Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...