Homeಮುಖಪುಟಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಭಾರತವೂ ಒಂದಾಗಿದೆ..

- Advertisement -
- Advertisement -

ಕ್ಲಾಸ್‌ಮೇಟ್ ಮೊಂಡಿಯಲ್ ಎಂ ಸಂಸ್ಥೆ ಮಾಧ್ಯಮಗಳ ಸ್ವಾತಂತ್ರ್ಯ ಸೂಚ್ಯಂಕ ಕುರಿತು ವರದಿಯೊಂದನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯಲ್ಲಿ ಭಾರತ 142 ನೇ ಸ್ಥಾನದಲ್ಲಿದೆ. ಇದು ಭಾರತದ ಮಾಧ್ಯಮಗಳ ದುರಾವಸ್ಥೆ, ಬೇಜವಾಬ್ದಾರಿತನ ಮತ್ತು ಜನದ್ರೋಹಕ್ಕೆ ಸಾಕ್ಷಿಯಾಗಿದೆ.

ಭಾರತದ ಮಾಧ್ಯಮ ಹೀಗೆ ಪ್ರಪಾತಕ್ಕೆ ಬೀಳಲು ಕಾರಣವೇನೆಂದು ಟಿಪ್ಪಣಿಯನ್ನೂ ಅದು ನೀಡಿದೆ. ಇದಕ್ಕೆಲ್ಲ ಮೋದಿ ಸರ್ಕಾರವೇ ಕಾರಣ ಎಂಬುದನ್ನು ಅದು ಬಲವಾಗಿ ಪ್ರತಿಪಾದಿಸಿದೆ. ಆ ಟಿಪ್ಪಣಿಯ ಯಥಾವತ್ ಅನುವಾದ ಇಲ್ಲಿದೆ:

ಮೋದಿಯವರು ಮಾಧ್ಯಮಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. 2020 ರಲ್ಲಿ ಅವರ ಕೆಲಸಕ್ಕೆ ಸಂಬಂಧಿಸಿದಂತೆ ನಾಲ್ವರು ಪತ್ರಕರ್ತರು ಕೊಲ್ಲಲ್ಪಟ್ಟರು. ತಮ್ಮ ಜವಾನ್ದಾರಿ ಕೆಲಸಗಳನ್ನು ಪ್ರಮಾಣಿಕವಾಗಿ ಮಾಡುವ ಪತ್ರಕರ್ತರು ಇವತ್ತು ಜೀವಭಯ ಎದುರಿಸುತ್ತಿದ್ದಾರೆ. ಪ್ರಮಾಣಿಕ ಪತ್ರಕರ್ತರ ಪಾಲಿಗೆ ಭಾರತವು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ. ವರದಿಗಾರರ ವಿರುದ್ಧದ ಪೊಲೀಸ್ ಹಿಂಸಾಚಾರ, ರಾಜಕೀಯ ಕಾರ್ಯಕರ್ತರ ಹೊಂಚುದಾಳಿ ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ಸ್ಥಳೀಯ ಅಧಿಕಾರಿಗಳಿಂದ ಪ್ರಚೋದಿಸಲ್ಪಟ್ಟ ಪ್ರತೀಕಾರಗಳು ಸೇರಿದಂತೆ ಎಲ್ಲ ರೀತಿಯ ದಾಳಿಗೆ ಅವರು ಒಡ್ಡಿಕೊಳ್ಳಬೇಕಾಗಿದೆ.

2019 ರ ವಸಂತ ಋತುವಿನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಿಂದಾಗಿ, ಪ್ರಧಾನಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷವು ಅಗಾಧ ಬಹುಮತದಿಂದ ಜಯ ಗಳಿಸಿದಾಗಿನಿಂದಲೂ, ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಣತಿಯಂತೆ ಕೆಲಸ ಮಾಡಲು ಮಾಧ್ಯಮಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆಮೂಲಾಗ್ರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಗೆ ನಾಂದಿ ಹಾಡಿದ ಹಿಂದುತ್ವವನ್ನು ಸಮರ್ಥಿಸುವ ಬಹುಪಾಲು ಭಾರತೀಯರು, ಸಾರ್ವಜನಿಕ ಚರ್ಚೆಯಿಂದ “ರಾಷ್ಟ್ರವಿರೋಧಿ” ಚಿಂತನೆಯ ಎಲ್ಲಾ ಅಭಿವ್ಯಕ್ತಿಗಳನ್ನು ಶುದ್ಧೀಕರಿಸಲು ಪ್ರಯತ್ನಿಸುತ್ತಿದ್ದಾರೆ.

ಹಿಂದುತ್ವ ಅನುಯಾಯಿಗಳನ್ನು ಕಿರಿಕಿರಿಗೊಳಿಸುವ ವಿಷಯಗಳ ಬಗ್ಗೆ ಮಾತನಾಡಲು ಅಥವಾ ಬರೆಯಲು ಧೈರ್ಯವಿರುವ ಪ್ರಾಮಾಣಿಕ ಪತ್ರಕರ್ತರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂಘಟಿತ ದ್ವೇಷ ಅಭಿಯಾನಗಳು ಭಯ ಹುಟ್ಟಿಸುತ್ತವೆ. ಇನ್ನೂ ಅಪಾಯಕಾರಿ ಆಗಿರುವ ವಿಷಯವೆಂದರೆ, ಈ ಅಭಿಯಾನಗಳು ಅಂತಹ ಪ್ರಾಮಾಣಿಕ ಪತ್ರಕರ್ತರ ಹತ್ಯೆಗೆ ಕರೆಗಳನ್ನು ನೀಡುತ್ತವೆ!.

ಈ ಸಂಘಟಿತ ಹಿಂದೂತ್ವ ಜಾಲದ ಗುರಿಗಳು ಮಹಿಳೆಯರಾಗಿದ್ದಾಗ ಪ್ರಚಾರಗಳು ವಿಶೇಷವಾಗಿ ಹಿಂಸಾತ್ಮಕವಾಗಿರುತ್ತದೆ ಮತ್ತು ಅಸಹ್ಯಕರವಾಗಿರುತ್ತದೆ. ಅಧಿಕಾರಸ್ಥರ ವಿರುದ್ಧ ಬರೆದಾಗ ಅಥವಾ ಪ್ರಸಾರ ಮಾಡಿದಾಗ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ಜಡಿದು ಬೆದರಿಸಲಾಗುತ್ತಿದೆ. ಕೆಲವು ಪ್ರಾಸಿಕ್ಯೂಟರ್‌ಗಳು ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಪ್ರಯೋಸಿದುತ್ತಾರೆ! ಇದರ ಅಡಿಯಲ್ಲಿ “ದೇಶದ್ರೋಹ”ದ ಹೆಸರಿನಲ್ಲಿ ಜೀವಾವಧಿ ಶಿಕ್ಷೆಗೆ ಪತ್ರಕರ್ತರನ್ನು ದೂಡುವ ಹುನ್ನಾರವಿದೆ.

2020 ರಲ್ಲಿ, ಕೊರೊನಾ ಬಿಕ್ಕಟ್ಟಿನ ಲಾಭವನ್ನು ಸರ್ಕಾರವು ಪಡೆದುಕೊಂಡಿತು. ಅಧಿಕೃತ ಸ್ಥಾನದೊಂದಿಗೆ ಭಿನ್ನಾಭಿಪ್ರಾಯದ ಮಾಹಿತಿಯನ್ನು ಒದಗಿಸುವ ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಸುದ್ದಿ ಪ್ರಸಾರದ ನಿಯಂತ್ರಣವನ್ನು ಹೆಚ್ಚಿಸಿತು.

ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದೆ. ಅಲ್ಲಿ ವರದಿಗಾರರು ಹೆಚ್ಚಾಗಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಕಿರುಕುಳಕ್ಕೊಳಗಾಗುತ್ತಾರೆ . ಈ ಸರ್ವಾಧಿಕಾರದ ದೌರ್ಜನ್ಯ ಹೇಗಿದೆ ಎಂದರೆ ಕಾಶ್ಮೀರ್ ಟೈಮ್ಸ್‌ನಂತಹ ಪ್ರಮುಖ ಮಾಧ್ಯಮವನ್ನೂ ಮುಚ್ಚುವಂತೆ ಮಾಡುವ ಕುತಂತ್ರಗಳು ನಡೆದಿವೆ.

ಸಿಎಎ ವಿರೋಧಿ, ರೈತ ಪರ ಹೋರಾಟ: ಪತ್ರಕರ್ತರೇ ಟಾರ್ಗೆಟ್

ಸಿಎಎ-ಎನ್‌ಆರ್‌ಸಿ ವಿರುದ್ಧ ಕಳೆದ ವರ್ಷ ನಡೆದ ಚಳುವಳಿಯ ಪರವಿದ್ದ ಪತ್ರಕರ್ತರು, ಸ್ವತಂತ್ರ ಮಾಧ್ಯಮಗಳಿಗೆ ಮುಕ್ತವಾಗಿ ಬರೆಯುತ್ತಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಪೊಲೀಸರು ಸಾಕಷ್ಟು ಕಿರಿಕುಳ ನೀಡುತ್ತ ಬಂದಿದ್ದಾರೆ.

ದೆಹಲಿ ಗಡಿಗಳಲ್ಲಿ ನಡೆದಿರುವ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಅಗತ್ಯತೆಯನ್ನು ನಿರಂತರವಾಗಿ ವರದಿ ಮಾಡುತ್ತಿದ್ದ ಕ್ಯಾರವಾನ್ ವರದಿಗಾರ ಒಬ್ಬರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸರು ಅವರನ್ನು ಜೈಲಿಗೆ ತಳ್ಳಿದ್ದರು.

ಕೇಂದ್ರ ಗೃಹ ಇಲಾಖೆ ಅಧಿನದಲ್ಲಿರುವ ದೆಹಲಿ ಪೊಲೀಸ್ ಇಂತಹ ಕುಕೃತ್ಯಗಳಿಗೆ ಹೆಸರುವಾಸಿ ಆಗಿದ್ದಾರೆ. ಟ್ವೀಟ್ ಒಂದರ ನೆಪದಲ್ಲಿ ಹಿರಿಯ ಪತ್ರಕರ್ತ ರಾಜನಾಥ್ ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಮೇಲೆ ದೇಶದ್ರೋಹದ ಅಪಾದನೆ ಅಡಿ ಕೇಸು ದಾಖಲಿಸಲಾಗಿತ್ತು.

ಗೌರಿ ಲಂಕೇಶ್ ಹತ್ಯೆ ಹಿಂದೆಯೂ!

ಸೂಚ್ಯಂಕ ಬಿಡುಗಡೆ ಮಾಡಿದ ಸಂಸ್ಥೆ 2019ರ ನಂತರ ಇದು ವಿಪರೀತಕ್ಕೆ ಹೋಗಿದೆ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೇ ಇಂತಹ ಒಂದು ವ್ಯಸ್ಥಿತ ಸಂಚು ಶುರುವಾಗಿತ್ತು. ಪತ್ರಕರ್ತರಲ್ಲದಿದ್ದರೂ ಸಾಹಿತ್ಯಿಕ, ವೈಚಾರಿಕ ನಿಲುವುಗಳ ಕುರಿತು ಬರೆಯುತ್ತಿದ್ದ ದಾಬೋಲ್ಕರ್, ಪನ್ಸಾರೆ, ಕಲಬುರ್ಗಿಯವರ ಹತ್ಯೆ ಹಿಂದೆ ಈ ಒಂದು ‘ವ್ಯವಸ್ಥಿತ’ ಹಿಂದೂತ್ವವಾದಿ ಸಂಘಟನೆಗಳೇ ಎಂದು ಚಾರ್ಜ್‌ಶೀಟ್‌ಗಳಲ್ಲಿ ದಾಖಲೆ ಸಮೇತ ಆರೋಪಿಸಲಾಗಿದೆ.

ಸದಾ ಹಿಂದೂತ್ವವಾದಿಗಳ ದುಷ್ಕೃತ್ಯಗಳನ್ನು ಖಡಾಖಂಡಿತವಾಗಿ ಮುಲಾಜಿಲ್ಲದೆ ಟೀಕಿಸುವ ಛಾತಿ ಹೊಂದಿದ್ದ, ಅಪ್ಪಟ ಸೆಕ್ಯುಲರ್ ಮನಸ್ಸಿನ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಇದೇ ಅಜೆಂಡಾಗಳು ಕೆಲಸ ಮಾಡಿವೆ.

ಹೀಗಾಗಿ ಇಲ್ಲಿ ಮಾಧ್ಯಮ ಸ್ವಾತಂತ್ರ್ಯ ಎಂಬುದು ಪ್ರಪಾತಕ್ಕೆ ಬಿದ್ದಿದೆ. ಕೊರೋನಾ ವೈರಸ್ ಎರಡನೇ ಅಲೆ ಸೃಷ್ಟಿಸಿರುವ ಅನಾಹುತಕ್ಕೆ ಪ್ರಭುತ್ವದ ವಿರುದ್ಧ ನಿಲ್ಲಬೇಕಿದ್ದ ಬಹುಪಾಲು ಮಾಧ್ಯಮಗಳು ಮೌನವಾಗಿವೆ.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...