Homeಅಂತರಾಷ್ಟ್ರೀಯಇರಾನ್ ನಿಂದ ಭಾರತ ತೈಲ ತರಿಸಿಕೊಂಡರೆ ಅಮೇರಿಕಾಗೆ ಏನು ಕಷ್ಟ?

ಇರಾನ್ ನಿಂದ ಭಾರತ ತೈಲ ತರಿಸಿಕೊಂಡರೆ ಅಮೇರಿಕಾಗೆ ಏನು ಕಷ್ಟ?

- Advertisement -
- Advertisement -

 

| ಭರತ್ ಹೆಬ್ಬಾಳ |

ಕಳೆದ ಹಲವಾರು ವರ್ಷಗಳಿಂದ ಅಮೆರಿಕ ಮತ್ತು ಇರಾನ್‍ನ ಸಂಬಂಧಗಳು ಹದಗೆಡುತ್ತಲೇ ಇವೆ. ಇದನ್ನೇ ಮುಂದುವರೆಸಿ, ಏಪ್ರಿಲ್ 22ರಂದು ಅಮೆರಿಕ ದೇಶವು ಇರಾನಿನ ಮೇಲೆ ಸಂಪೂರ್ಣ ಆರ್ಥಿಕ ಸಮರವನ್ನೇ ಘೋಷಿಸಿದೆ. ‘ಇರಾನಿನಿಂದ ಇತರ ದೇಶಗಳಿಗೆ ರಫ್ತು ಆಗುವ ತೈಲದ ಪ್ರಮಾಣವನ್ನು ಸೊನ್ನೆಗೆ ಇಳಿಸುವುದೇ ಈ ನಿರ್ಧಾರದ ಉದ್ದೇಶ. ಅದರಿಂದ ಆ ದೇಶದ ಆದಾಯದ ಪ್ರಮುಖ ಮೂಲವನ್ನು ಇಲ್ಲವಾಗಿಸುವುದು’. ಈ ಹೇಳಿಕೆ ಬಂದಿದ್ದು ಅಮೇರಿಕದ ವೈಟ್‍ಹೌಸ್‍ನಿಂದ. ತೈಲವೇ ಇರಾನಿನ ಪ್ರಮುಖ ರಫ್ತು ಆಗಿದ್ದು, ಅಮೇರಿಕದಲ್ಲಿ ಟ್ರಂಪ್ ಆಡಳಿತ ಬಂದನಂತರ ಇರಾನ್ ದೇಶದ ಕತ್ತುಹಿಸುಕಿ ತನ್ನ ತಾಳಕ್ಕೆ ಕುಣಿಯುವಂತೆ ಎಲ್ಲಾ ರೀತಿಯ ಒತ್ತಡಗಳನ್ನು ಹಾಕುತ್ತಿದೆ. ಪ್ರಸ್ತುತ ಸಮಯದಲ್ಲಿ ಇರಾನ್ ಪ್ರತಿನಿತ್ಯ 10 ಲಕ್ಷ ಬ್ಯಾರೆಲ್ ತೈಲವನ್ನು ರಫ್ತು ಮಾಡುತ್ತಿದೆ. 2018ರ ನವೆಂಬರ್ 5ರಂದು ಮೊದಲ ಬಾರಿ ನಿರ್ಬಂಧನೆಗಳನ್ನು ಹೇರಲಾಗಿತ್ತು. ಆಗ ಅಮೆರಿಕ 8 ದೇಶಗಳಿಗೆ ತೈಲದ ಆಮದನ್ನು ನಿಲ್ಲಿಸಲು 6 ತಿಂಗಳ ಸಮಯಾವಕಾಶವನ್ನು ನೀಡಲಾಗಿತ್ತು. ಒಂದೇ ಬಾರಿ ಸಂಪೂರ್ಣ ನಿರ್ಬಂಧ ಹೇರಿದರೆ ಮಾರುಕಟ್ಟೆಗಳು ಅತಂತ್ರಗೊಳ್ಳುವವು ಎನ್ನುವ ಆತಂಕದ ಕಾರಣದಿಂದ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು. ನಿರ್ಬಂಧನೆಗಳಿಗಿರುವ ಈ ವಿನಾಯಿತಿಗಳು ಏಪ್ರಿಲ್ 30 ರಂದು ಕೊನೆಗೊಳ್ಳುತ್ತವೆ, ಮೇ 1ರಿಂದ ಎಲ್ಲ ಎಂಟೂ ದೇಶಗಳು ನಿರ್ಬಂಧನೆಗಳಿಗೆ ಬದ್ಧವಾಗಬೇಕಿದೆ.

ಚೈನಾ, ಭಾರತ, ಜಪಾನ್, ದಕ್ಷಿಣ ಕೋರಿಯಾ, ತೈವಾನ್, ಟರ್ಕಿ, ಇಟಲಿ ಮತ್ತು ಗ್ರೀಸ್ ಈ ನಿರ್ಬಂಧನೆಯಿಂದ 6 ತಿಂಗಳು ವಿನಾಯಿತಿ ಪಡೆದ ದೇಶಗಳು. ಜಪಾನ್, ದಕ್ಷಿಣ ಕೋರಿಯಾ ಮತ್ತು ತೈವಾನ್ ದೇಶಗಳು ಎರಡನೇ ಮಹಾಯುದ್ಧದ ನಂತರ ಅಮೇರಿಕವೇ ಈ ದೇಶಗಳ ರಕ್ಷಕ ದೇಶವಾಗಿರುವುದರಿಂದ ದಿಗ್ಬಂಧನೆಗಳಿಗೆ ಒಪ್ಪಿಕೊಳ್ಳುತ್ತವೆ. ಇಟಲಿ ಮತ್ತು ಗ್ರೀಸ್ ದೇಶಗಳು ಇರಾನ್‍ನಿಂದ ತುಂಬಾ ಕಡಿಮೆ ತೈಲ ಆಮದು ಮಾಡಿಕೊಳ್ಳುವುದರಿಂದ ಹೆಚ್ಚಿನ ವ್ಯತ್ಯಾಸ ಆಗುವುದಿಲ್ಲ. ಚೈನಾ ದೇಶ ಈ ದಿಗ್ಬಂಧನೆಗಳಿಗೆ ಬದ್ಧವಾಗುವುದೋ ಇಲ್ಲವೋ ಎನ್ನುವುದು ಸದ್ಯಕ್ಕೆ ನಡೆಯುತ್ತಿರುವ ಟ್ರೇಡ್ ವಾರ್ ಮೇಲೆ ಅವಲಂಬಿತವಾಗಿದೆ. ಭಾರತದ ಪೆಟ್ರೋಲಿಯಮ್ ಸಚಿವರು ಅಮೆರಿಕ ವಿಧಿಸಿದ ದಿಗ್ಬಂಧನೆಗಳಿಗೆ ಬದ್ಧರಿರುವುದಾಗಿ ಹೇಳಿಕೆ ನೀಡಿದ್ದರಾದರೂ ಅಂತಿಮ ನಿರ್ಣಯ ಹೊಸ ಸರಕಾರ ಬಂದ ನಂತರವೇ. ಇರಾನ್‍ನಿಂದ ದೊಡ್ಡ ಪ್ರಮಾಣದಲ್ಲಿ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವ ಒಂದು ದೇಶ ಟರ್ಕಿ. ಈಗ ಬೇರೆ ಮೂಲಗಳಿಂದ ಇಷ್ಟು ಕಡಿಮೆ ಸಮಯದಲ್ಲಿ ತೈಲ ಮತ್ತು ಅನಿಲವನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗದೇ ಇರಬಹುದಾಗಿ, ಅದರ ಪರಿಣಾಮಗಳನ್ನು ಎದುರಿಸಬೇಕಾಗುವುದು.

ಜಾಯಿಂಟ್ ಕಾಂಪ್ರೆಹೆನ್ಸಿವ್ ಪ್ಲಾನ್ ಆಫ್ ಆಕ್ಷನ್ (ಜೆಸಿಪಿಓಏ) ಎಂದು ಕರೆಯಲಾಗುವ ಬಹುಪಕ್ಷೀಯ ನ್ಯೂಕ್ಲಿಯರ್ ಒಪ್ಪಂದದಿಂದ ಮೇ 2018ರಲ್ಲಿ ಅಮೇರಿಕವು ಏಕಪಕ್ಷೀಯವಾಗಿ ಹಿಂತೆಗೆದು ಕೊಂಡಿತು, ಅಂದಿನಿಂದ ಈ ಬಿಕ್ಕಟ್ಟು ಉಲ್ಬಣಿಸುತ್ತಲೇ ಇದೆ. ಬರಾಕ್ ಒಬಾಮಾ ಆಡಳಿತದ ಕಾಲದಲ್ಲಿ(2015) ಇರಾನ್ ಮತ್ತು ಆರು ವಿಶ್ವಶಕ್ತಿಗಳ ಮಧ್ಯೆ ಜೆಸಿಪಿಓಏ ರಚಿಸಲಾಗಿತ್ತು. ಆ ಒಪ್ಪಂದದಲ್ಲಿ ಹಿಂಪಡೆಯಲಾದ ಏಕಪಕ್ಷೀಯ ದಿಗ್ಬಂಧನೆಗಳನ್ನು ಟ್ರಂಪ್ ಆಡಳಿತ ಮತ್ತೆ ವಿಧಿಸಿದೆ. ಇತ್ತೀಚಿಗೆ ಹಲವಾರು ಷರತ್ತುಗಳ ಅಡಿಯಲ್ಲಿ ಈ ಒಪ್ಪಂದವನ್ನು ಇನ್ನೊಂದು ಸುತ್ತು ಚರ್ಚಿಸುವ ಪ್ರಸ್ತಾಪ ಇಟ್ಟಿದೆ. ಸಿರಿಯಾದಲ್ಲಿ ಆಳ್ವಿಕೆ ಬದಲಾವಣೆಗಾಗಿ ಅಮೆರಿಕ ಮಾಡಿದ ಯತ್ನಗಳು, ವೆನೆಜುವೆಲಾದಲ್ಲೂ ಮಾಡಿದ ಪ್ರಯತ್ನ ಹಾಗೂ ಸದ್ಯಕ್ಕೆ ನಡೆಯುತ್ತಿರುವ ಯುದ್ಧಗಳ ಮಧ್ಯೆ ಇರಾನ್ ಅನ್ನು ಒಂದು ದುಷ್ಟ ಭಯೋತ್ಪಾದಕ ದೇಶವನ್ನಾಗಿ ಚಿತ್ರಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ಇರಾನಿನ ಆಳ್ವಿಕೆಯು ನ್ಯೂಕ್ಲಿಯರ್ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುತ್ತಿದೆಯೆಂದೂ ಹಾಗೂ ಮಧ್ಯ ಪ್ರಾಚ್ಯ ದೇಶಗಳಲ್ಲಿ ಅಮೆರಿಕ ವಿರೋಧಿ ಭಾವನೆಗಳನ್ನು ಹರಡಿಸುವ ಪ್ರಯತ್ನ ಇರಾನ್ ಮಾಡುತ್ತಿದೆ ಎಂದು ಅಮೆರಿಕ ಚಿತ್ರಿಸುತ್ತಿದೆ. 2002ರಲ್ಲಿ ಪ್ರಾರಂಭಿಸಿದ ಇರಾಕ್‍ನ ಯುದ್ಧವನ್ನೂ ಇದೇ ರೀತಿಯಲ್ಲಿ ಪ್ರಾರಂಭಿಸಲಾಗಿತ್ತು. ಆಗಲೂ ಈಗಿರುವ ರಕ್ಷಣಾ ಸಲಹಾಕಾರರಾದ ಜಾನ್ ಬೋಲ್ಟನ್ ಅವರೇ ಸಲಹಾಕಾರರಾಗಿದ್ದರು.

ಈಗ ಅಮೇರಿಕವು ಮಾತುಕತೆಗಳಿಗೆ ಇಟ್ಟಿರುವ ಷರತ್ತುಗಳನ್ನು ‘ಸುಳ್ಳುಗಳ ಸರಮಾಲೆ, ಇರಾನ್ ದೇಶವನ್ನು ತನ್ನ ಮಂಡಿಯೂರಿಸುವ ಉದ್ದೇಶದಿಂದ ವಿಧಿಸಲಾಗಿದ್ದು’ ಎಂದು ಇರಾನ್‍ನ ಅಧ್ಯಕ್ಷ ಹಸನ್ ರೋಹಾನಿ ಹೇಳಿದರು. ‘ಈ ಮುಂಚೆ ಮಾಡಿದ ಒಪ್ಪಂದಗಳಿಂದ ಅಮೆರಿಕ ಹಿಂದಕ್ಕೆ ಹೋಗಿರುವಾಗ ಇನ್ನೊಂದು ಹೊಸ ಒಪ್ಪಂದಕ್ಕೆ ಇರಾನ್ ದೇಶ ಏಕೆ ಸೇರಬೇಕು’ ಎಂದು ಇರಾನ್‍ನ ವಿದೇಶಾಂಗ ಸಚಿವ ಕೇಳಿದರು. ಅವರು ಸ್ಪಷ್ಟವಾಗಿ ಹೇಳಿದ ಇನ್ನೊಂದು ವಿಷಯವೇನೆಂದರೆ, ‘ಟ್ರಂಪ್ ಯುದ್ಧವನ್ನು ಬಯಸುವುದಿಲ್ಲ ಎನ್ನುವ ನಂಬಿಕೆ ಇದೆ ಆದರೆ ಅವರ ಸಲಹಾಕಾರರೆ (ಬಿ-ಟೀಮ್) ಈ ಬಿಕ್ಕಟ್ಟಿಗೆ ಕಾರಣ’. ಇಲ್ಲಿ ಬಿ ಟೀಮ್ ಎಂದರೆ, ಇಸ್ರೇಲಿನ ಬಿಬಿ, ಸೌದಿಯ ಬಿನ್ ಸಲ್ಮಾನ್, ಯು.ಏ.ಈ.ಯ ಬಿನ್ ಖಾಲೆದ್ ಹಾಗೂ ಅಮೇರಿಕದ ಜಾನ್ ಬೋಲ್ಟನ್. ಇಂತಹ ಒತ್ತಡದ ತಂತ್ರಗಾರಿಕೆಯಿಂದ ಇರಾನ್ ದೇಶವನ್ನು ಮಂಡಿಯೂರುವ ಪರಿಸ್ಥಿತಿಗೆ ತರಲಾಗದು ಎಂತಲೂ ವಿದೇಶಾಂಗ ಸಚಿವ ಹೇಳಿದ್ದಾರೆ.

‘ಸ್ಟ್ರೇಟ್ ಆಫ್ ಹೊರ್ಮುಝ್’ ಎಂದು ಕರೆಯಲಾಗುವ ಪರ್ಷಿಯನ್ ಕೊಲ್ಲಿಯಿಂದಲೇ ವಿಶ್ವದ 35% ತೈಲ ಹಾದುಹೋಗಬೇಕಿದೆ. ಆ ಕೊಲ್ಲಿ ಇರಾನ್‍ನ ಜಲಭಾಗವನ್ನು ಹೊಂದಿದೆ. ಇರಾನಿನ ರೆವಲೂಷನರಿ ಗಾಡ್ರ್ಸ್ ಆ ಕೊಲ್ಲಿಯ ರಕ್ಷಣೆ ಮಾಡುತ್ತಾರೆ. ಏಪ್ರಿಲ್ 8 ರಂದು ಟ್ರಂಪ್ ಆಡಳಿತವು ಇರಾನಿಯನ್ ರೆವಲೂಷನರಿ ಗಾಡ್ರ್ಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿತು. ಅಮೆರಿಕವು ಈ ರೀತಿ ಬೇರೊಂದು ದೇಶದ ಸೈನ್ಯವನ್ನು ‘ಭಯೋತ್ಪಾದಕ ಗುಂಪು’ ಎಂದು ಅಧೀಕೃತವಾಗಿ ಘೋಷಿಸಿದ್ದು ಇದೇ ಮೊದಲು. ಇರಾನ್ ಅದಕ್ಕೆ ಪ್ರತಿಕ್ರಿಯೆಯಾಗಿ, ಅಮೆರಿಕ ದೇಶವನ್ನು ‘ಭಯೋತ್ಪಾದನೆಯ ಪ್ರಾಯೋಜಕ ದೇಶ’ ಎಂದು ಕರೆದು, ಆ ಭಾಗದಲ್ಲಿರುವ ಅಮೆರಿಕದ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪು’ಗಳು ಎಂದು ಕರೆದಿದೆ.

ಐತಿಹಾಸಿಕವಾಗಿ, ಭಾರತ ಮತ್ತು ಇರಾನ್ ಒಳ್ಳೆಯ ಬಾಂಧವ್ಯಗಳನ್ನು ಹೊಂದಿವೆ. ಮನಮೋಹನ್ ಸಿಂಗ್ ಮತ್ತು ನರೇಂದ್ರ ಮೋದಿಯ ಆಳ್ವಿಕೆಯ ಕಾಲದಲ್ಲಿ ಇರಾನ್ ವಿರುದ್ಧ ದಿಗ್ಬಂಧನೆಗಳನ್ನು ಹೇರಿದ್ದಾಗ ಭಾರತವು ಇರಾನ್ ಜೊತೆಗೆ ನಿಂತು, ಆ ದೇಶಕ್ಕೆ ಸಹಾಯ ನೀಡಿದೆ. ಅಮೆರಿಕದ ಒತ್ತಡದ ಪರಿಸ್ಥಿತಿಯಲ್ಲಿ ಮುಂದೆ ಈ ಪ್ರಾದೇಶಿಕ ಸಂಬಂಧವನ್ನು ಗಟ್ಟಿಗೊಳಿಸುವುದೋ ಅಥವಾ ಅಮೆರಿಕಾದ ಒತ್ತಡಕ್ಕೆ ಮಣಿದು ಎರಡು ದೇಶಗಳ ಐತಿಹಾಸಿಕ ಸ್ನೇಹಕ್ಕೆ ದ್ರೋಹಬಗೆಯುವುದೇ ಎನ್ನುವುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...