Homeಕರ್ನಾಟಕಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

- Advertisement -
- Advertisement -

ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಮೃತರಿಗೆ ಗೌರವಯುತ ವಿದಾಯಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ, ಯಾವ ಕಾನೂನಿನ ಅನ್ವಯ ನಮ್ಮ ಜತೆ ಚರ್ಚೆ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ಇದನ್ನು ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರ ಇರುವಾಗ ರಾಜ್ಯಪಾಲರು ಈ ರೀತಿ ಹಸ್ತಕ್ಷೇಪ ಮಾಡಲು ಯಾವ ಕಾನೂನು ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಕಾನೂನು ಸಚಿವರು ನಮಗೆ ಈ ಬಗ್ಗೆ ಬೆಳಕು ಚೆಲ್ಲಿದರೆ ತಿಳಿದುಕೊಳ್ಳುತ್ತೇವೆ. ನಾವು ಸಭೆಯಲ್ಲಿ ಭಾಗವಹಿಸಿ ನಮ್ಮ ಸಲಹೆ ನೀಡುತ್ತೇವೆ. ನಾವು ಸರ್ಕಾರಕ್ಕೆ ಎಲ್ಲ ಸಹಕಾರ ಕೊಟ್ಟಿದ್ದೇವೆ” ಎಂದು ಅವರು ತಿಳಿದರು.

“ಕೇಂದ್ರ ಸರ್ಕಾರ 20 ಲಕ್ಷ ಕೋಟಿ, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಘೋಷಿಸಿದಾಗ ಯಾರಿಗೆ ತಲುಪಿದೆ ಅಂತಾ ಪಟ್ಟಿ ಕೇಳಿದ್ದೇವೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಈ ಬಗ್ಗೆ ಮಾಹಿತಿ ಕೊಟ್ಟಿಲ್ಲ. ತಾಂತ್ರಿಕ ಸಮಿತಿಯು ಎರಡನೇ ಅಲೆ ಬಗ್ಗೆ ನವೆಂಬರ್ 30ರಂದೇ ಎಚ್ಚರಿಕೆ ನೀಡಿತ್ತು. ಪ್ರತಿನಿತ್ಯ 1.25 ಲಕ್ಷ ಪರೀಕ್ಷೆ ನಡೆಸಿ ಎಂಬುದು ಸೇರಿ 17 ಶಿಫಾರಸ್ಸು ಮಾಡಿತ್ತು. ಈ ಎಚ್ಚರಿಕೆ ನೀಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ರಾಜ್ಯಪಾಲರು ಸಭೆ ಕರೆದಿದ್ದಾರೆ” ಎಂದು ಅವರು ಕಿಡಿ ಕಾರಿದರು.

“ಔಷಧಿ, ಲಸಿಕೆಗಳು ಎಷ್ಟು ಕಡೆ ತಯಾರಾಗುತ್ತಿದೆ ಎಂದು ಗೊತ್ತಿದ್ದ ಮೇಲೆ ಅದನ್ನು ಬೇರೆ ಕಡೆಗಳಲ್ಲಿ ಉತ್ಪಾದನೆ ಮಾಡಲು ಯಾಕೆ ಕ್ರಮ ಕೈಗೊಳ್ಳಲಿಲ್ಲ? ಇಂದು ರಾಜ್ಯಪಾಲರು ಸಭೆ ಕರೆದಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದ್ದು, ಅವರು ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇದನ್ನು ಓದಿ:18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ 

“ರಾಜ್ಯದಲ್ಲಿ ಎಷ್ಟು ಐಸಿಯು ಹಾಸಿಗೆ ಇವೆ? ಯಾವ ಆಸ್ಪತ್ರೆಯಲ್ಲಿ ಏನೇನಿದೆ, ಏನೇನಿಲ್ಲ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡೋಣ. ಈ ಪರಿಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬಬೇಕು ಮಾಧ್ಯಮಗಳು ಹೆದರಿಸುತ್ತಿವೆ ಅಂತಾ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಸಚಿವರಾಗಿ ನೀವು ಜನರಿಗೆ ಯಾವ ರೀತಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೀರಿ? ಕೇವಲ ಆರೋಗ್ಯ ಹಾಗೂ ಕಂದಾಯ ಸಚಿವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆಗೋದಿಲ್ಲ. ಸರ್ಕಾರದಲ್ಲಿರುವ ಎಲ್ಲ ಮಂತ್ರಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

“ಈ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರೈತರ ಕತೆ ಏನು? ಕಳೆದ ಬಾರಿಯೇ ನೀವು ಏನೂ ಮಾಡಲು ಆಗಲಿಲ್ಲ. 20 ಲಕ್ಷ ಕೋಟಿ ರುಪಾಯಿಯಲ್ಲಿ ಯಾರಿಗೂ 1 ರೂಪಾಯಿ ತಲುಪಿಲ್ಲ. ನೀವು ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ನೈತಿಕ ಜವಾಬ್ದಾರಿ ಹೊತ್ತು ಜನತೆಯ ಕ್ಷಮೆ ಕೊರಬೇಕು” ಎಂದು ಹೇಳಿದರು.

“ಶವ ಸಂಸ್ಕಾರದ ವಿಚಾರದಲ್ಲಿ ಹೆಚ್ಚಿನ ವೆಚ್ಚದ ಬಗ್ಗೆ ಮಾತನಾಡುತ್ತೀರಿ. ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಾಗಗಳನ್ನು ಗುರುತಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ. ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಅದಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ನಿಮ್ಮ ಆಡಳಿತ ನೋಡಿ ಹಳ್ಳಿ ಜನ ನಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

“ಕೋವಿಡ್ ಸಾವಿನ ಬಗ್ಗೆ ಆಡಿಟ್ ನಡೆಯಬೇಕಿದೆ. 164 ಜನರು ಸತ್ತಿದ್ದರೆ, ಅಧಿಕಾರಿಗಳ ಮೂಲಕ ಸತ್ತವರ ಕುಟುಂಬಕ್ಕೆ ಸಾವಿನ ಬಗ್ಗೆ ಮಾಹಿತಿ ಕೊಡಿ. ಇಲ್ಲಿ ಯಾರೂ ಪರಿಪಕ್ವರಲ್ಲ. ನಿಮ್ಮ ತಪ್ಪನ್ನು ನೀವು ತಿದ್ದಿಕೊಂಡು ಮುಂದಿನ ಹೆಜ್ಜೆ ಇಡಿ. ಸರ್ಕಾರ ಎಂದರೆ ಪಂಚಾಯಿತಿಯಿಂದ ಸಂಸತ್ ವರೆಗೂ ಎಲ್ಲವೂ ಸರ್ಕಾರದ ಭಾಗವೇ. ಮುಖ್ಯಮಂತ್ರಿ ಪರಿಹಾರ ನಿಧಿ, ಪಿಎಂ ಕೇರ್ ಗೆ ಎಷ್ಟು ಹಣ ಬಂತು, ಎಷ್ಟು ಖರ್ಚಾಯ್ತು ಅಂತಾ ಲೆಕ್ಕ ಹೇಳಿ” ಎಂದು ಸರ್ಕಾರವನ್ನು ಆಗ್ರಹಿಸಿದರು.

“ಸರ್ಕಾರ ಕೋವಿಡ್ ವಾರಿಯರ್ಸ್ ಗಳಿಗೆ ವಿಮೆ ರದ್ದುಗೊಳಿಸಿದೆ. ನಾವು ಪ್ರಶ್ನಿಸಿದ ಮೇಲೆ ಬೇರೆ ಮಾದರಿಯಲ್ಲಿ ನೀಡಲಾಗುವುದು ಎಂದು ಹೇಳಿದೆ. ಲಸಿಕೆಯನ್ನು ಮೊದಲು ಪ್ರಧಾನಿ, ಮುಖ್ಯಮಂತ್ರಿಗಳು ತೆಗೆದುಕೊಳ್ಳದೇ, ಆ ಕೊರೊನಾ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದೀರಿ. ಇದು ಅತ್ಯಂತ ವಿಫಲ ಸರ್ಕಾರ. ಈ ಪರಿಸ್ಥಿತಿ ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...