Homeಕರೋನಾ ತಲ್ಲಣದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

- Advertisement -
- Advertisement -

ದೆಹಲಿಗೆ ನೀಡಬೇಕಾಗಿದ್ದ ವೈದ್ಯಕೀಯ ಆಕ್ಸಿಜನ್‌ನ ಪ್ರಮಾಣವನ್ನು ಕಡಿಮೆಗೊಳಿಸಿ, ಇತರ ರಾಜ್ಯಗಳ ಕಡೆಗೆ ತಿರುಗಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಕೇಂದ್ರದ ವಿರುದ್ದ ಗಂಭೀರ ಆರೋಪ ಹೊರಿಸಿದ್ದಾರೆ. ದೆಹಲಿಗೆ ಮೀಸಲಾಗಿದ್ದ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದ್ದು, ಅದನ್ನು ಮತ್ತೇ ದೆಹಲಿಗೆ ನೀಡಬೇಕು ಎಂದು ಕೇಜ್ರಿವಾಲ್‌ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

ದೆಹಲಿಯು ಆಕ್ಸಿಜನ್‌‌ನ ತೀವ್ರ ಕೊರತೆಯನ್ನು ಎದುರಿಸುತ್ತಿದ್ದು, ರಾಜ್ಯದಲ್ಲಿ ಆಕ್ಸಿಜನ್‌‌ “ತುರ್ತುಸ್ಥಿತಿ”ಯಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯು ತೀವ್ರ ಆಕ್ಸಿಜನ್‌‌ನ ಕೊರತೆಯನ್ನು ಎದುರಿಸುತ್ತಿದೆ. ತೀವ್ರವಾಗಿ ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ, ದೆಹಲಿಯು ಸಾಮಾನ್ಯ ಪೂರೈಕೆಗಿಂತ ಹೆಚ್ಚಿನ ಆಕ್ಸಿಜನ್‌‌ ಅನ್ನು ಬಯಸುತ್ತದೆ. ಕೇಂದ್ರವು ಆಕ್ಸಿಜನ್‌‌ ಪೂರೈಕೆಯನ್ನು ಹೆಚ್ಚಿಸುವ ಬದಲು, ನಮ್ಮ ಸಾಮಾನ್ಯ ಪೂರೈಕೆಯನ್ನು ತೀವ್ರವಾಗಿ ಕಡಿಮೆ ಮಾಡಲಾಗಿದೆ. ಅಲ್ಲದೆ ದೆಹಲಿಯ ಕೋಟಾವನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ದೆಹಲಿಯಲ್ಲಿ ಆಕ್ಸಿಜನ್‌‌ ಎಮರ್ಜೆನ್ಸಿಯಾಗಿ ಮಾರ್ಪಟ್ಟಿದೆ” ಎಂದು ಬರೆದಿದ್ದಾರೆ.

“ನಮಗೆ ಹಾಸಿಗೆಗಳು,ಐಸಿಯು ಹಾಸಿಗೆ, ಆಕ್ಸಿಜನ್‌‌ ಬೇಕಾಗಿದೆ…ನಾವು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ಕೇಜ್ರಿವಾಲ್ ಇಂದು ಬೆಳಿಗ್ಗೆ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಉತ್ಕರ್ಷ ಮತ್ತು ಮುಸ್ಲಿಂ ಜನಪ್ರಾತಿನಿಧ್ಯಕ್ಕೆ ಹೊಡೆತ: ಇದೊಂದು ಗಂಭೀರ ಸಾಮಾಜಿಕ ದುರಂತ

ದೆಹಲಿ ಸರ್ಕಾರವು ಈಗಾಗಲೇ ಆಕ್ಸಿಜನ್‌‌ನ ಸಂಗ್ರಹಕ್ಕೆ ಸಹಾಯ ಮಾಡುವಂತೆ ಕೇಂದ್ರ ಸರ್ಕಾರದೊಂದಿಗೆ ಈಗಾಗಲೆ ಕೇಳಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದರು.

ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರಿಗೆ ಕೇಜ್ರವಾಲ್‌‌ ಪತ್ರ ಬರೆದಿದ್ದಾರೆ. ಪತ್ರದಲ್ಲಿ, “ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ಆಕ್ಸಿಜನ್‌‌ ಪೂರೈಸುವ ಪ್ರಮುಖ ಪೂರೈಕೆದಾರರಲ್ಲಿ ಒಬ್ಬರಾದ ‘ಮೆಸರ್ಸ್ ಇನಾಕ್ಸ್’‌ನ ಉತ್ಪಾದನೆಯನ್ನು ಹೆಚ್ಚಾಗಿ ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ಈ ನಿರ್ಣಾಯಕ ಹಂತದಲ್ಲಿ, ಈಗ ದೆಹಲಿಗೆ ನಿಯೋಜಿಸಲಾಗಿರುವ ಹೊಸ ಪೂರೈಕೆದಾರರೊಂದಿಗೆ ಆಸ್ಪತ್ರೆಗಳು ಒಪ್ಪಂದದ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಪ್ರಮುಖ ಆಸ್ಪತ್ರೆಗಳಲ್ಲಿ ಭಾರಿ ಕೊರತೆಯನ್ನು ಉಂಟುಮಾಡುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಒಡಲಿನಾಳದಿಂದ ಬಂದ ಅರಿವಿನ ಆಸ್ಫೋಟವೇ; ದಲಿತ ಚಳುವಳಿ ಮತ್ತು ಅಂಬೇಡ್ಕರ್

“ಪ್ರತಿದಿನ 700 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ನಿರಂತರವಾಗಿ ಪೂರೈಸಲು ಮತ್ತು ಬೇರೆ ರಾಜ್ಯಗಳಿಗೆ ಮುಖಮಾಡಿರುವ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ದೆಹಲಿಗೆ ನೀಡಲು ‘ಮೆಸಸ್ ಇನಾಕ್ಸ್’ ಸೂಕ್ತ ಸೂಚನೆಗಳನ್ನು ನೀಡುವಂತೆ ನಾನು ವಿನಂತಿಸುತ್ತೇನೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪಿಯೂಷ್‌ ಗೋಯಲ್ ಅವರು, ದೇಶವು ತನ್ನ ಸಾಮರ್ಥ್ಯದ 110% ಆಕ್ಸಿಜನ್‌‌ ಅನ್ನು ಉತ್ಪಾದಿಸುತ್ತಿದೆ ಎಂದು ಹೇಳಿದ್ದು, ಭಾನುವಾರದಂದು ಟ್ರಕ್‌ಗಳು ಲೋಡ್‌ ಆಗುತ್ತಿರುವ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮತ್ತು ಛತ್ತೀಸ್‌ಗಡದಂತಹ ಹಲವಾರು ರಾಜ್ಯಗಳು ಈಗಾಗಲೇ ಆಕ್ಸಿಜನ್‌‌ನ ಕೊರತೆಯಿಂದ ಬಳಲುತ್ತಿವೆ. ಪಂಜಾಬ್ ಆಕ್ಸಿಜನ್‌‌‌‌ ಕೊರತೆಯತ್ತ ಸಾಗುತ್ತಿದೆ, ಹೆಚ್ಚಿನ ಆಮ್ಲಜನಕಕ್ಕೆ ವ್ಯವಸ್ಥೆ ಮಾಡುವಂತೆ ಕೇಂದ್ರವನ್ನು ಕೇಳಿಕೊಂಡಿದೆ. ಅನೇಕ ಸ್ಥಳಗಳಲ್ಲಿ, ಜನರು ಕಾಳ ಸಂತೆಯಲ್ಲಿ ಆಕ್ಸಿಜನ್‌‌ ಖರೀದಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ವಿಡಿಯೋ ನೋಡಿ: ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...