Homeಕರೋನಾ ತಲ್ಲಣಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಅಂದಾಜು 22 ಲಕ್ಷ ಆರೋಗ್ಯ ಕಾರ್ಯಕರ್ತೆಯರಿಗೆ ಈ ವಿಮಾ ಸೌಕರ್ಯ ಒದಗಿಸಲಾಗುವುದು ಎಂದು ಸರ್ಕಾರ ಘೋಷಿಸಿತ್ತು

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಉಲ್ಬಣವಾಗುತ್ತಿದೆ. ಈಗೀನ ಎರಡನೇ ಅಲೆ ತೀವ್ರ ಸ್ಪರೂಪದ್ದಾಗಿದ್ದು, ಅಧಿಕ ಸಾವುಗಳಿಗೆ ಕಾರಣವಾಗುತ್ತಿದೆ. ಇಂತಹ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸಂಕಚ್ಟದಲ್ಲಿ ಹಗಲು-ರಾತ್ರಿ ದುಡಿಯುತ್ತಿರುವ ಇವರಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ಆಘಾತ ನೀಡಿದೆ.

ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಮೊದಲ ಸಾಲಿನಲ್ಲಿ ಬರುವ, ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ವಿಮಾ ಯೋಜನೆಯಡಿ ತಲಾ 50 ಲಕ್ಷ ರೂಪಾಯಿವರೆಗೆ ವಿಮಾ ಸೌಲಭ್ಯ ನೀಡುವುದಾಗಿ ಘೋಷಿಸಿತ್ತು.

ಕಳೆದ ವರ್ಷದ ಮಾರ್ಚ್‌‌ನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಕೊರೊನಾ ಮೊದಲ ಅಲೆಯಲ್ಲಿ ಎಷ್ಟು ಜನರಿಗೆ ಈ ವಿಮೆಯ ಸೌಲಭ್ಯ ದೊರಕಿದೆಯೋ ಗೊತ್ತಿಲ್ಲ. ಆದರೆ ಈ ವರ್ಷದ ಮಾರ್ಚ್ 24 ರಂದು ಸರ್ಕಾರ ಸುತ್ತೊಲೆ ಹೊರಡಿಸಿ ಈ ವಿಮಾ ಯೋಜನೆಯನ್ನು ಅಂತ್ಯಗೊಳಿಸಿರುವುದಾಗಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ಕೊರೊನಾ ಎರಡನೇ ಅಲೆಯಲ್ಲಿ ಹೆಚ್ಚು ಆತಂಕಕ್ಕೆ ಒಳಗಾಗಿರುವ ವಲಯ ಆರೋಗ್ಯ ಕಾರ್ಯಕರ್ತರದ್ದು, ವಿಮಾ ಸೌಲಭ್ಯ ಎಷ್ಟು ದೊರಕಿದೆಯೋ ಇಲ್ಲವೋ ಮಾಹಿತಿಯಿಲ್ಲ. ಆದರೆ, ತಾವು ಕೊಂಚ ನೆಮ್ಮದಿಯಿಂದ ಕೆಲಸ ಮಾಡಲು ಈ ವಿಮಾ ಸೌಲಭ್ಯ ಒಂದು ಭದ್ರತೆ ಒದಗಿಸಿತ್ತು. ಅದನ್ನು ಈಗ ಕೇಂದ್ರ ಸರ್ಕಾರ ಅಂತ್ಯಗೊಳಿಸಿದೆ.

ಈಗೀನ ಸನ್ನಿವೇಶ ನಿಜಕ್ಕೂ ಗಂಭೀರ ಆಗುತ್ತಿರುವ ಹೊತ್ತಿನಲ್ಲಿ ಜನರ ಜೀವ ಉಳಿಸಲು ಹೆಣಗಾಡುತ್ತಿರುವ ವೈದ್ಯರು, ತಳಮಟ್ಟದ ಆಶಾ ಕಾರ್ಯಕರ್ತೆಯರು, ಆಂಬ್ಯುಲೆನ್ಸ್ ಚಾಲಕರು, ಆರೋಗ್ಯ ಸಿಬ್ಬಂದಿಗಳ ವಿಮಾ ಸೌಲಭ್ಯಕ್ಕೆ ಅಂತ್ಯ ಹಾಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣಾ ಕೇಂದ್ರಗಳಲ್ಲಿ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗಿತ್ತು.

ಸಫಾಯಿ ಕರ್ಮಚಾರಿಗಳು, ವಾರ್ಡ್ ಬಾಯ್ ಗಳು, ನರ್ಸ್ ಗಳು, ಆಶಾ ಕಾರ್ಯಕರ್ತೆಯರು, ಅರೆ ವೈದ್ಯಕೀಯ ಸಿಬ್ಬಂದಿ, ತಂತ್ರಜ್ಞರು, ವೈದ್ಯರು ಮತ್ತು ವಿಶೇಷ ತಜ್ಞರು ಹಾಗೂ ಇತರೆ ಆರೋಗ್ಯ ಕಾರ್ಯಕರ್ತರನ್ನು ವಿಶೇಷ ವಿಮಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿತ್ತು.

ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಅವರನ್ನು ಭೇಟಿ ಮಾಡುವುದು ಮತ್ತಿತರ ಕಾರ್ಯಗಳಲ್ಲಿ ತೊಡಗಿದ್ದ ಯಾವುದೇ ಆರೋಗ್ಯ ವೃತ್ತಿಪರರು ಅವಘಡದಲ್ಲಿ ಸಿಲುಕಿ ಅವರು ಸಾವನ್ನಪ್ಪಿದರೆ ಅವರಿಗೆ 50 ಲಕ್ಷ ರೂಪಾಯಿವರೆಗೆ ವಿಮಾ ಪರಿಹಾರ ನೀಡಲಾಗುವುದು. ಅಂದಾಜು 22 ಲಕ್ಷ ಆರೋಗ್ಯ ಕಾರ್ಯಕರ್ತೆಯರಿಗೆ ಈ ವಿಮಾ ಸೌಕರ್ಯ ಒದಗಿಸಲಾಗುವುದು ಎಂದು ಹೇಳಲಾಗಿತ್ತು.


ಇದನ್ನೂ ಓದಿ: ಕುಂಭಮೇಳದಿಂದ ದೆಹಲಿಗೆ ಹಿಂದಿರುಗುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...