Homeಮುಖಪುಟಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಭಾರತವೂ ಒಂದಾಗಿದೆ..

- Advertisement -
- Advertisement -

ಕ್ಲಾಸ್‌ಮೇಟ್ ಮೊಂಡಿಯಲ್ ಎಂ ಸಂಸ್ಥೆ ಮಾಧ್ಯಮಗಳ ಸ್ವಾತಂತ್ರ್ಯ ಸೂಚ್ಯಂಕ ಕುರಿತು ವರದಿಯೊಂದನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯಲ್ಲಿ ಭಾರತ 142 ನೇ ಸ್ಥಾನದಲ್ಲಿದೆ. ಇದು ಭಾರತದ ಮಾಧ್ಯಮಗಳ ದುರಾವಸ್ಥೆ, ಬೇಜವಾಬ್ದಾರಿತನ ಮತ್ತು ಜನದ್ರೋಹಕ್ಕೆ ಸಾಕ್ಷಿಯಾಗಿದೆ.

ಭಾರತದ ಮಾಧ್ಯಮ ಹೀಗೆ ಪ್ರಪಾತಕ್ಕೆ ಬೀಳಲು ಕಾರಣವೇನೆಂದು ಟಿಪ್ಪಣಿಯನ್ನೂ ಅದು ನೀಡಿದೆ. ಇದಕ್ಕೆಲ್ಲ ಮೋದಿ ಸರ್ಕಾರವೇ ಕಾರಣ ಎಂಬುದನ್ನು ಅದು ಬಲವಾಗಿ ಪ್ರತಿಪಾದಿಸಿದೆ. ಆ ಟಿಪ್ಪಣಿಯ ಯಥಾವತ್ ಅನುವಾದ ಇಲ್ಲಿದೆ:

ಮೋದಿಯವರು ಮಾಧ್ಯಮಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. 2020 ರಲ್ಲಿ ಅವರ ಕೆಲಸಕ್ಕೆ ಸಂಬಂಧಿಸಿದಂತೆ ನಾಲ್ವರು ಪತ್ರಕರ್ತರು ಕೊಲ್ಲಲ್ಪಟ್ಟರು. ತಮ್ಮ ಜವಾನ್ದಾರಿ ಕೆಲಸಗಳನ್ನು ಪ್ರಮಾಣಿಕವಾಗಿ ಮಾಡುವ ಪತ್ರಕರ್ತರು ಇವತ್ತು ಜೀವಭಯ ಎದುರಿಸುತ್ತಿದ್ದಾರೆ. ಪ್ರಮಾಣಿಕ ಪತ್ರಕರ್ತರ ಪಾಲಿಗೆ ಭಾರತವು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ. ವರದಿಗಾರರ ವಿರುದ್ಧದ ಪೊಲೀಸ್ ಹಿಂಸಾಚಾರ, ರಾಜಕೀಯ ಕಾರ್ಯಕರ್ತರ ಹೊಂಚುದಾಳಿ ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ಸ್ಥಳೀಯ ಅಧಿಕಾರಿಗಳಿಂದ ಪ್ರಚೋದಿಸಲ್ಪಟ್ಟ ಪ್ರತೀಕಾರಗಳು ಸೇರಿದಂತೆ ಎಲ್ಲ ರೀತಿಯ ದಾಳಿಗೆ ಅವರು ಒಡ್ಡಿಕೊಳ್ಳಬೇಕಾಗಿದೆ.

2019 ರ ವಸಂತ ಋತುವಿನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಿಂದಾಗಿ, ಪ್ರಧಾನಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷವು ಅಗಾಧ ಬಹುಮತದಿಂದ ಜಯ ಗಳಿಸಿದಾಗಿನಿಂದಲೂ, ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಣತಿಯಂತೆ ಕೆಲಸ ಮಾಡಲು ಮಾಧ್ಯಮಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆಮೂಲಾಗ್ರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಗೆ ನಾಂದಿ ಹಾಡಿದ ಹಿಂದುತ್ವವನ್ನು ಸಮರ್ಥಿಸುವ ಬಹುಪಾಲು ಭಾರತೀಯರು, ಸಾರ್ವಜನಿಕ ಚರ್ಚೆಯಿಂದ “ರಾಷ್ಟ್ರವಿರೋಧಿ” ಚಿಂತನೆಯ ಎಲ್ಲಾ ಅಭಿವ್ಯಕ್ತಿಗಳನ್ನು ಶುದ್ಧೀಕರಿಸಲು ಪ್ರಯತ್ನಿಸುತ್ತಿದ್ದಾರೆ.

ಹಿಂದುತ್ವ ಅನುಯಾಯಿಗಳನ್ನು ಕಿರಿಕಿರಿಗೊಳಿಸುವ ವಿಷಯಗಳ ಬಗ್ಗೆ ಮಾತನಾಡಲು ಅಥವಾ ಬರೆಯಲು ಧೈರ್ಯವಿರುವ ಪ್ರಾಮಾಣಿಕ ಪತ್ರಕರ್ತರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂಘಟಿತ ದ್ವೇಷ ಅಭಿಯಾನಗಳು ಭಯ ಹುಟ್ಟಿಸುತ್ತವೆ. ಇನ್ನೂ ಅಪಾಯಕಾರಿ ಆಗಿರುವ ವಿಷಯವೆಂದರೆ, ಈ ಅಭಿಯಾನಗಳು ಅಂತಹ ಪ್ರಾಮಾಣಿಕ ಪತ್ರಕರ್ತರ ಹತ್ಯೆಗೆ ಕರೆಗಳನ್ನು ನೀಡುತ್ತವೆ!.

ಈ ಸಂಘಟಿತ ಹಿಂದೂತ್ವ ಜಾಲದ ಗುರಿಗಳು ಮಹಿಳೆಯರಾಗಿದ್ದಾಗ ಪ್ರಚಾರಗಳು ವಿಶೇಷವಾಗಿ ಹಿಂಸಾತ್ಮಕವಾಗಿರುತ್ತದೆ ಮತ್ತು ಅಸಹ್ಯಕರವಾಗಿರುತ್ತದೆ. ಅಧಿಕಾರಸ್ಥರ ವಿರುದ್ಧ ಬರೆದಾಗ ಅಥವಾ ಪ್ರಸಾರ ಮಾಡಿದಾಗ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ಜಡಿದು ಬೆದರಿಸಲಾಗುತ್ತಿದೆ. ಕೆಲವು ಪ್ರಾಸಿಕ್ಯೂಟರ್‌ಗಳು ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಪ್ರಯೋಸಿದುತ್ತಾರೆ! ಇದರ ಅಡಿಯಲ್ಲಿ “ದೇಶದ್ರೋಹ”ದ ಹೆಸರಿನಲ್ಲಿ ಜೀವಾವಧಿ ಶಿಕ್ಷೆಗೆ ಪತ್ರಕರ್ತರನ್ನು ದೂಡುವ ಹುನ್ನಾರವಿದೆ.

2020 ರಲ್ಲಿ, ಕೊರೊನಾ ಬಿಕ್ಕಟ್ಟಿನ ಲಾಭವನ್ನು ಸರ್ಕಾರವು ಪಡೆದುಕೊಂಡಿತು. ಅಧಿಕೃತ ಸ್ಥಾನದೊಂದಿಗೆ ಭಿನ್ನಾಭಿಪ್ರಾಯದ ಮಾಹಿತಿಯನ್ನು ಒದಗಿಸುವ ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಸುದ್ದಿ ಪ್ರಸಾರದ ನಿಯಂತ್ರಣವನ್ನು ಹೆಚ್ಚಿಸಿತು.

ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದೆ. ಅಲ್ಲಿ ವರದಿಗಾರರು ಹೆಚ್ಚಾಗಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಕಿರುಕುಳಕ್ಕೊಳಗಾಗುತ್ತಾರೆ . ಈ ಸರ್ವಾಧಿಕಾರದ ದೌರ್ಜನ್ಯ ಹೇಗಿದೆ ಎಂದರೆ ಕಾಶ್ಮೀರ್ ಟೈಮ್ಸ್‌ನಂತಹ ಪ್ರಮುಖ ಮಾಧ್ಯಮವನ್ನೂ ಮುಚ್ಚುವಂತೆ ಮಾಡುವ ಕುತಂತ್ರಗಳು ನಡೆದಿವೆ.

ಸಿಎಎ ವಿರೋಧಿ, ರೈತ ಪರ ಹೋರಾಟ: ಪತ್ರಕರ್ತರೇ ಟಾರ್ಗೆಟ್

ಸಿಎಎ-ಎನ್‌ಆರ್‌ಸಿ ವಿರುದ್ಧ ಕಳೆದ ವರ್ಷ ನಡೆದ ಚಳುವಳಿಯ ಪರವಿದ್ದ ಪತ್ರಕರ್ತರು, ಸ್ವತಂತ್ರ ಮಾಧ್ಯಮಗಳಿಗೆ ಮುಕ್ತವಾಗಿ ಬರೆಯುತ್ತಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಪೊಲೀಸರು ಸಾಕಷ್ಟು ಕಿರಿಕುಳ ನೀಡುತ್ತ ಬಂದಿದ್ದಾರೆ.

ದೆಹಲಿ ಗಡಿಗಳಲ್ಲಿ ನಡೆದಿರುವ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಅಗತ್ಯತೆಯನ್ನು ನಿರಂತರವಾಗಿ ವರದಿ ಮಾಡುತ್ತಿದ್ದ ಕ್ಯಾರವಾನ್ ವರದಿಗಾರ ಒಬ್ಬರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸರು ಅವರನ್ನು ಜೈಲಿಗೆ ತಳ್ಳಿದ್ದರು.

ಕೇಂದ್ರ ಗೃಹ ಇಲಾಖೆ ಅಧಿನದಲ್ಲಿರುವ ದೆಹಲಿ ಪೊಲೀಸ್ ಇಂತಹ ಕುಕೃತ್ಯಗಳಿಗೆ ಹೆಸರುವಾಸಿ ಆಗಿದ್ದಾರೆ. ಟ್ವೀಟ್ ಒಂದರ ನೆಪದಲ್ಲಿ ಹಿರಿಯ ಪತ್ರಕರ್ತ ರಾಜನಾಥ್ ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಮೇಲೆ ದೇಶದ್ರೋಹದ ಅಪಾದನೆ ಅಡಿ ಕೇಸು ದಾಖಲಿಸಲಾಗಿತ್ತು.

ಗೌರಿ ಲಂಕೇಶ್ ಹತ್ಯೆ ಹಿಂದೆಯೂ!

ಸೂಚ್ಯಂಕ ಬಿಡುಗಡೆ ಮಾಡಿದ ಸಂಸ್ಥೆ 2019ರ ನಂತರ ಇದು ವಿಪರೀತಕ್ಕೆ ಹೋಗಿದೆ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೇ ಇಂತಹ ಒಂದು ವ್ಯಸ್ಥಿತ ಸಂಚು ಶುರುವಾಗಿತ್ತು. ಪತ್ರಕರ್ತರಲ್ಲದಿದ್ದರೂ ಸಾಹಿತ್ಯಿಕ, ವೈಚಾರಿಕ ನಿಲುವುಗಳ ಕುರಿತು ಬರೆಯುತ್ತಿದ್ದ ದಾಬೋಲ್ಕರ್, ಪನ್ಸಾರೆ, ಕಲಬುರ್ಗಿಯವರ ಹತ್ಯೆ ಹಿಂದೆ ಈ ಒಂದು ‘ವ್ಯವಸ್ಥಿತ’ ಹಿಂದೂತ್ವವಾದಿ ಸಂಘಟನೆಗಳೇ ಎಂದು ಚಾರ್ಜ್‌ಶೀಟ್‌ಗಳಲ್ಲಿ ದಾಖಲೆ ಸಮೇತ ಆರೋಪಿಸಲಾಗಿದೆ.

ಸದಾ ಹಿಂದೂತ್ವವಾದಿಗಳ ದುಷ್ಕೃತ್ಯಗಳನ್ನು ಖಡಾಖಂಡಿತವಾಗಿ ಮುಲಾಜಿಲ್ಲದೆ ಟೀಕಿಸುವ ಛಾತಿ ಹೊಂದಿದ್ದ, ಅಪ್ಪಟ ಸೆಕ್ಯುಲರ್ ಮನಸ್ಸಿನ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಇದೇ ಅಜೆಂಡಾಗಳು ಕೆಲಸ ಮಾಡಿವೆ.

ಹೀಗಾಗಿ ಇಲ್ಲಿ ಮಾಧ್ಯಮ ಸ್ವಾತಂತ್ರ್ಯ ಎಂಬುದು ಪ್ರಪಾತಕ್ಕೆ ಬಿದ್ದಿದೆ. ಕೊರೋನಾ ವೈರಸ್ ಎರಡನೇ ಅಲೆ ಸೃಷ್ಟಿಸಿರುವ ಅನಾಹುತಕ್ಕೆ ಪ್ರಭುತ್ವದ ವಿರುದ್ಧ ನಿಲ್ಲಬೇಕಿದ್ದ ಬಹುಪಾಲು ಮಾಧ್ಯಮಗಳು ಮೌನವಾಗಿವೆ.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...