Homeಮುಖಪುಟ‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

ಕುಗ್ಗುತ್ತಿರುವ ಜಿಎಸ್‌ಟಿ ಆದಾಯ, ಕಡಿಮೆ ತೆರಿಗೆ ಹಂಚಿಕೆ, ಅನುದಾನದಲ್ಲಿ ಕಡಿತ ಮತ್ತು ಹೆಚ್ಚಿದ ಸಾಲವನ್ನು ರಾಜ್ಯಗಳು ಎದುರಿಸುತ್ತಿವೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಲಸಿಕೆಗಳ ಬೆಲೆ ಕೇಂದ್ರ ಮತ್ತು ರಾಜ್ಯಗಳಿಗೆ ಒಂದೇ ಆಗಿರಬೇಕು ಮತ್ತು ಹೆಚ್ಚಿನ ಬೆಲೆಯನ್ನು ಈಗಾಗಲೇ ಭಾರಿ ಹಣದ ಕೊರತೆಯಿರುವ ರಾಜ್ಯಗಳ ಮೇಲೆ ವರ್ಗಾಯಿಸಬಾರದು ಎಂದು ಕಾಂಗ್ರೆಸ್ ಇಂದು ಹೇಳಿದೆ. ನಿನ್ನೆ ಸೋಮವಾರ 18 ರಿಂದ 45 ರವರೆಗಿನ ವಯಸ್ಸಿನವರಿಗೆ ಘೋಷಿಸಿದ ಲಸಿಕೆ ನೀತಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ದಾಳಿ ನಡೆಸಿದೆ.

“ಲಸಿಕೆ ತಯಾರಕರು ಲಾಭ ಬಯಸುವುದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ, ಆದರೆ ಕೇಂದ್ರವು ತನ್ನ ಜವಾಬ್ದಾರಿಯನ್ನು ತ್ಯಜಿಸಲು ಸಾಧ್ಯವಿಲ್ಲ” ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ್ದಾರೆ. “ನಿಮಗೆ ಒಂದು ದೇಶ ಒಂದು ಮಾರುಕಟ್ಟೆ ಇತ್ಯಾದಿಯೆಲ್ಲ ಬೇಕು. ಹಾಗಾದರೆ ನಾವು ಒಂದೇ ದೇಶಕ್ಕೆ ಒಂದು ಬೆಲೆಯನ್ನು ಏಕೆ ಹೊಂದಲು ಸಾಧ್ಯವಿಲ್ಲ?’ ಎಂದು ಅವರು ಪ್ರಶ್ನಿಸಿದ್ದಾರೆ.

ಸೋಮವಾರ ಸಂಜೆ ಪ್ರಕಟಗೊಂಡ ಹೊಸ ನೀತಿಯಡಿಯಲ್ಲಿ, ಲಸಿಕೆ ತಯಾರಕರು ತಮ್ಮ ಮಾಸಿಕ ಉತ್ಪನ್ನದ ಶೇಕಡಾ 50 ರಷ್ಟು ಪ್ರಮಾಣವನ್ನು ಭಾರತ ಸರ್ಕಾರಕ್ಕೆ ಪೂರೈಸುತ್ತಾರೆ ಮತ್ತು ಉಳಿದ ಉತ್ಪನ್ನವನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಗೆ ಪೂರೈಸಲು ಮುಕ್ತರಾಗಿದ್ದಾರೆ.

ಆದರೆ ಅವರು ಮೇ 1 ರ ಮೊದಲು ರಾಜ್ಯಗಳು ಮತ್ತು ಮುಕ್ತ ಮಾರುಕಟ್ಟೆಯ ಬೆಲೆಯನ್ನು ಘೋಷಿಸಬೇಕು ಎಂದು ಸರ್ಕಾರ ಹೇಳಿದೆ. ಇದು ಬೆಲೆ ವಿಷಯದ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ.

18 ರಿಂದ 45 ವರ್ಷದ ಪ್ರಜೆಗಳಿಗೆ ಏಕೆ ಉಚಿತ ಲಸಿಕೆ ಸಿಗುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. “18-45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆಗಳು ಇಲ್ಲ. ಬೆಲೆ ನಿಯಂತ್ರಣವಿಲ್ಲದೆ ಮಧ್ಯವರ್ತಿಗಳನ್ನು ನಡುವೆ ತರಲಾಗಿದೆ. ದುರ್ಬಲ ವರ್ಗದವರಿಗೆ ಲಸಿಕೆ ಗ್ಯಾರಂಟಿ ಇಲ್ಲ. ಇದು ಭಾರತ ಸರ್ಕಾರದ ಲಸಿಕೆ ತಾರತಮ್ಯ – ವಿತರಣಾ ತಂತ್ರವಲ್ಲ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಜಿಎಸ್‌ಟಿ ಆದಾಯದಲ್ಲಿ ಕುಗ್ಗುವಿಕೆ, ಕಡಿಮೆ ತೆರಿಗೆ ಹಂಚಿಕೆ, ಅನುದಾನ ಕಡಿತ ಮತ್ತು ಹೆಚ್ಚಿದ ಸಾಲಗಳು- ಈ ಹೆಚ್ಚುವರಿ ಹೊರೆಗಳನ್ನು ರಾಜ್ಯಗಳು ಭರಿಸಬೇಕಾಗುತ್ತದೆ. ಈ ನಡುವೆ ಪಿಎಂ ಕೇರ್ಸ್ ಅಡಿಯಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂಪಾಯಿಗಳನ್ನು ಎಲ್ಲಿ ನಿಯೋಜಿಸಲಾಗಿದೆ ಎಂದು ಯಾರಿಗೂ ತಿಳಿದಿಲ್ಲ, ” ಎಂದು ಚಿದಂಬರಂ ಮತ್ತು ರಣದೀಪ್ ಸುರ್ಜೇವಲಾ ಟ್ವೀಟ್ ಮಾಡಿದ್ದಾರೆ.

ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಶೇಕಡಾ 100 ರಷ್ಟು ಪರಿಣಾಮಕಾರಿಯಲ್ಲದಿದ್ದರೂ, ಅವು ಅಪಾಯಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ. ಹೆಚ್ಚಿನ ಸಂದರ್ಭಗಳಲ್ಲಿ ಆಮ್ಲಜನಕ, ಔಷಧಗಳು ಅಥವಾ ಆಸ್ಪತ್ರೆಗೆ ದಾಖಲು ಮಾಡುವ ಅಗತ್ಯವನ್ನು ನಿವಾರಿಸುತ್ತದೆ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: 18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...