Homeಅಂಕಣಗಳುಬದುಕು ಮತ್ತು ಅನುಭವಕ್ಕೆ ಅಲ್ಪನಿಷ್ಠೆಯ ಭೈರಪ್ಪನ ಕುರಿತು 

ಬದುಕು ಮತ್ತು ಅನುಭವಕ್ಕೆ ಅಲ್ಪನಿಷ್ಠೆಯ ಭೈರಪ್ಪನ ಕುರಿತು 

- Advertisement -
- Advertisement -

ಗೌರಿ ಲಂಕೇಶ್|

ಭೈರಪ್ಪನವರ ಸಾಹಿತ್ಯ ಮತ್ತು ಜೀವನ ದರ್ಶನಗಳ ಬಗ್ಗೆ ವಸ್ತುನಿಷ್ಠವಾಗಿ ಚರ್ಚಿಸುವ ಅಗತ್ಯತೆ ಇದ್ದೇ ಇದೆ. ಯಾಕೆಂದರೆ ಭೈರಪ್ಪನವರ ಸಾಹಿತ್ಯಿಕ ಜನಪ್ರಿಯತೆಯನ್ನೇ ಅವರು ಎತ್ತಿ ಹಿಡಿಯುವ ಬ್ರಾಹ್ಮಣೀಯ ಮೌಲ್ಯಗಳಿಗೆ ಸಿಗುತ್ತಿರುವ ಜನಮನ್ನಣೆ ಎಂದು ಕೆಲವರು ಅರ್ಥೈಸುತ್ತಿದ್ದಾರೆ. ಇಲ್ಲಿ ಆರಂಭದಲ್ಲೇ ಒಂದೆರಡು ವಿಷಯಗಳನ್ನು ಸ್ಪಷ್ಟಪಡಿಸುವ ಅಗತ್ಯವಿದೆ. ನಾನು ಭೈರಪ್ಪನವರ ಸಾಹಿತ್ಯಿಕ ಪ್ರತಿಭೆಯನ್ನು ನಿರಾಕರಿಸುವುದಿಲ್ಲ. ಅವರು ಬಳಸುವ ಭಾಷೆ ನನಗೆ ವಿಭಿನ್ನವಾಗಿ ಕಂಡರೂ ಅವರು ಪಾತ್ರಗಳನ್ನು, ಸಂದರ್ಭಗಳನ್ನು ಮತ್ತು ಸನ್ನಿವೇಶಗಳನ್ನು ಸಮಗ್ರವಾಗಿ ಚಿತ್ರಿಸುವಲ್ಲಿ ಎಷ್ಟು ಯಶಸ್ವಿಯಾಗುತ್ತಾರೆಂದರೆ ಅವರ ಕೃತಿಗಳು ಸುಲಭವಾಗಿ ಓದಿಸಿಕೊಂಡು ಹೋಗುತ್ತವೆ. ಅಂತಹ ಕೃತಿಗಳಲ್ಲಿ ಅವರ `ಗೃಹಭಂಗ’ ಒಂದು. ಇತ್ತೀಚೆಗೆ ನಾನು ಮತ್ತೊಮ್ಮೆ ಇದನ್ನು ಓದಿದಾಗ ಬೆರಗಾಗಿದ್ದೆ. ಇಂತಹ ಉತ್ತಮ ಕೃತಿ ಬರೆದ ಭೈರಪ್ಪನವರು ಅದು ಹೇಗೆ `ಕವಲು’ ತರಹದ ಕೆಟ್ಟ ಕಾದಂಬರಿ ಬರೆಯಲು ಸಾಧ್ಯ ಎಂದು ನನಗೆ ಅಚ್ಚರಿ ಆಗಿತ್ತು.

ಇರಲಿ, ಭೈರಪ್ಪನವರ ಸಮಗ್ರ ಸಾಹಿತ್ಯಕ್ಕೆ ಬರುವುದಾದರೆ ಅವರ ಕೃತಿಗಳನ್ನು ಓದಿ ಮುಗಿಸಿದನಂತರ ಸಾಮಾನ್ಯ ಓದುಗರಲ್ಲಿ ಒಂದು ಒಳ್ಳೆಯ ಕತೆಯನ್ನು ಓದಿದ ಅನುಭವವಾಗುತ್ತದೆಯೇ ಹೊರತು ಆ ಕತೆಯ ಆಳದಲ್ಲಿ ಅಡಗಿರುವ ಅವರ ಜನವಿರೋಧಿ ಮತ್ತು ಮಹಿಳಾ ವಿರೋಧಿ ನಿಲುವುಗಳಾಗಲಿ ಅಥವಾ ಪುರೋಹಿತಶಾಹಿಯನ್ನು ಎತ್ತಿಹಿಡಿಯುವ ಅವರ ಸಿದ್ಧಾಂತವಾಗಲಿ ಓದುಗರ ಗ್ರಹಿಕೆಗೆ ಸಿಗುವುದಿಲ್ಲ. ಅದಕ್ಕೆ ಉತ್ತಮ ಉದಾಹರಣೆ `ವಂಶವೃಕ್ಷ.’
`ವಂಶವೃಕ್ಷ’ ಕಾದಂಬರಿಯಲ್ಲಿ `ಕವಲು’ ಕಾದಂಬರಿಯಲ್ಲಿರುವಂತಹ ಪೇಲವ ಪಾತ್ರಗಳಾಗಲಿ, ಅಸೂಕ್ಷ್ಮ ಭಾವಸಂಬಂಧಗಳಾಗಲಿ, ಸರಳ ರೇಖೆಯಂಥ ಕಾರ್ಡ್‍ಬೋರ್ಡ್ ವ್ಯಕ್ತಿತ್ವಗಳಾಗಲೀ ಇಲ್ಲ. ಆದ್ದರಿಂದ ಮೇಲುನೋಟಕ್ಕೆ ಇದೊಂದು ಒಳ್ಳೆಯ ಕೃತಿಯಂತೆ ಸಾಮಾನ್ಯ ಓದುಗರಿಗೆ ಭಾಸವಾಗುತ್ತದೆ. ಅದರಲ್ಲೂ ಕಾತ್ಯಾಯಿನಿ ಎಂಬ ಯುವ ವಿಧವೆ ಬ್ರಾಹ್ಮಣೀಯ ಕಟ್ಟುಪಾಡುಗಳನ್ನು ವಿರೋಧಿಸಿ ಹೊಸ ಬದುಕು ಕಂಡುಕೊಳ್ಳುವ ಪ್ರಯತ್ನವೂ ಕ್ರಾಂತಿಕಾರಿಯಾಗಿಯೇ ಕಾಣಿಸುತ್ತದೆ. ಅಷ್ಟೇ ಮುಖ್ಯವಾಗಿ ಕಾದಂಬರಿಯ ಅಂತ್ಯದಲ್ಲಿ ಆಕೆಯ ಸಂಪ್ರದಾಯಸ್ಥ ಮಾವ ಶ್ರೋತ್ರಿಗೇ ತನ್ನ ಹುಟ್ಟು ಪರಿಶುದ್ಧವಾಗಿರಲಿಲ್ಲವಾದ್ದರಿಂದ ವಂಶ ಎಂಬ ವೃಕ್ಷದ ಪವಿತ್ರತೆಯೆ ಅರ್ಥಹೀನವಾಗಿ ಕಾಣಿಸುವುದೂ ಚಾರಿತ್ರಿಕವಾಗಿ ಭಾಸವಾಗುತ್ತದೆ. ಆದರೆ ಆಳದಲ್ಲಿ `ವಂಶವೃಕ್ಷ’ ಕಾದಂಬರಿ ಏನನ್ನು ಹೇಳುತ್ತಿದೆ ಎಂದು ನೋಡುವುದು ಮುಖ್ಯವಾಗುತ್ತದೆ, ಯಾಕೆಂದರೆ ಬ್ರಾಹ್ಮಣಿಕೆಯ ಕಟ್ಟುಪಾಡುಗಳನ್ನು ವಿರೋಧಿಸುವ ಕಾತ್ಯಾಯಿನಿ `ಸತತ ಗರ್ಭಪಾತಕ್ಕೆ’ ತುತ್ತಾಗುತ್ತಾಳೆ; ತಾನು ತಪ್ಪು ಮಾಡಿದೆ, ಪಾಪ ಮಾಡಿದೆ ಎಂಬ ಕೊರಗಿನಲ್ಲೇ ಸಾಯುತ್ತಾಳೆ. ಅದರರ್ಥ, ಮಹಿಳೆಯರು ಸಂಪ್ರದಾಯವನ್ನು ಮುರಿದರೆ, ಕಟ್ಟುಪಾಡುಗಳನ್ನು ವಿರೋಧಿಸಿದರೆ ಅವರು ಎಂದೂ ಸಂತೋಷದಿಂದಿರಲು ಸಾಧ್ಯವಿಲ್ಲ ಎಂಬ ನಿಲುವನ್ನು ಭೈರಪ್ಪ ಚೆಂದವಾಗಿ ರೂಪಿಸಿದ್ದಾರೆ ಎಂದಲ್ಲವೆ?

ಹಾಗೆಯೇ ಆಕೆಯ ಮಾವ ಶ್ರೋತ್ರಿಗೆ ತಾನು ಕಾತ್ಯಾಯಿನಿಗೆ ಅನ್ಯಾಯ ಮಾಡಿದೆ ಎಂಬ ಭಾವನೆ ಕಾಡುತ್ತದೆಯೇ ಹೊರತು ಸಂಪ್ರದಾಯ, ವಂಶದ ಪವಿತ್ರತೆ, ಕಟ್ಟುಪಾಡುಗಳೆಲ್ಲ ನಿರುಪಯುಕ್ತ ಎಂದೆನಿಸುವುದೇ ಇಲ್ಲ. ಯಾಕೆಂದರೆ ಅವನು ಅದ್ಯಾವುಗಳನ್ನು ವಿರೋಧಿಸುವ ಗೋಜಿಗೇ ಹೋಗುವುದಿಲ್ಲ. ಬದಲಾಗಿ ಅದೇ ಸಂಪ್ರದಾಯಕ್ಕೆ ಕಟ್ಟುಬಿದ್ದು ಸಾಯುವ ಹೊಸ್ತಿಲಲ್ಲಿರುವ ಕಾತ್ಯಾಯಿನಿಯ ಬಾಯಿಗೆ ಗಂಗಾಜಲವನ್ನು ಹಾಕಿಸುತ್ತಾನೆ ಮತ್ತು ಸನ್ಯಾಸವನ್ನು ಅರಸುತ್ತಾ ಅದ್ಯಾವುದೋ `ಪುಣ್ಯ’ ಕ್ಷೇತ್ರಕ್ಕೆ ಹೊರಡುತ್ತಾನೆ. ಅಂದರೆ ಕಾತ್ಯಾಯಿನಿ ಮತ್ತು ಶ್ರೋತ್ರಿ- ಇಬ್ಬರಲ್ಲೂ ಬ್ರಾಹ್ಮಣಿಕೆ ಕಟ್ಟುಪಾಡುಗಳನ್ನು ಮೀರಿದ್ದಕ್ಕೆ ಪಾಪಪ್ರಜ್ಞೆ ಹುಟ್ಟುತ್ತದೆಯೇ ವಿನಃ ವಿಮೋಚನಾ ಭಾವವಲ್ಲ. ಆದ್ದರಿಂದ ಸಾಹಿತ್ಯಿಕವಾಗಿ `ವಂಶವೃಕ್ಷ’ ಕುರಿತ ವಿಮರ್ಶೆ ಏನೇ ಇದ್ದರೂ ಅದರ ತಾತ್ವಿಕ ದರ್ಶನ ಈ ಬ್ರಾಹ್ಮಣೀಯ ಕಟ್ಟುಪಾಡನ್ನು ಮೀರುವುದರಿಂದ ಉಂಟಾಗುವ `ಪಾಪಪ್ರಜ್ಞೆ’ಯೇ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ.

ಈ ಬ್ರಾಹ್ಮಣಿಕೆಯ ಎತ್ತಿಹಿಡಿಯುವಿಕೆ ಕೇವಲ `ವಂಶವೃಕ್ಷ’ದಲ್ಲಿ ಮಾತ್ರ ಸಂಭವಿಸುವುದಿಲ್ಲ. ಭೈರಪ್ಪನವರ `ದಾಟು’ ಕಾದಂಬರಿಯಲ್ಲೂ ಅಬ್ರಾಹ್ಮಣನನ್ನು ಸತ್ಯಭಾಮೆ ಪ್ರೀತಿಸಿದ್ದಕ್ಕೆ ಇಡೀ ಹಳ್ಳಿಯೇ ಸರ್ವನಾಶವಾಗುತ್ತದೆ. `ತಬ್ಬಲಿಯು ನೀನಾದೆ ಮಗನೆ’ಯಲ್ಲೂ ನಾಯಕ ತಬ್ಬಲಿಯಾಗುವುದು ಹಿಂದೂ ಧರ್ಮದ ಕಟ್ಟಳೆಯನ್ನು ಮೀರಿದ್ದಕ್ಕೆ. ಹೀಗೆ ಭೈರಪ್ಪನವರು ಕಾತ್ಯಾಯಿನಿಯರ ಮತ್ತು ಸತ್ಯಭಾಮೆಯರ `ಮಹಿಳಾ ಪ್ರಜ್ಞೆ’ಯನ್ನು ಸೋಲಿಸುತ್ತಾ ಬ್ರಾಹ್ಮಣಿಕೆಯ ವಿಜಯದ ಕಥೆಗಳನ್ನೇ ಹೇಳುತ್ತಾ ಬಂದಿದ್ದಾರೆ.

ಭೈರಪ್ಪನವರು ಹಲವಾರು ಬಾರಿ ಸಾಹಿತ್ಯ ಸೃಷ್ಟಿಯ ಬಗ್ಗೆ ಮಾತನಾಡುವಾಗ ತಾವು ಸಿದ್ಧಾಂತಕ್ಕಿಂತ `ಸತ್ಯ ಮತ್ತು ಸೌಂದರ್ಯ’ಕ್ಕೆ ಬದ್ಧ ಎಂದು ಹೇಳಿದ್ದಾರೆ. ಮಾತ್ರವಲ್ಲ ಲೇಖಕ ಸಿದ್ಧಾಂತಕ್ಕೆ ಬದ್ಧನಾದಾಗ ಉತ್ತಮ ಸಾಹಿತ್ಯ ಸೃಷ್ಟಿಯಾಗುವುದಿಲ್ಲ ಎಂದೆಲ್ಲ ಪ್ರತಿಪಾದಿಸಿದ್ದಾರೆ.
ಆದರೆ ಭೈರಪ್ಪನವರು `ಗೃಹಭಂಗ’ ಮತ್ತು `ಪರ್ವ’ ಎಂಬ ಎರಡು ಕೃತಿಗಳನ್ನು ಬಿಟ್ಟರೆ ಮಿಕ್ಕಂತೆ ಬರೆದಿರುವುದೆಲ್ಲ ತಾವು ನಂಬಿರುವ ಸಿದ್ಧಾಂತದ ಪ್ರಚಾರಕ್ಕಾಗಿಯೇ. ಆದ್ದರಿಂದಲೇ ಅವೆಲ್ಲ ಕೆಟ್ಟ ಕೃತಿಗಳಾಗಿವೆ. ಆರೆಸ್ಸೆಸ್ ಸಿದ್ಧಾಂತ ಮಾತ್ರವಲ್ಲದೆ ಆ ಸಂಘಟನೆಯ ವೈಭವೀಕರಣವನ್ನೇ ವಸ್ತುವಾಗಿಟ್ಟುಕೊಂಡ ಅವರ ಮೊದಲ ಕಾದಂಬರಿಯಾದ `ಗೃಹಶ್ರೀ’ಯಿಂದ ಹಿಡಿದು ಇತ್ತೀಚೆಗೆ ಮುಸ್ಲಿಮರನ್ನು ತುಚ್ಛವಾಗಿ ಚಿತ್ರಿಸಲೆಂದೇ ಬರೆದ `ಆವರಣ’ ಮತ್ತು ಸ್ವಾಭಿಮಾನಿ ಮಹಿಳೆಯರ ಬಗ್ಗೆ ಬ್ರಾಹ್ಮಣೀಯ ಪುರುಷಾಧಿಪತ್ಯದ ತಿರಸ್ಕಾರದಿಂದ ಹುಟ್ಟಿಕೊಂಡ `ಕವಲು’ ಎಲ್ಲವೂ ಅವರು ನಂಬಿರುವ ಹಿಂದೂತ್ವ ಸಿದ್ಧಾಂತಹ ಕರಪತ್ರಗಳಷ್ಟೇ ಎಂದರೆ ತಪ್ಪಾಗಲಾರದು.

ಭೈರಪ್ಪನವರ ಈ ಮತಾಂಧಕ್ಕೆ ಕಾರಣ ಇಲ್ಲದಿಲ್ಲ. ಅವರು ತಮ್ಮ ಬದುಕು ಮತ್ತು ಅನುಭವಕ್ಕೆ ನಿಷ್ಠರಾಗಿ ಬರೆದಾಗ `ಗೃಹಭಂಗ’ ಸೃಷ್ಟಿಯಾಗುತ್ತದೆ. ಯಾವಾಗ ಅವರು ಬದುಕು ಮತ್ತು ಅನುಭವಕ್ಕೆ ನಿಷ್ಠರಾಗದೆ ತಮ್ಮ ಮೆದುಳು ಮತ್ತು ಹೃದಯದಲ್ಲಿ ಇರುವ ಮನು ಮಹರ್ಷಿಯನ್ನು ಆವಾಹಿಸಿಕೊಳ್ಳುತ್ತಾರೋ (ಅನಂತಮೂರ್ತಿಯವರು ಹೇಳಿದ್ದಂತೆ) ಹೈಸ್ಕೂಲ್ ಮಟ್ಟದ ಡಿಬೆಟ್ ತರಹ ಬಾಲಿಶ ಸ್ವರೂಪದ, ಯಾವುದೇ ಸಾಹಿತ್ಯಿಕ ಮೌಲ್ಯವನ್ನು ಹೊಂದಿರದ ಕೃತಿಗಳನ್ನು ಸೃಷ್ಟಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...