Homeಮುಖಪುಟಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಭಾರತವೂ ಒಂದಾಗಿದೆ..

- Advertisement -
- Advertisement -

ಕ್ಲಾಸ್‌ಮೇಟ್ ಮೊಂಡಿಯಲ್ ಎಂ ಸಂಸ್ಥೆ ಮಾಧ್ಯಮಗಳ ಸ್ವಾತಂತ್ರ್ಯ ಸೂಚ್ಯಂಕ ಕುರಿತು ವರದಿಯೊಂದನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯಲ್ಲಿ ಭಾರತ 142 ನೇ ಸ್ಥಾನದಲ್ಲಿದೆ. ಇದು ಭಾರತದ ಮಾಧ್ಯಮಗಳ ದುರಾವಸ್ಥೆ, ಬೇಜವಾಬ್ದಾರಿತನ ಮತ್ತು ಜನದ್ರೋಹಕ್ಕೆ ಸಾಕ್ಷಿಯಾಗಿದೆ.

ಭಾರತದ ಮಾಧ್ಯಮ ಹೀಗೆ ಪ್ರಪಾತಕ್ಕೆ ಬೀಳಲು ಕಾರಣವೇನೆಂದು ಟಿಪ್ಪಣಿಯನ್ನೂ ಅದು ನೀಡಿದೆ. ಇದಕ್ಕೆಲ್ಲ ಮೋದಿ ಸರ್ಕಾರವೇ ಕಾರಣ ಎಂಬುದನ್ನು ಅದು ಬಲವಾಗಿ ಪ್ರತಿಪಾದಿಸಿದೆ. ಆ ಟಿಪ್ಪಣಿಯ ಯಥಾವತ್ ಅನುವಾದ ಇಲ್ಲಿದೆ:

ಮೋದಿಯವರು ಮಾಧ್ಯಮಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. 2020 ರಲ್ಲಿ ಅವರ ಕೆಲಸಕ್ಕೆ ಸಂಬಂಧಿಸಿದಂತೆ ನಾಲ್ವರು ಪತ್ರಕರ್ತರು ಕೊಲ್ಲಲ್ಪಟ್ಟರು. ತಮ್ಮ ಜವಾನ್ದಾರಿ ಕೆಲಸಗಳನ್ನು ಪ್ರಮಾಣಿಕವಾಗಿ ಮಾಡುವ ಪತ್ರಕರ್ತರು ಇವತ್ತು ಜೀವಭಯ ಎದುರಿಸುತ್ತಿದ್ದಾರೆ. ಪ್ರಮಾಣಿಕ ಪತ್ರಕರ್ತರ ಪಾಲಿಗೆ ಭಾರತವು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ. ವರದಿಗಾರರ ವಿರುದ್ಧದ ಪೊಲೀಸ್ ಹಿಂಸಾಚಾರ, ರಾಜಕೀಯ ಕಾರ್ಯಕರ್ತರ ಹೊಂಚುದಾಳಿ ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ಸ್ಥಳೀಯ ಅಧಿಕಾರಿಗಳಿಂದ ಪ್ರಚೋದಿಸಲ್ಪಟ್ಟ ಪ್ರತೀಕಾರಗಳು ಸೇರಿದಂತೆ ಎಲ್ಲ ರೀತಿಯ ದಾಳಿಗೆ ಅವರು ಒಡ್ಡಿಕೊಳ್ಳಬೇಕಾಗಿದೆ.

2019 ರ ವಸಂತ ಋತುವಿನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಿಂದಾಗಿ, ಪ್ರಧಾನಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷವು ಅಗಾಧ ಬಹುಮತದಿಂದ ಜಯ ಗಳಿಸಿದಾಗಿನಿಂದಲೂ, ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಣತಿಯಂತೆ ಕೆಲಸ ಮಾಡಲು ಮಾಧ್ಯಮಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆಮೂಲಾಗ್ರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಗೆ ನಾಂದಿ ಹಾಡಿದ ಹಿಂದುತ್ವವನ್ನು ಸಮರ್ಥಿಸುವ ಬಹುಪಾಲು ಭಾರತೀಯರು, ಸಾರ್ವಜನಿಕ ಚರ್ಚೆಯಿಂದ “ರಾಷ್ಟ್ರವಿರೋಧಿ” ಚಿಂತನೆಯ ಎಲ್ಲಾ ಅಭಿವ್ಯಕ್ತಿಗಳನ್ನು ಶುದ್ಧೀಕರಿಸಲು ಪ್ರಯತ್ನಿಸುತ್ತಿದ್ದಾರೆ.

ಹಿಂದುತ್ವ ಅನುಯಾಯಿಗಳನ್ನು ಕಿರಿಕಿರಿಗೊಳಿಸುವ ವಿಷಯಗಳ ಬಗ್ಗೆ ಮಾತನಾಡಲು ಅಥವಾ ಬರೆಯಲು ಧೈರ್ಯವಿರುವ ಪ್ರಾಮಾಣಿಕ ಪತ್ರಕರ್ತರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂಘಟಿತ ದ್ವೇಷ ಅಭಿಯಾನಗಳು ಭಯ ಹುಟ್ಟಿಸುತ್ತವೆ. ಇನ್ನೂ ಅಪಾಯಕಾರಿ ಆಗಿರುವ ವಿಷಯವೆಂದರೆ, ಈ ಅಭಿಯಾನಗಳು ಅಂತಹ ಪ್ರಾಮಾಣಿಕ ಪತ್ರಕರ್ತರ ಹತ್ಯೆಗೆ ಕರೆಗಳನ್ನು ನೀಡುತ್ತವೆ!.

ಈ ಸಂಘಟಿತ ಹಿಂದೂತ್ವ ಜಾಲದ ಗುರಿಗಳು ಮಹಿಳೆಯರಾಗಿದ್ದಾಗ ಪ್ರಚಾರಗಳು ವಿಶೇಷವಾಗಿ ಹಿಂಸಾತ್ಮಕವಾಗಿರುತ್ತದೆ ಮತ್ತು ಅಸಹ್ಯಕರವಾಗಿರುತ್ತದೆ. ಅಧಿಕಾರಸ್ಥರ ವಿರುದ್ಧ ಬರೆದಾಗ ಅಥವಾ ಪ್ರಸಾರ ಮಾಡಿದಾಗ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ಜಡಿದು ಬೆದರಿಸಲಾಗುತ್ತಿದೆ. ಕೆಲವು ಪ್ರಾಸಿಕ್ಯೂಟರ್‌ಗಳು ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಪ್ರಯೋಸಿದುತ್ತಾರೆ! ಇದರ ಅಡಿಯಲ್ಲಿ “ದೇಶದ್ರೋಹ”ದ ಹೆಸರಿನಲ್ಲಿ ಜೀವಾವಧಿ ಶಿಕ್ಷೆಗೆ ಪತ್ರಕರ್ತರನ್ನು ದೂಡುವ ಹುನ್ನಾರವಿದೆ.

2020 ರಲ್ಲಿ, ಕೊರೊನಾ ಬಿಕ್ಕಟ್ಟಿನ ಲಾಭವನ್ನು ಸರ್ಕಾರವು ಪಡೆದುಕೊಂಡಿತು. ಅಧಿಕೃತ ಸ್ಥಾನದೊಂದಿಗೆ ಭಿನ್ನಾಭಿಪ್ರಾಯದ ಮಾಹಿತಿಯನ್ನು ಒದಗಿಸುವ ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಸುದ್ದಿ ಪ್ರಸಾರದ ನಿಯಂತ್ರಣವನ್ನು ಹೆಚ್ಚಿಸಿತು.

ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದೆ. ಅಲ್ಲಿ ವರದಿಗಾರರು ಹೆಚ್ಚಾಗಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಕಿರುಕುಳಕ್ಕೊಳಗಾಗುತ್ತಾರೆ . ಈ ಸರ್ವಾಧಿಕಾರದ ದೌರ್ಜನ್ಯ ಹೇಗಿದೆ ಎಂದರೆ ಕಾಶ್ಮೀರ್ ಟೈಮ್ಸ್‌ನಂತಹ ಪ್ರಮುಖ ಮಾಧ್ಯಮವನ್ನೂ ಮುಚ್ಚುವಂತೆ ಮಾಡುವ ಕುತಂತ್ರಗಳು ನಡೆದಿವೆ.

ಸಿಎಎ ವಿರೋಧಿ, ರೈತ ಪರ ಹೋರಾಟ: ಪತ್ರಕರ್ತರೇ ಟಾರ್ಗೆಟ್

ಸಿಎಎ-ಎನ್‌ಆರ್‌ಸಿ ವಿರುದ್ಧ ಕಳೆದ ವರ್ಷ ನಡೆದ ಚಳುವಳಿಯ ಪರವಿದ್ದ ಪತ್ರಕರ್ತರು, ಸ್ವತಂತ್ರ ಮಾಧ್ಯಮಗಳಿಗೆ ಮುಕ್ತವಾಗಿ ಬರೆಯುತ್ತಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಪೊಲೀಸರು ಸಾಕಷ್ಟು ಕಿರಿಕುಳ ನೀಡುತ್ತ ಬಂದಿದ್ದಾರೆ.

ದೆಹಲಿ ಗಡಿಗಳಲ್ಲಿ ನಡೆದಿರುವ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಅಗತ್ಯತೆಯನ್ನು ನಿರಂತರವಾಗಿ ವರದಿ ಮಾಡುತ್ತಿದ್ದ ಕ್ಯಾರವಾನ್ ವರದಿಗಾರ ಒಬ್ಬರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸರು ಅವರನ್ನು ಜೈಲಿಗೆ ತಳ್ಳಿದ್ದರು.

ಕೇಂದ್ರ ಗೃಹ ಇಲಾಖೆ ಅಧಿನದಲ್ಲಿರುವ ದೆಹಲಿ ಪೊಲೀಸ್ ಇಂತಹ ಕುಕೃತ್ಯಗಳಿಗೆ ಹೆಸರುವಾಸಿ ಆಗಿದ್ದಾರೆ. ಟ್ವೀಟ್ ಒಂದರ ನೆಪದಲ್ಲಿ ಹಿರಿಯ ಪತ್ರಕರ್ತ ರಾಜನಾಥ್ ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಮೇಲೆ ದೇಶದ್ರೋಹದ ಅಪಾದನೆ ಅಡಿ ಕೇಸು ದಾಖಲಿಸಲಾಗಿತ್ತು.

ಗೌರಿ ಲಂಕೇಶ್ ಹತ್ಯೆ ಹಿಂದೆಯೂ!

ಸೂಚ್ಯಂಕ ಬಿಡುಗಡೆ ಮಾಡಿದ ಸಂಸ್ಥೆ 2019ರ ನಂತರ ಇದು ವಿಪರೀತಕ್ಕೆ ಹೋಗಿದೆ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೇ ಇಂತಹ ಒಂದು ವ್ಯಸ್ಥಿತ ಸಂಚು ಶುರುವಾಗಿತ್ತು. ಪತ್ರಕರ್ತರಲ್ಲದಿದ್ದರೂ ಸಾಹಿತ್ಯಿಕ, ವೈಚಾರಿಕ ನಿಲುವುಗಳ ಕುರಿತು ಬರೆಯುತ್ತಿದ್ದ ದಾಬೋಲ್ಕರ್, ಪನ್ಸಾರೆ, ಕಲಬುರ್ಗಿಯವರ ಹತ್ಯೆ ಹಿಂದೆ ಈ ಒಂದು ‘ವ್ಯವಸ್ಥಿತ’ ಹಿಂದೂತ್ವವಾದಿ ಸಂಘಟನೆಗಳೇ ಎಂದು ಚಾರ್ಜ್‌ಶೀಟ್‌ಗಳಲ್ಲಿ ದಾಖಲೆ ಸಮೇತ ಆರೋಪಿಸಲಾಗಿದೆ.

ಸದಾ ಹಿಂದೂತ್ವವಾದಿಗಳ ದುಷ್ಕೃತ್ಯಗಳನ್ನು ಖಡಾಖಂಡಿತವಾಗಿ ಮುಲಾಜಿಲ್ಲದೆ ಟೀಕಿಸುವ ಛಾತಿ ಹೊಂದಿದ್ದ, ಅಪ್ಪಟ ಸೆಕ್ಯುಲರ್ ಮನಸ್ಸಿನ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಇದೇ ಅಜೆಂಡಾಗಳು ಕೆಲಸ ಮಾಡಿವೆ.

ಹೀಗಾಗಿ ಇಲ್ಲಿ ಮಾಧ್ಯಮ ಸ್ವಾತಂತ್ರ್ಯ ಎಂಬುದು ಪ್ರಪಾತಕ್ಕೆ ಬಿದ್ದಿದೆ. ಕೊರೋನಾ ವೈರಸ್ ಎರಡನೇ ಅಲೆ ಸೃಷ್ಟಿಸಿರುವ ಅನಾಹುತಕ್ಕೆ ಪ್ರಭುತ್ವದ ವಿರುದ್ಧ ನಿಲ್ಲಬೇಕಿದ್ದ ಬಹುಪಾಲು ಮಾಧ್ಯಮಗಳು ಮೌನವಾಗಿವೆ.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...