Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...