Homeಕರೋನಾ ತಲ್ಲಣರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನೇನು ಇರಲಿದೆ?

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನೇನು ಇರಲಿದೆ?

- Advertisement -
- Advertisement -

ಕೊರೊನಾ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮಂಗಳವಾರದಂದು ನಡೆದ ಸರ್ವಪಕ್ಷಗಳ ಸಭೆಯ ನಂತರ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಹೇರುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಜೊತೆಗೆ ಮುಂದಿನ 14 ದಿನಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಕೂಡಾ ಸರ್ಕಾರ ಬಿಡುಗಡೆ ಮಾಡಿದೆ.

ಕೊರೊನಾ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಮುಖ ಅಂಶಗಳು ಹೀಗಿವೆ.

  • ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ವರೆಗೆ (ಏಪ್ರಿಲ್​ 21 ರಿಂದ ಮೇ 4 ರವರೆಗೆ) ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.
  • ಆದರೆ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಪ್ಯು ಜಾರಿಯಲ್ಲಿರಲಿದೆ.
  • ಶಾಲೆ, ಕಾಲೇಜುಗಳು ಸಂಪೂರ್ಣವಾಗಿ ಬಂದ್ ಆಗಲಿದ್ದು, ಆನ್​ಲೈನ್​ ತರಗತಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

ಇದನ್ನು ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

  • ಸಿನಿಮಾ ಹಾಲ್​ಗಳು, ಶಾಪಿಂಗ್​ ಮಾಲ್​ಗಳು, ಜಿಮ್​, ಯೋಗಾ ಸೆಂಟರ್​, ಸ್ವಿಮ್ಮಿಂಗ್​ ಪೂಲ್​, ಸ್ಪೋರ್ಟ್ಸ್​ ಕಾಂಪ್ಲೆಕ್ಸ್​, ಸ್ಪಾ, ಬಾರ್​, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು. ಆದರೆ, ಸ್ವಿಮ್ಮಿಂಗ್​ ಫೆಡರೇಷನ್​ ಆಫ್​ ಇಂಡಿಯಾದಿಂದ ಅನುಮತಿ ಪಡೆದ ಸ್ವಿಮ್ಮಿಂಗ್​ ಫೂಲ್​ಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ.
  • ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದ್ದು, ಎಲ್ಲಾ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು.
  • ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ ಮಾತ್ರಕ್ಕೆ ಅವಕಾಶ ನೀಡಲಾಗಿದೆ.
  • ಕಟ್ಟಡ ನಿರ್ಮಾಣ ಕಾಮಗಾರಿ, ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ ನೀಡಲಾಗಿದೆ.
  • ಅಗತ್ಯ ಆಹಾರ ವಸ್ತುಗಳಾದ ದಿನಸಿ, ಹಣ್ಣು, ತರಕಾರಿ ಅಂಗಡಿಗಳು, ಹಾಲಿನ ಡೈರಿ, ಮೀನು ಮತ್ತು ಮಾಂಸದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಲಾಡ್ಜ್​ಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ

  • ಮದ್ಯದ ಅಂಗಡಿಗಳಲ್ಲಿ ಪಾರ್ಸಲ್​ ನೀಡಲು ಮಾತ್ರ ಅವಕಾಶ ನೀಡಲಾಗಿದೆ.
  • ಬ್ಯಾಂಕ್​, ಇನ್ಶೂರೆನ್ಸ್​, ಮಾಧ್ಯಮ ಸಂಸ್ಥೆಗಳಿಗೆ ಅನುಮತಿ.
  • ಇ ಕಾಮರ್ಸ್​ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ.
  • ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ಮನೆಯಲ್ಲೇ ಕೆಲಸ ಮಾಡಲು ನಿರ್ದೇಶನ.
  • ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ.
  • ಸರ್ಕಾರಿ ಕಚೇರಿಗಳಲ್ಲಿ 50% ಸಿಬ್ಬಂದಿಗಳೊಂದಿಗೆ ಕೆಲಸಕ್ಕೆ ಅನುಮತಿ.
  • ಜಿಲ್ಲೆ ಹಾಗೂ ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ.
  • ಮೆಟ್ರೋ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಿಗೆ ಅನುಮತಿ
  • ಮದುವೆಗಳಲ್ಲಿ ಕೇವಲ 50 ಜನರಿಗೆ ಹಾಗೂ ಅಂತ್ಯಕ್ರಿಯೆಗಳಲ್ಲಿ ಕೇವಲ 20 ಜನರಿಗೆ ಮಾತ್ರ ಅವಕಾಶ.

ಇದನ್ನು ಓದಿ: ‘ತಗಡು ಯೋಗಿ – ಯುಪಿ ಮುಖ್ಯಮಂತ್ರಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

ವಿಡಿಯೊ ನೋಡಿ: ವಿದ್ಯಾರ್ಥಿಗಳಿಬ್ಬರ ನೃತ್ಯಕ್ಕೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರಿಗೆ ಕೇರಳ ಪ್ರತಿರೋಧಿಸಿದ್ದು ಹೇಗೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...