Homeಮುಖಪುಟ‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

ಕುಗ್ಗುತ್ತಿರುವ ಜಿಎಸ್‌ಟಿ ಆದಾಯ, ಕಡಿಮೆ ತೆರಿಗೆ ಹಂಚಿಕೆ, ಅನುದಾನದಲ್ಲಿ ಕಡಿತ ಮತ್ತು ಹೆಚ್ಚಿದ ಸಾಲವನ್ನು ರಾಜ್ಯಗಳು ಎದುರಿಸುತ್ತಿವೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಲಸಿಕೆಗಳ ಬೆಲೆ ಕೇಂದ್ರ ಮತ್ತು ರಾಜ್ಯಗಳಿಗೆ ಒಂದೇ ಆಗಿರಬೇಕು ಮತ್ತು ಹೆಚ್ಚಿನ ಬೆಲೆಯನ್ನು ಈಗಾಗಲೇ ಭಾರಿ ಹಣದ ಕೊರತೆಯಿರುವ ರಾಜ್ಯಗಳ ಮೇಲೆ ವರ್ಗಾಯಿಸಬಾರದು ಎಂದು ಕಾಂಗ್ರೆಸ್ ಇಂದು ಹೇಳಿದೆ. ನಿನ್ನೆ ಸೋಮವಾರ 18 ರಿಂದ 45 ರವರೆಗಿನ ವಯಸ್ಸಿನವರಿಗೆ ಘೋಷಿಸಿದ ಲಸಿಕೆ ನೀತಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ದಾಳಿ ನಡೆಸಿದೆ.

“ಲಸಿಕೆ ತಯಾರಕರು ಲಾಭ ಬಯಸುವುದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ, ಆದರೆ ಕೇಂದ್ರವು ತನ್ನ ಜವಾಬ್ದಾರಿಯನ್ನು ತ್ಯಜಿಸಲು ಸಾಧ್ಯವಿಲ್ಲ” ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ್ದಾರೆ. “ನಿಮಗೆ ಒಂದು ದೇಶ ಒಂದು ಮಾರುಕಟ್ಟೆ ಇತ್ಯಾದಿಯೆಲ್ಲ ಬೇಕು. ಹಾಗಾದರೆ ನಾವು ಒಂದೇ ದೇಶಕ್ಕೆ ಒಂದು ಬೆಲೆಯನ್ನು ಏಕೆ ಹೊಂದಲು ಸಾಧ್ಯವಿಲ್ಲ?’ ಎಂದು ಅವರು ಪ್ರಶ್ನಿಸಿದ್ದಾರೆ.

ಸೋಮವಾರ ಸಂಜೆ ಪ್ರಕಟಗೊಂಡ ಹೊಸ ನೀತಿಯಡಿಯಲ್ಲಿ, ಲಸಿಕೆ ತಯಾರಕರು ತಮ್ಮ ಮಾಸಿಕ ಉತ್ಪನ್ನದ ಶೇಕಡಾ 50 ರಷ್ಟು ಪ್ರಮಾಣವನ್ನು ಭಾರತ ಸರ್ಕಾರಕ್ಕೆ ಪೂರೈಸುತ್ತಾರೆ ಮತ್ತು ಉಳಿದ ಉತ್ಪನ್ನವನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಗೆ ಪೂರೈಸಲು ಮುಕ್ತರಾಗಿದ್ದಾರೆ.

ಆದರೆ ಅವರು ಮೇ 1 ರ ಮೊದಲು ರಾಜ್ಯಗಳು ಮತ್ತು ಮುಕ್ತ ಮಾರುಕಟ್ಟೆಯ ಬೆಲೆಯನ್ನು ಘೋಷಿಸಬೇಕು ಎಂದು ಸರ್ಕಾರ ಹೇಳಿದೆ. ಇದು ಬೆಲೆ ವಿಷಯದ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ.

18 ರಿಂದ 45 ವರ್ಷದ ಪ್ರಜೆಗಳಿಗೆ ಏಕೆ ಉಚಿತ ಲಸಿಕೆ ಸಿಗುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. “18-45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆಗಳು ಇಲ್ಲ. ಬೆಲೆ ನಿಯಂತ್ರಣವಿಲ್ಲದೆ ಮಧ್ಯವರ್ತಿಗಳನ್ನು ನಡುವೆ ತರಲಾಗಿದೆ. ದುರ್ಬಲ ವರ್ಗದವರಿಗೆ ಲಸಿಕೆ ಗ್ಯಾರಂಟಿ ಇಲ್ಲ. ಇದು ಭಾರತ ಸರ್ಕಾರದ ಲಸಿಕೆ ತಾರತಮ್ಯ – ವಿತರಣಾ ತಂತ್ರವಲ್ಲ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಜಿಎಸ್‌ಟಿ ಆದಾಯದಲ್ಲಿ ಕುಗ್ಗುವಿಕೆ, ಕಡಿಮೆ ತೆರಿಗೆ ಹಂಚಿಕೆ, ಅನುದಾನ ಕಡಿತ ಮತ್ತು ಹೆಚ್ಚಿದ ಸಾಲಗಳು- ಈ ಹೆಚ್ಚುವರಿ ಹೊರೆಗಳನ್ನು ರಾಜ್ಯಗಳು ಭರಿಸಬೇಕಾಗುತ್ತದೆ. ಈ ನಡುವೆ ಪಿಎಂ ಕೇರ್ಸ್ ಅಡಿಯಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂಪಾಯಿಗಳನ್ನು ಎಲ್ಲಿ ನಿಯೋಜಿಸಲಾಗಿದೆ ಎಂದು ಯಾರಿಗೂ ತಿಳಿದಿಲ್ಲ, ” ಎಂದು ಚಿದಂಬರಂ ಮತ್ತು ರಣದೀಪ್ ಸುರ್ಜೇವಲಾ ಟ್ವೀಟ್ ಮಾಡಿದ್ದಾರೆ.

ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಶೇಕಡಾ 100 ರಷ್ಟು ಪರಿಣಾಮಕಾರಿಯಲ್ಲದಿದ್ದರೂ, ಅವು ಅಪಾಯಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ. ಹೆಚ್ಚಿನ ಸಂದರ್ಭಗಳಲ್ಲಿ ಆಮ್ಲಜನಕ, ಔಷಧಗಳು ಅಥವಾ ಆಸ್ಪತ್ರೆಗೆ ದಾಖಲು ಮಾಡುವ ಅಗತ್ಯವನ್ನು ನಿವಾರಿಸುತ್ತದೆ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: 18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...