Homeಕರ್ನಾಟಕಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

- Advertisement -
- Advertisement -

ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಮೃತರಿಗೆ ಗೌರವಯುತ ವಿದಾಯಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ, ಯಾವ ಕಾನೂನಿನ ಅನ್ವಯ ನಮ್ಮ ಜತೆ ಚರ್ಚೆ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ಇದನ್ನು ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರ ಇರುವಾಗ ರಾಜ್ಯಪಾಲರು ಈ ರೀತಿ ಹಸ್ತಕ್ಷೇಪ ಮಾಡಲು ಯಾವ ಕಾನೂನು ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಕಾನೂನು ಸಚಿವರು ನಮಗೆ ಈ ಬಗ್ಗೆ ಬೆಳಕು ಚೆಲ್ಲಿದರೆ ತಿಳಿದುಕೊಳ್ಳುತ್ತೇವೆ. ನಾವು ಸಭೆಯಲ್ಲಿ ಭಾಗವಹಿಸಿ ನಮ್ಮ ಸಲಹೆ ನೀಡುತ್ತೇವೆ. ನಾವು ಸರ್ಕಾರಕ್ಕೆ ಎಲ್ಲ ಸಹಕಾರ ಕೊಟ್ಟಿದ್ದೇವೆ” ಎಂದು ಅವರು ತಿಳಿದರು.

“ಕೇಂದ್ರ ಸರ್ಕಾರ 20 ಲಕ್ಷ ಕೋಟಿ, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಘೋಷಿಸಿದಾಗ ಯಾರಿಗೆ ತಲುಪಿದೆ ಅಂತಾ ಪಟ್ಟಿ ಕೇಳಿದ್ದೇವೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಈ ಬಗ್ಗೆ ಮಾಹಿತಿ ಕೊಟ್ಟಿಲ್ಲ. ತಾಂತ್ರಿಕ ಸಮಿತಿಯು ಎರಡನೇ ಅಲೆ ಬಗ್ಗೆ ನವೆಂಬರ್ 30ರಂದೇ ಎಚ್ಚರಿಕೆ ನೀಡಿತ್ತು. ಪ್ರತಿನಿತ್ಯ 1.25 ಲಕ್ಷ ಪರೀಕ್ಷೆ ನಡೆಸಿ ಎಂಬುದು ಸೇರಿ 17 ಶಿಫಾರಸ್ಸು ಮಾಡಿತ್ತು. ಈ ಎಚ್ಚರಿಕೆ ನೀಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ರಾಜ್ಯಪಾಲರು ಸಭೆ ಕರೆದಿದ್ದಾರೆ” ಎಂದು ಅವರು ಕಿಡಿ ಕಾರಿದರು.

“ಔಷಧಿ, ಲಸಿಕೆಗಳು ಎಷ್ಟು ಕಡೆ ತಯಾರಾಗುತ್ತಿದೆ ಎಂದು ಗೊತ್ತಿದ್ದ ಮೇಲೆ ಅದನ್ನು ಬೇರೆ ಕಡೆಗಳಲ್ಲಿ ಉತ್ಪಾದನೆ ಮಾಡಲು ಯಾಕೆ ಕ್ರಮ ಕೈಗೊಳ್ಳಲಿಲ್ಲ? ಇಂದು ರಾಜ್ಯಪಾಲರು ಸಭೆ ಕರೆದಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದ್ದು, ಅವರು ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇದನ್ನು ಓದಿ:18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ 

“ರಾಜ್ಯದಲ್ಲಿ ಎಷ್ಟು ಐಸಿಯು ಹಾಸಿಗೆ ಇವೆ? ಯಾವ ಆಸ್ಪತ್ರೆಯಲ್ಲಿ ಏನೇನಿದೆ, ಏನೇನಿಲ್ಲ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡೋಣ. ಈ ಪರಿಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬಬೇಕು ಮಾಧ್ಯಮಗಳು ಹೆದರಿಸುತ್ತಿವೆ ಅಂತಾ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಸಚಿವರಾಗಿ ನೀವು ಜನರಿಗೆ ಯಾವ ರೀತಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೀರಿ? ಕೇವಲ ಆರೋಗ್ಯ ಹಾಗೂ ಕಂದಾಯ ಸಚಿವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆಗೋದಿಲ್ಲ. ಸರ್ಕಾರದಲ್ಲಿರುವ ಎಲ್ಲ ಮಂತ್ರಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

“ಈ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರೈತರ ಕತೆ ಏನು? ಕಳೆದ ಬಾರಿಯೇ ನೀವು ಏನೂ ಮಾಡಲು ಆಗಲಿಲ್ಲ. 20 ಲಕ್ಷ ಕೋಟಿ ರುಪಾಯಿಯಲ್ಲಿ ಯಾರಿಗೂ 1 ರೂಪಾಯಿ ತಲುಪಿಲ್ಲ. ನೀವು ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ನೈತಿಕ ಜವಾಬ್ದಾರಿ ಹೊತ್ತು ಜನತೆಯ ಕ್ಷಮೆ ಕೊರಬೇಕು” ಎಂದು ಹೇಳಿದರು.

“ಶವ ಸಂಸ್ಕಾರದ ವಿಚಾರದಲ್ಲಿ ಹೆಚ್ಚಿನ ವೆಚ್ಚದ ಬಗ್ಗೆ ಮಾತನಾಡುತ್ತೀರಿ. ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಾಗಗಳನ್ನು ಗುರುತಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ. ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಅದಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ನಿಮ್ಮ ಆಡಳಿತ ನೋಡಿ ಹಳ್ಳಿ ಜನ ನಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

“ಕೋವಿಡ್ ಸಾವಿನ ಬಗ್ಗೆ ಆಡಿಟ್ ನಡೆಯಬೇಕಿದೆ. 164 ಜನರು ಸತ್ತಿದ್ದರೆ, ಅಧಿಕಾರಿಗಳ ಮೂಲಕ ಸತ್ತವರ ಕುಟುಂಬಕ್ಕೆ ಸಾವಿನ ಬಗ್ಗೆ ಮಾಹಿತಿ ಕೊಡಿ. ಇಲ್ಲಿ ಯಾರೂ ಪರಿಪಕ್ವರಲ್ಲ. ನಿಮ್ಮ ತಪ್ಪನ್ನು ನೀವು ತಿದ್ದಿಕೊಂಡು ಮುಂದಿನ ಹೆಜ್ಜೆ ಇಡಿ. ಸರ್ಕಾರ ಎಂದರೆ ಪಂಚಾಯಿತಿಯಿಂದ ಸಂಸತ್ ವರೆಗೂ ಎಲ್ಲವೂ ಸರ್ಕಾರದ ಭಾಗವೇ. ಮುಖ್ಯಮಂತ್ರಿ ಪರಿಹಾರ ನಿಧಿ, ಪಿಎಂ ಕೇರ್ ಗೆ ಎಷ್ಟು ಹಣ ಬಂತು, ಎಷ್ಟು ಖರ್ಚಾಯ್ತು ಅಂತಾ ಲೆಕ್ಕ ಹೇಳಿ” ಎಂದು ಸರ್ಕಾರವನ್ನು ಆಗ್ರಹಿಸಿದರು.

“ಸರ್ಕಾರ ಕೋವಿಡ್ ವಾರಿಯರ್ಸ್ ಗಳಿಗೆ ವಿಮೆ ರದ್ದುಗೊಳಿಸಿದೆ. ನಾವು ಪ್ರಶ್ನಿಸಿದ ಮೇಲೆ ಬೇರೆ ಮಾದರಿಯಲ್ಲಿ ನೀಡಲಾಗುವುದು ಎಂದು ಹೇಳಿದೆ. ಲಸಿಕೆಯನ್ನು ಮೊದಲು ಪ್ರಧಾನಿ, ಮುಖ್ಯಮಂತ್ರಿಗಳು ತೆಗೆದುಕೊಳ್ಳದೇ, ಆ ಕೊರೊನಾ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದೀರಿ. ಇದು ಅತ್ಯಂತ ವಿಫಲ ಸರ್ಕಾರ. ಈ ಪರಿಸ್ಥಿತಿ ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...