Homeಕರ್ನಾಟಕಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

- Advertisement -
- Advertisement -

ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಮೃತರಿಗೆ ಗೌರವಯುತ ವಿದಾಯಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ, ಯಾವ ಕಾನೂನಿನ ಅನ್ವಯ ನಮ್ಮ ಜತೆ ಚರ್ಚೆ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ಇದನ್ನು ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರ ಇರುವಾಗ ರಾಜ್ಯಪಾಲರು ಈ ರೀತಿ ಹಸ್ತಕ್ಷೇಪ ಮಾಡಲು ಯಾವ ಕಾನೂನು ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಕಾನೂನು ಸಚಿವರು ನಮಗೆ ಈ ಬಗ್ಗೆ ಬೆಳಕು ಚೆಲ್ಲಿದರೆ ತಿಳಿದುಕೊಳ್ಳುತ್ತೇವೆ. ನಾವು ಸಭೆಯಲ್ಲಿ ಭಾಗವಹಿಸಿ ನಮ್ಮ ಸಲಹೆ ನೀಡುತ್ತೇವೆ. ನಾವು ಸರ್ಕಾರಕ್ಕೆ ಎಲ್ಲ ಸಹಕಾರ ಕೊಟ್ಟಿದ್ದೇವೆ” ಎಂದು ಅವರು ತಿಳಿದರು.

“ಕೇಂದ್ರ ಸರ್ಕಾರ 20 ಲಕ್ಷ ಕೋಟಿ, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಘೋಷಿಸಿದಾಗ ಯಾರಿಗೆ ತಲುಪಿದೆ ಅಂತಾ ಪಟ್ಟಿ ಕೇಳಿದ್ದೇವೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಈ ಬಗ್ಗೆ ಮಾಹಿತಿ ಕೊಟ್ಟಿಲ್ಲ. ತಾಂತ್ರಿಕ ಸಮಿತಿಯು ಎರಡನೇ ಅಲೆ ಬಗ್ಗೆ ನವೆಂಬರ್ 30ರಂದೇ ಎಚ್ಚರಿಕೆ ನೀಡಿತ್ತು. ಪ್ರತಿನಿತ್ಯ 1.25 ಲಕ್ಷ ಪರೀಕ್ಷೆ ನಡೆಸಿ ಎಂಬುದು ಸೇರಿ 17 ಶಿಫಾರಸ್ಸು ಮಾಡಿತ್ತು. ಈ ಎಚ್ಚರಿಕೆ ನೀಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ರಾಜ್ಯಪಾಲರು ಸಭೆ ಕರೆದಿದ್ದಾರೆ” ಎಂದು ಅವರು ಕಿಡಿ ಕಾರಿದರು.

“ಔಷಧಿ, ಲಸಿಕೆಗಳು ಎಷ್ಟು ಕಡೆ ತಯಾರಾಗುತ್ತಿದೆ ಎಂದು ಗೊತ್ತಿದ್ದ ಮೇಲೆ ಅದನ್ನು ಬೇರೆ ಕಡೆಗಳಲ್ಲಿ ಉತ್ಪಾದನೆ ಮಾಡಲು ಯಾಕೆ ಕ್ರಮ ಕೈಗೊಳ್ಳಲಿಲ್ಲ? ಇಂದು ರಾಜ್ಯಪಾಲರು ಸಭೆ ಕರೆದಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದ್ದು, ಅವರು ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇದನ್ನು ಓದಿ:18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ 

“ರಾಜ್ಯದಲ್ಲಿ ಎಷ್ಟು ಐಸಿಯು ಹಾಸಿಗೆ ಇವೆ? ಯಾವ ಆಸ್ಪತ್ರೆಯಲ್ಲಿ ಏನೇನಿದೆ, ಏನೇನಿಲ್ಲ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡೋಣ. ಈ ಪರಿಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬಬೇಕು ಮಾಧ್ಯಮಗಳು ಹೆದರಿಸುತ್ತಿವೆ ಅಂತಾ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಸಚಿವರಾಗಿ ನೀವು ಜನರಿಗೆ ಯಾವ ರೀತಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೀರಿ? ಕೇವಲ ಆರೋಗ್ಯ ಹಾಗೂ ಕಂದಾಯ ಸಚಿವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆಗೋದಿಲ್ಲ. ಸರ್ಕಾರದಲ್ಲಿರುವ ಎಲ್ಲ ಮಂತ್ರಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

“ಈ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರೈತರ ಕತೆ ಏನು? ಕಳೆದ ಬಾರಿಯೇ ನೀವು ಏನೂ ಮಾಡಲು ಆಗಲಿಲ್ಲ. 20 ಲಕ್ಷ ಕೋಟಿ ರುಪಾಯಿಯಲ್ಲಿ ಯಾರಿಗೂ 1 ರೂಪಾಯಿ ತಲುಪಿಲ್ಲ. ನೀವು ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ನೈತಿಕ ಜವಾಬ್ದಾರಿ ಹೊತ್ತು ಜನತೆಯ ಕ್ಷಮೆ ಕೊರಬೇಕು” ಎಂದು ಹೇಳಿದರು.

“ಶವ ಸಂಸ್ಕಾರದ ವಿಚಾರದಲ್ಲಿ ಹೆಚ್ಚಿನ ವೆಚ್ಚದ ಬಗ್ಗೆ ಮಾತನಾಡುತ್ತೀರಿ. ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಾಗಗಳನ್ನು ಗುರುತಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ. ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಅದಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ನಿಮ್ಮ ಆಡಳಿತ ನೋಡಿ ಹಳ್ಳಿ ಜನ ನಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

“ಕೋವಿಡ್ ಸಾವಿನ ಬಗ್ಗೆ ಆಡಿಟ್ ನಡೆಯಬೇಕಿದೆ. 164 ಜನರು ಸತ್ತಿದ್ದರೆ, ಅಧಿಕಾರಿಗಳ ಮೂಲಕ ಸತ್ತವರ ಕುಟುಂಬಕ್ಕೆ ಸಾವಿನ ಬಗ್ಗೆ ಮಾಹಿತಿ ಕೊಡಿ. ಇಲ್ಲಿ ಯಾರೂ ಪರಿಪಕ್ವರಲ್ಲ. ನಿಮ್ಮ ತಪ್ಪನ್ನು ನೀವು ತಿದ್ದಿಕೊಂಡು ಮುಂದಿನ ಹೆಜ್ಜೆ ಇಡಿ. ಸರ್ಕಾರ ಎಂದರೆ ಪಂಚಾಯಿತಿಯಿಂದ ಸಂಸತ್ ವರೆಗೂ ಎಲ್ಲವೂ ಸರ್ಕಾರದ ಭಾಗವೇ. ಮುಖ್ಯಮಂತ್ರಿ ಪರಿಹಾರ ನಿಧಿ, ಪಿಎಂ ಕೇರ್ ಗೆ ಎಷ್ಟು ಹಣ ಬಂತು, ಎಷ್ಟು ಖರ್ಚಾಯ್ತು ಅಂತಾ ಲೆಕ್ಕ ಹೇಳಿ” ಎಂದು ಸರ್ಕಾರವನ್ನು ಆಗ್ರಹಿಸಿದರು.

“ಸರ್ಕಾರ ಕೋವಿಡ್ ವಾರಿಯರ್ಸ್ ಗಳಿಗೆ ವಿಮೆ ರದ್ದುಗೊಳಿಸಿದೆ. ನಾವು ಪ್ರಶ್ನಿಸಿದ ಮೇಲೆ ಬೇರೆ ಮಾದರಿಯಲ್ಲಿ ನೀಡಲಾಗುವುದು ಎಂದು ಹೇಳಿದೆ. ಲಸಿಕೆಯನ್ನು ಮೊದಲು ಪ್ರಧಾನಿ, ಮುಖ್ಯಮಂತ್ರಿಗಳು ತೆಗೆದುಕೊಳ್ಳದೇ, ಆ ಕೊರೊನಾ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದೀರಿ. ಇದು ಅತ್ಯಂತ ವಿಫಲ ಸರ್ಕಾರ. ಈ ಪರಿಸ್ಥಿತಿ ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...