Homeಮುಖಪುಟಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ...

ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

- Advertisement -
- Advertisement -

ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಬಳಸುವ ರೆಮ್‌ಡಿಸಿವಿರ್ ಔಷಧಿ ಕೊರತೆ ಬಗ್ಗೆ ಎಲ್ಲೆಲ್ಲೂ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮಹರಾಷ್ಟ್ರ ಬಿಜೆಪಿ ಮುಖಂಡರು 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ ಕೇಳಿಬಂದಿದೆ. ರೆಮ್ಡೆಸಿವಿರ್ ಸುತ್ತ ನಡೆಯುತ್ತಿರುವ ಈ ಗದ್ದಲದಲ್ಲಿ, ಕೊರೋನಾ ವಿಷಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಶನಿವಾರ ಮುಂಜಾನೆ ಮಹಾರಾಷ್ಟ್ರ ಸಚಿವ ನವಾಬ್ ಮಲೀಕ್ ರಾಜ್ಯಕ್ಕೆ ರೆಮ್‌ಡಿಸಿವಿರ್ ಔಷಧಿಯನ್ನು ಪೂರೈಸಬಾರದು ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪೂರೈಕೆದಾರರ ಮೇಲೆ ಒತ್ತಡ ಹಾಕುತ್ತಿದೆ. ಪೂರೈಸಿದರೆ ಲೈಸೆನ್ಸ್ ರದ್ದು ಮಾಡುತ್ತೀವಿ ಎಂದು ಅವರನ್ನು ಬೆದರಿಸಲಾಗುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದರು.

ನಂತರ ರೆಮ್‌ಡಿಸಿವಿರ್ ಮಾತ್ರೆಗಳ ಹೆಚ್ಚುವರಿ ಸಂಗ್ರಹವಿದೆ ಎಂದು ಮುಂಬೈ ಪೊಲೀಸರು ಫಾರ್ಮಾ ಕಂಪನಿಯ ನಿರ್ದೇಶಕರೊಬ್ಬರನ್ನು ಪ್ರಶ್ನಿಸಿದಾಗ, ಅಲ್ಲಿಗೆ ಧಾವಿಸಿದ ದೇವೇಂದ್ರ ಫಢ್ನವೀಸ್ ಫಾರ್ಮಾ ಕಂಪನಿ ಪರ ಮಾತಾನಾಡಿ, ನಾವು ಅವನ್ನು ಕೊಳ್ಳಲು ಆರ್ಡರ್ ಕೊಟ್ಟಿ ಎಂದು ಹೇಳಿರುವುದು ಹೊಸ ವಿವಾದ ಹುಟ್ಟುಹಾಕಿದೆ.

“ನಾಲ್ಕು ದಿನಗಳ ಹಿಂದೆ ನಾವು ರೆಮ್‌ಡಿಸಿವಿರ್ ಪೂರೈಸುವಂತೆ ಬ್ರಕ್ ಫಾರ್ಮಾಗೆ ವಿನಂತಿಸಿದ್ದೆವು. ಆದರೆ ಅನುಮತಿ ನೀಡುವವರೆಗೂ ಅವರಿಗೆ ಔಷಧಿ ಪೂರೈಸಲು ಸಾಧ್ಯವಾಗಲಿಲ್ಲ. ನಾನು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿತು” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಅಲ್ಲದೆ ರೆಮ್‌ಡಿಸಿವಿರ್ ಪೂರೈಕೆದಾರರಿಗೆ ಮಹಾರಾಷ್ಟ್ರ ಸರ್ಕಾರ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತಾಗಿ ಆರ್‌ಟಿಐ ಕಾರ್ಯಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸಾಕೇತ್ ಗೋಖಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಕಳೆದ ರಾತ್ರಿ ಮುಂಬೈನ ವೈಲ್ ಪಾರ್ಲೆ ಪೊಲೀಸರು ಗುಜರಾತ್ ಫಾರ್ಮಾ ಕಂಪನಿ ಅಕ್ರಮವಾಗಿ ಸಂಗ್ರಹಿಸಿದ್ದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಮಾತ್ರೆಗಳನ್ನು ವಶಪಡಿಸಿಕೊಂಡರು. ಥಟ್ಟನೆ ನಟ್ಟನಡುರಾತ್ರಿ ವೈಲ್ ಪಾರ್ಲೆ ಪೊಲೀಸ್ ಸ್ಟೇಷನ್‌ನಲ್ಲಿ ಪ್ರತ್ಯಕ್ಷರಾದ ಮಾಜಿ ಸಿಎಂ ದೇವೇಂದ್ರ ಫಢ್ನವೀಸ್, ‘ಬಿಜೆಪಿ ಈ ಔಷಧಿಗಳನ್ನು ಆರ್ಡರ್ ಮಾಡಿ ದಮನ್ ಮತ್ತು ಗುಜರಾತ್‌ನಿಂದ ತರಿಸಿಕೊಂಡಿದೆ’ ಎನ್ನುತ್ತಾರೆ. ನಂತರವರು ಜನರಿಗೆ ವಿತರಿಸಲು ಆ ಸ್ಟಾಕ್ ಅನ್ನು ಬಿಜೆಪಿ ತರಿಸಿಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ಗೋಖಲೆ ಟ್ವೀಟ್ ಮಾಡಿದ್ದಾರೆ.

1. ಸರ್ಕಾರಗಳಿಗಷ್ಟೇ ಮಾರಬೇಕಾದ ರೆಮ್‌ಡಿಸಿವಿರ್ ಅನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ, ಗುಜರಾತ್‌ನಿಂದ ಹೇಗೆ ತರಿಸಿಕೊಳ್ಳುತ್ತಾರೆ?
2. ಪೂರೈಕೆದಾರರ ಕುರಿತು ಫಡ್ನವೀಸ್ ರಾಜ್ಯ ಸರ್ಕಾರಕ್ಕೆ ತಿಳಿಸಿ, ಅಧಿಕೃತ ಮಾರ್ಗದಲ್ಲೇ ರಾಜ್ಯ ಸರ್ಕಾರ ಅವನ್ನು ಖರೀದಿಸಲು ಅವಕಾಶವನ್ನೇಕೆ ಮಾಡಿಕೊಡಲಿಲ್ಲ?
3. ತೀವ್ರ ಕೊರತೆ ಇರುವ ಈ ಸಂದರ್ಭದಲ್ಲಿ ಬಿಜೆಪಿ ರೆಮ್‌ಡಿಸಿವಿರ್ ಅನ್ನು ತನ್ನ ಪಾರ್ಟಿ ಆಫೀಸ್‌ನಲ್ಲಿ (ಗುಜರಾತ್‌ನಲ್ಲೂ ಹೀಗೇ ಆಗಿದೆ) ಸ್ಟಾಕ್ ಮಾಡಿದ್ದು ಏಕೆ?
ರಾಜ್ಯ ಸಚಿವ ನವಾಬ್ ಮಲೀಕ್ ನಿನ್ನೆಯಷ್ಟೇ, ರೆಮ್‌ಡಿಸಿವಿರ್ ಪಡೆಯಲು ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದಿದ್ದಾರೆ. ಆದರೆ ಫಡ್ನವೀಸರ ಬಿಜೆಪಿ ಪಕ್ಷ ಜನರಿಗೆ ವಿತರಿಸಲು ರೆಮ್‌ಡಿಸಿವಿರ್ ಸ್ಟಾಕ್ ಮಾಡಿಕೊಂಡಿದೆ. ಇದು ಪಕ್ಕಾ ಬಿಜೆಪಿ ಪಾಲಿಟಿಕ್ಸ್ ಎಂದಿರುವ ಸಾಕೇತ್ ಗೋಖಲೆ, ಸಂಕಷ್ಟದ ಸಮತದಲ್ಲೂ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ರಾಜಕಾರಣವನ್ನು ಟೀಕಿಸಿದ್ದಾರೆ,
ಈ ಬಗ್ಗೆ ಸರಿಯಾದ ತನಿಖೆ ಮಾಡುವಂತೆ ಅವರು ಮಹಾರಾಷ್ಟ್ರ ಗೃಹ ಸಚಿವ, ಆರೋಗ್ಯ ಸಚಿವರಿಗೆ ಪತ್ರ ಬರೆಯಲಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...