Homeಅಂಕಣಗಳುಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

ಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

- Advertisement -
- Advertisement -

ಸಂಪಾದಕೀಯ |

ಹೆದರಿಕೊಳ್ಳಬೇಕಿಲ್ಲ. ದೀರ್ಘವಾದ ಯಾವುದೇ ಕೆಲಸಕ್ಕೂ ಸಹನೆಯಿಲ್ಲದ ಮನೋಭಾವ ಇಂದಿನ ದಿನಮಾನದ್ದು. ಯಾವುದೂ ದೀರ್ಘವಾಗಬಾರದು, ಸ್ವಲ್ಪವೂ ಬೋರ್ ಎನಿಸಬಾರದು, ಎಲ್ಲವೂ ಇನ್‍ಸ್ಟಂಟ್ ಆಗಿರಬೇಕು. ಹಾಗಿರುವಾಗ ಸುದೀರ್ಘ ಕಾಲದ ಪ್ರಕ್ರಿಯೆಯೊಂದಕ್ಕೆ ಸಿದ್ಧರಾಗಲೇಬೇಕು ಎಂದುಕೊಂಡರೆ, ಓದುಗರು ಹೆದರಿಕೊಳ್ಳುವ ಸಾಧ್ಯತೆ ಇದೆ. ಇಲ್ಲ, ಹೆದರಿಕೊಳ್ಳಬೇಕಿಲ್ಲ.
ಏಕೆಂದರೆ, ಆಗಲೇ ಪರಿಸ್ಥಿತಿ ಕೈ ಮೀರಿ ಹೋಗಿದೆ. ನಾವು ಬದುಕುತ್ತಿರುವ ಭೂಮಿಯನ್ನು, ಲಕ್ಷ ಲಕ್ಷ ವರ್ಷಗಳಿಂದ ಉಳಿದುಕೊಂಡು ಬಂದಿದ್ದ ಭೂಮಿಯನ್ನು ಕೇವಲ 100 ವರ್ಷಗಳಲ್ಲಿ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಹಾಳು ಮಾಡಿದ್ದೇವೆ.
ಹಾಗಾಗಿ ತುರ್ತಾಗಿ ಏನೋ ಮಾಡಿ ಇದನ್ನು ಒಮ್ಮಿಂದೊಮ್ಮೆಗೇ ಸುಧಾರಿಸಲೂ ಸಾಧ್ಯವಿಲ್ಲ. ಮೊದಲಿಗೆ ಇನ್ನಷ್ಟು ಹಾಳುಗೆಡವುವುದನ್ನು ಕಡಿಮೆ ಮಾಡಿಕೊಳ್ಳಬೇಕು. ಭೂಮಿಗೆ ಜ್ವರ ಬರಿಸಿರುವುದರಿಂದ, ಅದರ ತಾಪವನ್ನು ತಡೆದುಕೊಳ್ಳಲೇಬೇಕು, ಬೇರೆ ದಾರಿಯಿಲ್ಲ. ಇದನ್ನು ತಂಪಾಗಿಸಲು, ಪುನಶ್ಚೇತನಗೊಳಿಸಲು ದೃಢವಾದ ದೀರ್ಘಕಾಲಿಕ ಹೆಜ್ಜೆಗಳನ್ನಿಡಬೇಕು.
ಚುನಾವಣಾ ಕಾವು ಸಹಾ ಭೂಮಿಯ ಜ್ವರವನ್ನು ಏರಿಸಿದೆಯೆಂದರೆ ಆಶ್ಚರ್ಯವಾಗಬಹುದು. ಹೌದು, ಚುನಾವಣೆಯ ಸಂದರ್ಭದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಸಹಾ ಯಾರಿಗೂ (ಬರಪೀಡಿತವಾದ ಪ್ರದೇಶಗಳ ರೈತರಿಗೂ) ಒಂದು ಪ್ರಮುಖ ವಿಷಯವೆನಿಸಿಲ್ಲ. ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‍ಗಳೆರಡೂ ‘ತಾಪಮಾನ ಏರಿಕೆ’ಯ ಕುರಿತು ತಮ್ಮ ಪ್ರಣಾಳಿಕೆಗಳಲ್ಲಿ ಪ್ರಸ್ತಾಪಿಸಿವೆ. ನಿರ್ದಿಷ್ಟವಾದ ಕೆಲವು ಅಂಶಗಳೂ ಅವುಗಳಲ್ಲಿವೆ. ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಒಂದೆರಡು ಹೆಜ್ಜೆ ಮುಂದಿದ್ದು, ಮಹಾರಾಷ್ಟ್ರದ ಕಾಂಗ್ರೆಸ್ ಘಟಕವು, ಏಪ್ರಿಲ್ 8ರಂದು ಪ್ರತ್ಯೇಕ ಪರಿಸರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದೆ.
ಆದರೆ, ಈ ಎಲ್ಲಾ ಭರವಸೆಗಳೂ ಸಹಾ ಪರಿಣಾಮಕಾರಿಯಾದ ಫಲಿತಾಂಶಗಳಾಗಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳುತ್ತವೆಂಬ ನಂಬಿಕೆ ಯಾರಿಗೂ ಇಲ್ಲ. ಅಷ್ಟೇ ಅಲ್ಲದೇ, ಈ ಕ್ರಮಗಳಷ್ಟೇ ಭೂಮಿಯನ್ನು ಉಳಿಸಲು ಸಾಧ್ಯವೂ ಇಲ್ಲ.
ಜನಸಂಖ್ಯೆಯ ಬಹಳಷ್ಟು ಜನರು ತೊಡಗಿಕೊಂಡಿರುವ ಕೃಷಿಯಿಂದ ಹಿಡಿದು, ಬೆರಳೆಣಿಕೆಯ ಕುಟುಂಬಗಳಿಗೆ ಭಾರೀ ಲಾಭ ತಂದುಕೊಡುವ ಉದ್ದಿಮೆಗಳವರೆಗೆ ಎಲ್ಲವೂ ಪರಿಸರ, ಅಂತರ್ಜಲ ಮತ್ತು ಗಾಳಿಯನ್ನು ಮನುಕುಲಕ್ಕೆ ಅಪಾಯಕಾರಿಯನ್ನಾಗಿಸುತ್ತಿದೆ. ಕರ್ನಾಟಕದಂತಹ ರಾಜ್ಯವು ಕಳೆದ 19 ವರ್ಷಗಳಲ್ಲಿ 16 ವರ್ಷಗಳು, ತನ್ನ ಭೂಭಾಗದ ಅರ್ಧದಷ್ಟು ಪ್ರದೇಶದಲ್ಲಿ ಬರ ಕಂಡಿದೆ. ಹೀಗಿರುವಾಗ ನಮಗೆ ಭಾರೀ ತೊಂದರೆ ಕಾದಿದೆಯೆಂಬ ಅಪಾಯದ ಭಾವವನ್ನು ಎಲ್ಲರೂ ತಳೆಯದೇ ಇದಕ್ಕೆ ಪರಿಹಾರವೆಲ್ಲಿಯದು?
ಕನಿಷ್ಠ ಚುನಾವಣೆಯ ನಂತರವಾದರೂ, ಈ ನಿಟ್ಟಿನಲ್ಲಿ ಸಮರೋಪಾದಿ ಕೆಲಸಗಳಾಗಬೇಕು. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಕೈ ಜೋಡಿಸಬೇಕು. ಇದೇ ಮೇ 17ರಿಂದ 19ರವರೆಗೆ ತುಮಕೂರು ಜಿಲ್ಲೆಯ ಸಮತಾ ವಿದ್ಯಾಲಯದ ಆವರಣದಲ್ಲಿ ಆಸಕ್ತರಿಗೆ ಒಂದು ಕಾರ್ಯಾಗಾರವನ್ನು ಪ್ರೊ.ರವಿವರ್ಮಕುಮಾರ್ ಹಾಗೂ ಪ್ರೊ.ಯತಿರಾಜುರಂತಹ ಹಿರಿಯರು ಆಯೋಜಿಸುತ್ತಿದ್ದಾರೆ. ನೀರಿನ ತಜ್ಞ ರಾಜೇಂದ್ರ ಸಿಂಗ್ ಸಹಾ ಅಲ್ಲಿಗೆ ಬರುತ್ತಿದ್ದಾರೆ. ಇಂತಹ ಎಷ್ಟೋ ಪ್ರಯತ್ನಗಳು ಆಗುವ ಅಗತ್ಯವಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರಿಗೌಡರು ತಮ್ಮ ವ್ಯಾಪ್ತಿಯ ಕೆರೆಗಳ ಹೂಳೆತ್ತಿಸುವುದನ್ನು ಆದ್ಯತೆಯ ವಿಷಯವನ್ನಾಗಿಸಿಕೊಂಡಿದ್ದಾರೆ. ಇಂತಹುದೇ ಕೆಲಸವನ್ನು ಮಾರುತಿ ಪ್ರಸನ್ನ ಎಂಬ ತಹಸೀಲ್ದಾರರು ಮಂಡ್ಯ ತಾಲೂಕಿನಲ್ಲಿ ಮಾಡಿದ್ದರು. ಕಲಬುರಗಿ ಜಿಲ್ಲೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ನರೇಗಾ ಮೂಲಕವೇ ಕೆರೆಗಳನ್ನು ಸಂಪನ್ನಗೊಳಿಸುವ ಕೆಲಸವನ್ನು ಮಾಡಲಾಗಿತ್ತು. ಹೋರಾಟಗಾರ್ತಿ ಕೆ.ನೀಲಾರಂಥವರು ಅದರ ಪ್ರೇರಕ ಶಕ್ತಿಯಾಗಿದ್ದರು. ಹಾಸನದಲ್ಲಿ ರೂಪಾ ಹಾಸನ, ಅಧಿಕಾರಿ ಎಚ್.ಎಲ್.ನಾಗರಾಜು ಅವರುಗಳೂ ರಚನಾತ್ಮಕವಾದ ಈ ಕೆಲಸಗಳಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. ಸರ್ಕಾರ ಮತ್ತು ಜನರು ಜೊತೆಗೂಡಬಹುದಾದ ಬಹಳ ಮುಖ್ಯವಾದ ಕ್ಷೇತ್ರ ಇದು.
ಆದರೆ, ನಮ್ಮ ಹೆಚ್ಚಿನ ಜನಪ್ರತಿನಿಧಿಗಳು ಮತ್ತು ಅಧಿಕಾರಶಾಹಿಯು ಸಾಮಾನ್ಯವಾಗಿ ಇಂಥವನ್ನು ಹಾಳುಗೆಡಹುವ ಯೋಜನೆಗಳನ್ನೇ ರೂಪಿಸುತ್ತಾರೆ. ಪ್ರಾಮಾಣಿಕರೆಂದು ಹೆಸರು ಮಾಡಿರುವವರು ರೂಲ್ ಪುಸ್ತಕವನ್ನಿಟ್ಟುಕೊಂಡು ತೊಂದರೆ ಕೊಡಲು ಸಾಧ್ಯವಿರುವುದನ್ನೆಲ್ಲಾ ಮಾಡುತ್ತಾರೆ. ಪಾರ್ಲಿಮೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗ್ರಾಮೀಣಾಭಿವೃದ್ಧಿ ಸಚಿವರು, ‘ಹೇಗೂ ಕರ್ನಾಟಕದ ಚುನಾವಣೆ ಮುಗಿದಿದೆ. ಬರಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಜಿ.ಪಂ ಸಿಇಓಗಳ ಸಭೆ ಕರೆಯಬೇಕು’ ಎಂದರೆ ಚುನಾವಣಾ ಆಯೋಗ ಬಿಡುತ್ತಿಲ್ಲವಂತೆ.
ನಾವಿರುವ ಪರಿಸರ, ನೆಲ, ಜಲಗಳನ್ನು ಸಂರಕ್ಷಿಸುವುದು ಮುಂದಿನ ದಿನಗಳಲ್ಲಿ ಎಲ್ಲಾ ಪಂಥೀಯರ, ವರ್ಗ ಜಾತಿ ಧರ್ಮ ಲಿಂಗಗಳ ಜನರ ಆದ್ಯತೆಯಾಗದೇ ಉಳಿಗಾಲವಿಲ್ಲ. ಅದರಲ್ಲೂ ರಾಜಸ್ತಾನದ ನಂತರ ಅತ್ಯಂತ ಹೆಚ್ಚು ಬರಪೀಡಿತ ಪ್ರದೇಶವನ್ನು ಹೊಂದಿರುವ ಕರ್ನಾಟಕವು ಎಚ್ಚೆತ್ತುಕೊಳ್ಳಬೇಕಿದೆ. ಶಿರಾದಲ್ಲಿ ನಡೆಯುತ್ತಿರುವ ಶಿಬಿರವು ಚೈತನ್ಯವುಳ್ಳ ಯುವಜನರನ್ನು ಸಿದ್ಧಗೊಳಿಸಿ, ಕರ್ನಾಟಕವನ್ನು ಜಾಗೃತಿಗೊಳಿಸಲಿ ಎಂಬ ಆಶಯ ನಮ್ಮದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...