Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...