Homeಕರೋನಾ ತಲ್ಲಣ18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ; ಕೇಂದ್ರ ಸರ್ಕಾರ ಅಸ್ತು

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ; ಕೇಂದ್ರ ಸರ್ಕಾರ ಅಸ್ತು

- Advertisement -
- Advertisement -

ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಕೊರೊನಾ ಲಸಿಕೆ ಹಾಕಲು ಅರ್ಹತೆ ಇದೆ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ.

ಕೊರೊನಾ ಪ್ರಕರಣಗಳ ತೀವ್ರ ಉಲ್ಬಣದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸರ್ಕಾರದ ವ್ಯಾಕ್ಸಿನೇಷನ್ ನೀತಿಯ ನಾಲ್ಕು ಮಹತ್ವದ ಬದಲಾವಣೆಗಳಲ್ಲಿ ಒಂದಾಗಿ ಈ ಪ್ರಕಟಣೆ ಹೊರಬಂದಿದೆ.

18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವರ್ಗದ ಜನರಿಗೆ ಲಸಿಕೆ ನೀಡುವ ಅಧಿಕಾರವನ್ನು ರಾಜ್ಯಗಳಿಗೆ ನೀಡಲಾಗಿದೆ.

ಇದನ್ನೂ ಓದಿ: ಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದ ಸೇನಾ ಶಾಸಕ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದು, “ಲಸಿಕೆ ಖರೀದಿಸಲು ರಾಜ್ಯಗಳಿಗೆ ಅನುಮತಿಸಬೇಕು. 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೂ ಸಹ ಕೊರೊನಾ ವಾರಿಯರ್ಸ್‌ಗೆ ಲಸಿಕೆ ನೀಡಬೇಕು” ಎಂದು ಶಿಫಾರಸು ಮಾಡಿದ ಒಂದು ದಿನದ ನಂತರ ಈ ತೀರ್ಮಾನವನ್ನು ಕೇಂದ್ರ ಸರ್ಕಾರ ತೆಗೆದು ಕೊಂಡಿದೆ.

ಎರಡನೆಯದಾಗಿ, ಹೆಚ್ಚುವರಿ ಲಸಿಕೆ ಪ್ರಮಾಣವನ್ನು ನೇರವಾಗಿ ಉತ್ಪಾದಕರಿಂದ ಖರೀದಸಲು ರಾಜ್ಯಗಳಿಗೆ ಅಧಿಕಾರ ನೀಡಲಾಗಿದೆ. ಇಲ್ಲಿಯವರೆಗೆ, ಕೇಂದ್ರವು ಎಲ್ಲಾ ಲಸಿಕೆಗಳ ಸರಬರಾಜುಗಳನ್ನು ತನ್ನ ವಶದಲ್ಲಿ ಇಟ್ಟು ಆದ್ಯತೆಯ ಗುಂಪುಗಳಿಗೆ ಲಸಿಕೆ ನೀಡಲು ರಾಜ್ಯಗಳಿಗೆ ಲಸಿಕೆಯನ್ನು ವಿತರಿಸುತ್ತಿತ್ತು.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ

ಮೂರನೆಯದಾಗಿ, ಲಸಿಕೆ ಪೂರೈಕೆಯ ಶೇಕಡಾ 50 ರಷ್ಟು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ, ಇದರಿಂದಾಗಿ ರಾಜ್ಯ ಸರ್ಕಾರಗಳಿಗೆ ಮುಕ್ತ ಮಾರುಕಟ್ಟೆಯಲ್ಲೂ ಲಸಿಕೆ ಲಭ್ಯವಾಗಲಿದೆ.

ಮುಕ್ತ ಮಾರುಕಟ್ಟೆಯಲ್ಲಿ ಇರುವ ಪೂರೈಕೆಯ 50% ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಕೂಡಾ ಖರೀದಿಸಬಹುದಾಗಿದ್ದು, ಲಸಿಕಾ ತಯಾರಕರು ನಿರ್ಧರಿಸಿದ ಬೆಲೆಯಲ್ಲಿ ಖರೀದಿಸಬೇಕಾಗುತ್ತದೆ. “ಲಸಿಕಾ ತಯಾರಕರು ತಮ್ಮ ಲಸಿಕೆಯ ಬೆಲೆಯನ್ನು ಮೇ 1 ರ ಮೊದಲು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಲಭ್ಯವಿರುವ 50% ರಷ್ಟು ಪೂರೈಕೆ ಲಸಿಕೆಯ ಮುಂಗಡ ಬೆಲೆಯನ್ನು ಘೋಷಣೆ ಮಾಡುತ್ತಾರೆ” ಎಂದು ಕೇಂದ್ರ ತಿಳಿಸಿದೆ.

ನಾಲ್ಕನೆಯದಾಗಿ, ಆಮದು ಮಾಡಿಕೊಳ್ಳುವ, ಬಳಸಲು ಸಿದ್ಧವಾದ ಲಸಿಕೆಗಳನ್ನು ಸಂಪೂರ್ಣವಾಗಿ ಭಾರತ ಸರ್ಕಾರದ ಹೊರತಾಗಿ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಕೇಂದ್ರವು ಅನುಮತಿಸಿದೆ. ಇದರರ್ಥ ಫಿಜರ್‌ನಂತಹ ಔಷಧ ಕಂಪೆನಿಗಳು ತಮ್ಮ ಲಸಿಕೆಗಳನ್ನು ಭಾರತದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ನೇರವಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡಬಹುದು.

ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...