Homeಮುಖಪುಟವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

ವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

- Advertisement -
- Advertisement -

ಕಳೆದ ವರ್ಷ ನಡೆದ ದರೋಡೆಕೋರ ವಿಕಾಸ್ ದುಬೆಯ ಎನ್‌ಕೌಂಟರ್‌‌‌ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ತನಿಖಾ ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. ಸಾಕಷ್ಟು ಪುರಾವೆಗಳೊಂದಿಗೆ ಮುಂದೆ ಬರದಿರುವುದಕ್ಕೆ ಸಾರ್ವಜನಿಕರನ್ನು, ಮಾಧ್ಯಮಗಳನ್ನು ಮತ್ತು ಅಪರಾಧಿಯ ಕುಟುಂಬವನ್ನು ತನಿಖಾ ಆಯೋಗವು ದೂಷಿಸಿದೆ ಎಂದು ವರದಿಯಾಗಿದೆ.

ದರೋಡೆಕೋರ ವಿಕಾಸ್ ದುಬೆ ಹಾಗೂ ಸಹಚರರು ಹೊಂಚು ಹಾಕಿ ಎಂಟು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿ ಕೊಂದಿದ್ದರು. ಇದಾದ ನಂತರ ಪರಾರಿಯಾಗಿದ್ದ ದುಬೆಯನ್ನು ಉತ್ತರ ಪ್ರದೇಶದ ಹೊರಗೆ ಬಂಧನ ಮಾಡಲಾಗಿತ್ತು. ಅಲ್ಲಿಂದ ದುಬೆಯನ್ನು ಪೊಲೀಸ್ ಬೆಂಗಾವಲಿನಲ್ಲಿ ಮತ್ತೆ ಯುಪಿಗೆ ಕರೆತರಲಾಗಿತ್ತು.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು 

ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ ಹೊಡೆದಿದ್ದು, ಈ ಸಮಯದಲ್ಲಿ ದುಬೆ ಪೊಲೀಸರ ಬಂದೂಕನ್ನು ಕಿತ್ತು, ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಗುಂಡು ಹಾರಿಸಿದ್ದಕ್ಕೆ ದುಬೆಯನ್ನು ಎನ್‌ಕೌಂಟರ್‌ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಎನ್‌ಕೌಂಟರ್‌‌ ಬಗ್ಗೆ ಪೊಲೀಸ್ ಹೇಳಿಕೆಯ ಆಯಾಮವನ್ನು ಅಲ್ಲಗಳೆಯಲು ಯಾವುದೇ ಪುರಾವೆಗಳಿಲ್ಲ, ಆದರೆ ಅದನ್ನು ಅವರ ಹೇಳಿಕೆಯ ಪರವಾಗಿ ಸಾಕಷ್ಟು ಪುರಾವೆಗಳು ಇವೆ ಎಂದು ಮೂವರು ಸದಸ್ಯರ ವಿಚಾರಣಾ ಸಮಿತಿಯು ಯುಪಿ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ವಿಕಾಸ್ ದುಬೆಯನ್ನು ನಕಲಿ ಎನ್ಕೌಂಟರ್‌ನಲ್ಲಿ ಕೊಲ್ಲಲಾಗಿದೆ, ಆದ್ದರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಕೆಯಾಗಿತ್ತು. ಹಾಗಾಗಿ ಕೋರ್ಟ್ ಪ್ರಕರಣದ ತನಿಖೆಗೆ ನ್ಯಾಯಾಂಗ ಸಮಿತಿಯನ್ನು ರಚಿಸಿತ್ತು.

ಇದನ್ನೂ ಓದಿ:  ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನ್ಯಾಯಮೂರ್ತಿ ಬಿ.ಎಸ್. ಚೌಹಾನ್ ನೇತೃತ್ವದ ವಿಚಾರಣಾ ಆಯೋಗವು ಪೊಲೀಸರ ವಿರುದ್ಧ ಯಾರೂ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಹೇಳಿದ್ದಾಗಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಸಾಕ್ಷ್ಯಗಳನ್ನು ಸಂಗ್ರಹಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ಅವರ ಆಯಾಮವನ್ನು ನೀಡುವಂತೆ ಕೇಳಿಕೊಂಡಿದ್ದೇವೆ. ಮಾಧ್ಯಮಗಳು ಯುಪಿ ಪೊಲೀಸರ ವಿರುದ್ಧ ಅನೇಕ ‘ಸುದ್ದಿಗಳನ್ನು’ ಬರೆದಿದ್ದವು, ಆದರೆ ಯಾವುದೂ ಯಾವುದೇ ಪುರಾವೆಗಳನ್ನು ನೀಡಿಲ್ಲ” ಎಂದು ಮೂಲಗಳು ತಿಳಿಸಿವೆ.

“ನಾಗರಿಕರು ಮತ್ತು ಮಾಧ್ಯಮಗಳು ತಮಗೆ ಸಹಕಾರ ನೀಡದೆ ಇರುವುದು ವಿಚಾರಣಾ ಆಯೋಗವನ್ನು ರಚಿಸಿರುವ ಉದ್ದೇಶ ಸೋಲುವಂತಾಗಿದೆ” ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ!

ಸಮಿತಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ವಿಕಾಸ್ ದುಬೆ ಅವರ ಪತ್ನಿ ಅಥವಾ ಕುಟುಂಬ ಸದಸ್ಯರು ಕೂಡಾ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಾಕ್ಷ್ಯಾಧಾರ ನೀಡುವಂತೆ ಸ್ಥಳೀಯ ಪತ್ರಿಕೆಗಳಲ್ಲಿ ನೋಟಿಸ್ ನೀಡಲಾಗಿತ್ತು ಆದರೆ ಯಾರೂ ಸಾಕ್ಷಿಗಳೊಂದಿಗೆ ಹಾಜರಾಗಲಿಲ್ಲ ಎಂದು ತನಿಖಾ ಆಯೋಗ ಹೇಳಿದೆ.

“ಪ್ರಕರಣದ ಬಗ್ಗೆ ಮಾಧ್ಯಮಗಳು ಪೊಲೀಸರ ವಿರುದ್ದ ಭಾರಿ ಮಾತನಾಡಿತ್ತು. ಆದರೆ ಸಮಿತಿಯ ಕೋರಿಕೆಯ ಹೊರತಾಗಿಯು ಯುಪಿ ಪೊಲೀಸರ ವಿರುದ್ಧ ಸಾಕ್ಷ್ಯ ನೀಡಲು ಮಾಧ್ಯಮಗಳು ಏಕೆ ಮುಂದೆ ಬರಲಿಲ್ಲ?” ಎಂದು ಸಮಿತಿಯು ಪ್ರಶ್ನಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ವಿಡಿಯೊ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...