Homeಮುಖಪುಟನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ...

ನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ ಪ್ರಶ್ನೆ

ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ ... ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ- ಅಮರಿಂದರ್ ಸಿಂಗ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಲಸಿಕೆ ರಾಜತಾಂತ್ರಿಕ ನೀತಿಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರಧಾನಿಯವರ ಈ ರಾಜತಾಂತ್ರಿಕತೆಯ ಅಡಿ ಭಾರತದಲ್ಲಿ ತಯಾರಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ಗಳ ಕೋಟ್ಯಂತರ ಡೋಸ್‌ಗಳನ್ನು ಹಲವಾರು ದೇಶಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ದೇಶಾದ್ಯಂತ ಕೊರೋನಾ ಪ್ರಕರಣಗಳ ತೀವ್ರತೆಯ ಮಧ್ಯೆ ಹಲವಾರು ರಾಜ್ಯಗಳಲ್ಲಿ ಲಸಿಕೆಗಳ ಕೊರತೆಯನ್ನು ಎತ್ತಿ ತೋರಿಸಿದ ಅಮರಿಂದರ್‌ಸಿಂಗ್, “ಸದ್ಭಾವನೆ ಗೆಸ್ಚರ್” ಗಿಂತ ಭಾರತೀಯರಿಗೆ ಲಸಿಕೆಗಳನ್ನು ಒದಗಿಸಲು ಕೇಂದ್ರವು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

“ಇತರ ದೇಶಗಳಿಗೆ 5 ಕೋಟಿ ಡೋಸ್ ಉಡುಗೊರೆಯಾಗಿ ಕೊಡುವುದರ ಅರ್ಥವೇನು? ನಮ್ಮ ಬಗ್ಗೆ ಏನು? ಭಾರತೀಯರ ಬಗ್ಗೆ ಏನು? ನಾವು ಅದನ್ನು ಮೊದಲು ಪಡೆಯುವುದಿಲ್ಲವೇ? ನಿಮ್ಮ ಬಳಿ ಇದ್ದರೆ ಅದನ್ನು (ಲಸಿಕೆಗಳನ್ನು) ನೀಡಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ನಿಮ್ಮ ಬಳಿ ಇಲ್ಲದಿದ್ದರೆ, ಆದ್ಯತೆಯು ಭಾರತೀಯರಿಗೆ ಲಸಿಕೆ ಒದಗಿಸುವುದು ಆಗಿರಬೇಕು, ಲಸಿಕೆಗಳನ್ನು ಇತರರಿಗೆ ಸ್ನೇಹಪೂರ್ವಕವಾಗಿ ನೀಡಬಾರದು. ಮೊದಲು ಲಸಿಕೆಯನ್ನು ನನಗೆ ನೀಡಿ ಎಂದು ಪ್ರಧಾನ ಮಂತ್ರಿಯವರಿಗೆ ಸಭೆಯೊಂದರಲ್ಲಿ ಕೇಳಿದ್ದೆ’ ಎಂದು ಪಂಜಾಬ್‌ ಸಿಎಂ ಹೇಳಿದ್ದಾರೆ.

ಭಾರತದ ಲಸಿಕೆ ಉಪಕ್ರಮವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ದೇಶದ ಮಾನವೀಯ ಭಾವಸೂಚಕವು ಕಳೆದ ತಿಂಗಳು ಹಲವು ರಾಜ್ಯಗಳಿಗೆ ಮಾರಕವಾಗಿ ಪರಿಣಮಿಸಿತು, ಈಗಲೂ ಅದು ಸಮಸ್ಯೆಯಾಗಿಯೇ ಇದೆ. ಏಕೆಂದರೆ ಕೆಟ್ಟದಾಗಿ ಹಾನಿಗೊಳಗಾದ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಹೆಚ್ಚಿಸಲು ಯೋಜಿಸಿದ್ದರಿಂದ ತೀವ್ರ ಲಸಿಕೆ ಕೊರತೆ ಎದುರಾಗಿದೆ.

“ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ … ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ” ಎಂದು ಸಿಂಗ್ ಹೇಳಿದರು.

ಲಸಿಕಾ ಅಭಿಯಾನದಲ್ಲಿ ಆದ್ಯತೆ ನೀಡಬೇಕಾದ ನಿರ್ದಿಷ್ಟ ಗುಂಪುಗಳನ್ನು ನಿರ್ಧರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು ಎಂದು ಅಮರಿಂದರ್ ಸಿಂಗ್ ಒತ್ತಾಯಿಸಿದರು.

“ಅದನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಡಿ. ದೆಹಲಿಗಿಂತ ನಮಗೆ ಬೇರೆ ಸಮಸ್ಯೆ ಇರಬಹುದು. ದೆಹಲಿ ಸಮಸ್ಯೆ ಮಹಾರಾಷ್ಟ್ರಕ್ಕಿಂತ ಭಿನ್ನವಾಗಿರಬಹುದು. ಕೇರಳದ ಸಮಸ್ಯೆಯೇ ಬೇರೆ ಇರಬಹುದು. ಲಸಿಕೆ ಬಳಕೆಯ ನಿರ್ಧಾರವನ್ನು ರಾಜ್ಯಗಳೇ ಮಾಡಿಕೊಳ್ಳೋಣ” ಎಂದು ಅವರು ಹೇಳಿದರು.

ಪ್ರಸ್ತುತ, ಕೇಂದ್ರವು 45 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಮಾಡಲು ಅನುಮತಿಸುತ್ತದೆ. ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಇತರ ವಯೋಮಾನದವರಿಗೂ ತೆರೆಯುವಂತೆ ಕೇಂದ್ರವನ್ನು ಒತ್ತಾಯಿಸಿವೆ.
ಎರಡನೇ ಕೋವಿಡ್ ಅಲೆಯಿಂದ ತತ್ತರಿಸಿದ ಭಾರತವು ಸತತ ಮೂರು ದಿನಗಳಿಂದ ದೈನಿಕ 2 ಲಕ್ಷಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಮತ್ತು ದೈನಿಕ 1000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಶೇಕಡಾ 86 ರಷ್ಟು ಸಾವುಗಳು ಸಂಭವಿಸಿದ 10 ರಾಜ್ಯಗಳಲ್ಲಿ ಪಂಜಾಬ್ ಕೂಡ ಒಂದು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...