎತ್ತಿ ಹಿಡಿಯುವ ಬ್ರಾಹ್ಮಣೀಯ ಮೌಲ್ಯಗಳಿಗೆ ಸಿಗುತ್ತಿರುವ ಜನಮನ್ನಣೆ ಎಂದು ಕೆಲವರು ಅರ್ಥೈಸುತ್ತಿದ್ದಾರೆ. ಇಲ್ಲಿ ಆರಂಭದಲ್ಲೇ ಒಂದೆರಡು ವಿಷಯಗಳನ್ನು ಸ್ಪಷ್ಟಪಡಿಸುವ ಅಗತ್ಯವಿದೆ. ನಾನು ಭೈರಪ್ಪನವರ ಸಾಹಿತ್ಯಿಕ ಪ್ರತಿಭೆಯನ್ನು ನಿರಾಕರಿಸುವುದಿಲ್ಲ. ಅವರು ಬಳಸುವ ಭಾಷೆ ನನಗೆ ವಿಭಿನ್ನವಾಗಿ ಕಂಡರೂ ಅವರು ಪಾತ್ರಗಳನ್ನು, ಸಂದರ್ಭಗಳನ್ನು ಮತ್ತು ಸನ್ನಿವೇಶಗಳನ್ನು ಸಮಗ್ರವಾಗಿ ಚಿತ್ರಿಸುವಲ್ಲಿ ಎಷ್ಟು ಯಶಸ್ವಿಯಾಗುತ್ತಾರೆಂದರೆ ಅವರ ಕೃತಿಗಳು ಸುಲಭವಾಗಿ ಓದಿಸಿಕೊಂಡು ಹೋಗುತ್ತವೆ. ಅಂತಹ ಕೃತಿಗಳಲ್ಲಿ ಅವರ `ಗೃಹಭಂಗ’ ಒಂದು. ಇತ್ತೀಚೆಗೆ ನಾನು ಮತ್ತೊಮ್ಮೆ ಇದನ್ನು ಓದಿದಾಗ ಬೆರಗಾಗಿದ್ದೆ. ಇಂತಹ ಉತ್ತಮ ಕೃತಿ ಬರೆದ ಭೈರಪ್ಪನವರು ಅದು ಹೇಗೆ `ಕವಲು’ ತರಹದ ಕೆಟ್ಟ ಕಾದಂಬರಿ ಬರೆಯಲು ಸಾಧ್ಯ ಎಂದು ನನಗೆ ಅಚ್ಚರಿ ಆಗಿತ್ತು.

ಇರಲಿ, ಭೈರಪ್ಪನವರ ಸಮಗ್ರ ಸಾಹಿತ್ಯಕ್ಕೆ ಬರುವುದಾದರೆ ಅವರ ಕೃತಿಗಳನ್ನು ಓದಿ ಮುಗಿಸಿದನಂತರ ಸಾಮಾನ್ಯ ಓದುಗರಲ್ಲಿ ಒಂದು ಒಳ್ಳೆಯ ಕತೆಯನ್ನು ಓದಿದ ಅನುಭವವಾಗುತ್ತದೆಯೇ ಹೊರತು ಆ ಕತೆಯ ಆಳದಲ್ಲಿ ಅಡಗಿರುವ ಅವರ ಜನವಿರೋಧಿ ಮತ್ತು ಮಹಿಳಾ ವಿರೋಧಿ ನಿಲುವುಗಳಾಗಲಿ ಅಥವಾ ಪುರೋಹಿತಶಾಹಿಯನ್ನು ಎತ್ತಿಹಿಡಿಯುವ ಅವರ ಸಿದ್ಧಾಂತವಾಗಲಿ ಓದುಗರ ಗ್ರಹಿಕೆಗೆ ಸಿಗುವುದಿಲ್ಲ. ಅದಕ್ಕೆ ಉತ್ತಮ ಉದಾಹರಣೆ `ವಂಶವೃಕ್ಷ.’
`ವಂಶವೃಕ್ಷ’ ಕಾದಂಬರಿಯಲ್ಲಿ `ಕವಲು’ ಕಾದಂಬರಿಯಲ್ಲಿರುವಂತಹ ಪೇಲವ ಪಾತ್ರಗಳಾಗಲಿ, ಅಸೂಕ್ಷ್ಮ ಭಾವಸಂಬಂಧಗಳಾಗಲಿ, ಸರಳ ರೇಖೆಯಂಥ ಕಾರ್ಡ್‍ಬೋರ್ಡ್ ವ್ಯಕ್ತಿತ್ವಗಳಾಗಲೀ ಇಲ್ಲ. ಆದ್ದರಿಂದ ಮೇಲುನೋಟಕ್ಕೆ ಇದೊಂದು ಒಳ್ಳೆಯ ಕೃತಿಯಂತೆ ಸಾಮಾನ್ಯ ಓದುಗರಿಗೆ ಭಾಸವಾಗುತ್ತದೆ. ಅದರಲ್ಲೂ ಕಾತ್ಯಾಯಿನಿ ಎಂಬ ಯುವ ವಿಧವೆ ಬ್ರಾಹ್ಮಣೀಯ ಕಟ್ಟುಪಾಡುಗಳನ್ನು ವಿರೋಧಿಸಿ ಹೊಸ ಬದುಕು ಕಂಡುಕೊಳ್ಳುವ ಪ್ರಯತ್ನವೂ ಕ್ರಾಂತಿಕಾರಿಯಾಗಿಯೇ ಕಾಣಿಸುತ್ತದೆ. ಅಷ್ಟೇ ಮುಖ್ಯವಾಗಿ ಕಾದಂಬರಿಯ ಅಂತ್ಯದಲ್ಲಿ ಆಕೆಯ ಸಂಪ್ರದಾಯಸ್ಥ ಮಾವ ಶ್ರೋತ್ರಿಗೇ ತನ್ನ ಹುಟ್ಟು ಪರಿಶುದ್ಧವಾಗಿರಲಿಲ್ಲವಾದ್ದರಿಂದ ವಂಶ ಎಂಬ ವೃಕ್ಷದ ಪವಿತ್ರತೆಯೆ ಅರ್ಥಹೀನವಾಗಿ ಕಾಣಿಸುವುದೂ ಚಾರಿತ್ರಿಕವಾಗಿ ಭಾಸವಾಗುತ್ತದೆ. ಆದರೆ ಆಳದಲ್ಲಿ `ವಂಶವೃಕ್ಷ’ ಕಾದಂಬರಿ ಏನನ್ನು ಹೇಳುತ್ತಿದೆ ಎಂದು ನೋಡುವುದು ಮುಖ್ಯವಾಗುತ್ತದೆ, ಯಾಕೆಂದರೆ ಬ್ರಾಹ್ಮಣಿಕೆಯ ಕಟ್ಟುಪಾಡುಗಳನ್ನು ವಿರೋಧಿಸುವ ಕಾತ್ಯಾಯಿನಿ `ಸತತ ಗರ್ಭಪಾತಕ್ಕೆ’ ತುತ್ತಾಗುತ್ತಾಳೆ; ತಾನು ತಪ್ಪು ಮಾಡಿದೆ, ಪಾಪ ಮಾಡಿದೆ ಎಂಬ ಕೊರಗಿನಲ್ಲೇ ಸಾಯುತ್ತಾಳೆ. ಅದರರ್ಥ, ಮಹಿಳೆಯರು ಸಂಪ್ರದಾಯವನ್ನು ಮುರಿದರೆ, ಕಟ್ಟುಪಾಡುಗಳನ್ನು ವಿರೋಧಿಸಿದರೆ ಅವರು ಎಂದೂ ಸಂತೋಷದಿಂದಿರಲು ಸಾಧ್ಯವಿಲ್ಲ ಎಂಬ ನಿಲುವನ್ನು ಭೈರಪ್ಪ ಚೆಂದವಾಗಿ ರೂಪಿಸಿದ್ದಾರೆ ಎಂದಲ್ಲವೆ?

ಹಾಗೆಯೇ ಆಕೆಯ ಮಾವ ಶ್ರೋತ್ರಿಗೆ ತಾನು ಕಾತ್ಯಾಯಿನಿಗೆ ಅನ್ಯಾಯ ಮಾಡಿದೆ ಎಂಬ ಭಾವನೆ ಕಾಡುತ್ತದೆಯೇ ಹೊರತು ಸಂಪ್ರದಾಯ, ವಂಶದ ಪವಿತ್ರತೆ, ಕಟ್ಟುಪಾಡುಗಳೆಲ್ಲ ನಿರುಪಯುಕ್ತ ಎಂದೆನಿಸುವುದೇ ಇಲ್ಲ. ಯಾಕೆಂದರೆ ಅವನು ಅದ್ಯಾವುಗಳನ್ನು ವಿರೋಧಿಸುವ ಗೋಜಿಗೇ ಹೋಗುವುದಿಲ್ಲ. ಬದಲಾಗಿ ಅದೇ ಸಂಪ್ರದಾಯಕ್ಕೆ ಕಟ್ಟುಬಿದ್ದು ಸಾಯುವ ಹೊಸ್ತಿಲಲ್ಲಿರುವ ಕಾತ್ಯಾಯಿನಿಯ ಬಾಯಿಗೆ ಗಂಗಾಜಲವನ್ನು ಹಾಕಿಸುತ್ತಾನೆ ಮತ್ತು ಸನ್ಯಾಸವನ್ನು ಅರಸುತ್ತಾ ಅದ್ಯಾವುದೋ `ಪುಣ್ಯ’ ಕ್ಷೇತ್ರಕ್ಕೆ ಹೊರಡುತ್ತಾನೆ. ಅಂದರೆ ಕಾತ್ಯಾಯಿನಿ ಮತ್ತು ಶ್ರೋತ್ರಿ- ಇಬ್ಬರಲ್ಲೂ ಬ್ರಾಹ್ಮಣಿಕೆ ಕಟ್ಟುಪಾಡುಗಳನ್ನು ಮೀರಿದ್ದಕ್ಕೆ ಪಾಪಪ್ರಜ್ಞೆ ಹುಟ್ಟುತ್ತದೆಯೇ ವಿನಃ ವಿಮೋಚನಾ ಭಾವವಲ್ಲ. ಆದ್ದರಿಂದ ಸಾಹಿತ್ಯಿಕವಾಗಿ `ವಂಶವೃಕ್ಷ’ ಕುರಿತ ವಿಮರ್ಶೆ ಏನೇ ಇದ್ದರೂ ಅದರ ತಾತ್ವಿಕ ದರ್ಶನ ಈ ಬ್ರಾಹ್ಮಣೀಯ ಕಟ್ಟುಪಾಡನ್ನು ಮೀರುವುದರಿಂದ ಉಂಟಾಗುವ `ಪಾಪಪ್ರಜ್ಞೆ’ಯೇ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ.

ಈ ಬ್ರಾಹ್ಮಣಿಕೆಯ ಎತ್ತಿಹಿಡಿಯುವಿಕೆ ಕೇವಲ `ವಂಶವೃಕ್ಷ’ದಲ್ಲಿ ಮಾತ್ರ ಸಂಭವಿಸುವುದಿಲ್ಲ. ಭೈರಪ್ಪನವರ `ದಾಟು’ ಕಾದಂಬರಿಯಲ್ಲೂ ಅಬ್ರಾಹ್ಮಣನನ್ನು ಸತ್ಯಭಾಮೆ ಪ್ರೀತಿಸಿದ್ದಕ್ಕೆ ಇಡೀ ಹಳ್ಳಿಯೇ ಸರ್ವನಾಶವಾಗುತ್ತದೆ. `ತಬ್ಬಲಿಯು ನೀನಾದೆ ಮಗನೆ’ಯಲ್ಲೂ ನಾಯಕ ತಬ್ಬಲಿಯಾಗುವುದು ಹಿಂದೂ ಧರ್ಮದ ಕಟ್ಟಳೆಯನ್ನು ಮೀರಿದ್ದಕ್ಕೆ. ಹೀಗೆ ಭೈರಪ್ಪನವರು ಕಾತ್ಯಾಯಿನಿಯರ ಮತ್ತು ಸತ್ಯಭಾಮೆಯರ `ಮಹಿಳಾ ಪ್ರಜ್ಞೆ’ಯನ್ನು ಸೋಲಿಸುತ್ತಾ ಬ್ರಾಹ್ಮಣಿಕೆಯ ವಿಜಯದ ಕಥೆಗಳನ್ನೇ ಹೇಳುತ್ತಾ ಬಂದಿದ್ದಾರೆ.

ಭೈರಪ್ಪನವರು ಹಲವಾರು ಬಾರಿ ಸಾಹಿತ್ಯ ಸೃಷ್ಟಿಯ ಬಗ್ಗೆ ಮಾತನಾಡುವಾಗ ತಾವು ಸಿದ್ಧಾಂತಕ್ಕಿಂತ `ಸತ್ಯ ಮತ್ತು ಸೌಂದರ್ಯ’ಕ್ಕೆ ಬದ್ಧ ಎಂದು ಹೇಳಿದ್ದಾರೆ. ಮಾತ್ರವಲ್ಲ ಲೇಖಕ ಸಿದ್ಧಾಂತಕ್ಕೆ ಬದ್ಧನಾದಾಗ ಉತ್ತಮ ಸಾಹಿತ್ಯ ಸೃಷ್ಟಿಯಾಗುವುದಿಲ್ಲ ಎಂದೆಲ್ಲ ಪ್ರತಿಪಾದಿಸಿದ್ದಾರೆ.
ಆದರೆ ಭೈರಪ್ಪನವರು `ಗೃಹಭಂಗ’ ಮತ್ತು `ಪರ್ವ’ ಎಂಬ ಎರಡು ಕೃತಿಗಳನ್ನು ಬಿಟ್ಟರೆ ಮಿಕ್ಕಂತೆ ಬರೆದಿರುವುದೆಲ್ಲ ತಾವು ನಂಬಿರುವ ಸಿದ್ಧಾಂತದ ಪ್ರಚಾರಕ್ಕಾಗಿಯೇ. ಆದ್ದರಿಂದಲೇ ಅವೆಲ್ಲ ಕೆಟ್ಟ ಕೃತಿಗಳಾಗಿವೆ. ಆರೆಸ್ಸೆಸ್ ಸಿದ್ಧಾಂತ ಮಾತ್ರವಲ್ಲದೆ ಆ ಸಂಘಟನೆಯ ವೈಭವೀಕರಣವನ್ನೇ ವಸ್ತುವಾಗಿಟ್ಟುಕೊಂಡ ಅವರ ಮೊದಲ ಕಾದಂಬರಿಯಾದ `ಗೃಹಶ್ರೀ’ಯಿಂದ ಹಿಡಿದು ಇತ್ತೀಚೆಗೆ ಮುಸ್ಲಿಮರನ್ನು ತುಚ್ಛವಾಗಿ ಚಿತ್ರಿಸಲೆಂದೇ ಬರೆದ `ಆವರಣ’ ಮತ್ತು ಸ್ವಾಭಿಮಾನಿ ಮಹಿಳೆಯರ ಬಗ್ಗೆ ಬ್ರಾಹ್ಮಣೀಯ ಪುರುಷಾಧಿಪತ್ಯದ ತಿರಸ್ಕಾರದಿಂದ ಹುಟ್ಟಿಕೊಂಡ `ಕವಲು’ ಎಲ್ಲವೂ ಅವರು ನಂಬಿರುವ ಹಿಂದೂತ್ವ ಸಿದ್ಧಾಂತಹ ಕರಪತ್ರಗಳಷ್ಟೇ ಎಂದರೆ ತಪ್ಪಾಗಲಾರದು.

ಭೈರಪ್ಪನವರ ಈ ಮತಾಂಧಕ್ಕೆ ಕಾರಣ ಇಲ್ಲದಿಲ್ಲ. ಅವರು ತಮ್ಮ ಬದುಕು ಮತ್ತು ಅನುಭವಕ್ಕೆ ನಿಷ್ಠರಾಗಿ ಬರೆದಾಗ `ಗೃಹಭಂಗ’ ಸೃಷ್ಟಿಯಾಗುತ್ತದೆ. ಯಾವಾಗ ಅವರು ಬದುಕು ಮತ್ತು ಅನುಭವಕ್ಕೆ ನಿಷ್ಠರಾಗದೆ ತಮ್ಮ ಮೆದುಳು ಮತ್ತು ಹೃದಯದಲ್ಲಿ ಇರುವ ಮನು ಮಹರ್ಷಿಯನ್ನು ಆವಾಹಿಸಿಕೊಳ್ಳುತ್ತಾರೋ (ಅನಂತಮೂರ್ತಿಯವರು ಹೇಳಿದ್ದಂತೆ) ಹೈಸ್ಕೂಲ್ ಮಟ್ಟದ ಡಿಬೆಟ್ ತರಹ ಬಾಲಿಶ ಸ್ವರೂಪದ, ಯಾವುದೇ ಸಾಹಿತ್ಯಿಕ ಮೌಲ್ಯವನ್ನು ಹೊಂದಿರದ ಕೃತಿಗಳನ್ನು ಸೃಷ್ಟಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...