Homeಮುಖಪುಟಜನರು ಸಂಕಟದಲ್ಲಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿ ನಗುತ್ತಿದ್ದಾರೆ: ಪ್ರಿಯಾಂಕ ಗಾಂಧಿ

ಜನರು ಸಂಕಟದಲ್ಲಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿ ನಗುತ್ತಿದ್ದಾರೆ: ಪ್ರಿಯಾಂಕ ಗಾಂಧಿ

- Advertisement -
- Advertisement -

ಕೋವಿಡ್ ಎರಡನೆ ಅಲೆಯಿಂದಾಗಿ ದೇಶಾದ್ಯಂತ ಜನರು ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೆ, ಆಕ್ಸಿಜನ್ ಮತ್ತು ಔಷಧಿ ಕೊರತೆಯಿಂದಾಗಿ ನೋವಿನಲ್ಲಿ ನರಳುತ್ತಿದ್ದಾರೆ. ಕೆಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದು ದುಃಖದ ಮಡುವಿನಲ್ಲಿದ್ದಾರೆ. ಆದರೆ ಬಿಜೆಪಿ ನಾಯಕರು ಮಾತ್ರ ಬೃಹತ್ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಾ ವೇದಿಕೆಯಲ್ಲಿ ಜೋಕ್ ಮಾಡಿಕೊಂಡು ನಗುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಏಪ್ರಿಲ್ 23 ರಂದು ಮುರ್ಷಿದಾಬಾದ್, ದಕ್ಷಿಣ ಕೋಲ್ಕತಾ, ಸಿಯುರಿ ಮತ್ತು ಮಾಲ್ಡಾದಲ್ಲಿ ಚುನಾವಣಾ ರ್ಯಾಲಿಗಳನ್ನು ನಡೆಸಲಿದ್ದಾರೆ. ಇದರ ಬದಲಿಗೆ ಮೋದಿ ಜನರೊಂದಿಗೆ ಕುಳಿತು ಪ್ರಸ್ತುತ ಬಿಕ್ಕಟ್ಟಿನ ಪರಿಹಾರದ ಬಗ್ಗೆ ಚರ್ಚಿಸಬೇಕಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಿರೋ ಸರ್ವೆಯ ಪ್ರಕಾರ ಸುಮಾರು 5 ಕೋಟಿ ಜನರಿಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಹೀಗದ್ದರೂ ಯೋಗಿ ಸರ್ಕಾರ ಅತ್ಯಂತ ಕಡಿಮೆ ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಅದರಲ್ಲಿ ಶೇ. 70 ರಷ್ಟು ಆಟಿಂಜನ್ ಟೆಸ್ಟ್ ನಡೆಸಿ, ಶೇ.30 ರಷ್ಟು ಮಾತ್ರ ಆರ್‌ಟಿಪಿಸಿಆರ್ ಟೆಸ್ಟ್ ನಡೆಸುತ್ತಿದೆ. ಖಾಸಗಿ ಲ್ಯಾಬ್‌ಗಳು ಪರೀಕ್ಷೆ ನಡೆಸದಂತೆ ಆದೇಶ ಹೊರಡಿಸಲಾಗಿದೆ. ಈ ಸರ್ಕಾರಕ್ಕೆ ಜನರ ಜೀವಕ್ಕಿಂತ ತಮ್ಮ ಸರ್ಕಾರದ ಪ್ರತಿಷ್ಠೆಯೇ ಮುಖ್ಯವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಂದು ದಿನಕ್ಕೆ 29,754 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕೆ ತಲುಪಿದೆ. 162 ಸಾವುಗಳೊಂದಿಗೆ ಸಾವಿನ ಸಂಖ್ಯೆ 10 ಸಾವಿರ ದಾಟಿದೆ ಎಂದು ಆರೋಗ್ಯ ಇಲಾಖೆ ವರದಿಗಳು ತಿಳಿಸಿವೆ.

ಆಕ್ಸಿಜನ್ ರಫ್ತು ಮಾಡಿದ್ದು ಏಕೆ?

ಭಾರತವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಆಮ್ಲಜನಕ ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೂ ನಮ್ಮ ದೇಶದ ಪ್ರಜೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಸಿಗುತ್ತಿಲ್ಲ ಏಕೆ ಎಂದು ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ. ಈ ಕುರಿಟು ಟ್ವೀಟ್ ಮಾಡಿರುವ ಅವರು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

ಭಾರತದ ಆಮ್ಲಜನಕ ರಫ್ತು

2019-20: 4502 ಮೆ.ಟನ್
2020-21: 9300 ಮೆ.ಟನ್

ನಮ್ಮಲ್ಲಿ ಆಮ್ಲಜನಕದ ಕೊರತೆ ಇರಲಿಲ್ಲ. ನಾವು ಆಮ್ಲಜನಕದ ಅತಿದೊಡ್ಡ ಉತ್ಪಾದಕರು. ಆದರೆ ಕೊರೊನಾದ ಬೆದರಿಕೆಯ ಹೊರತಾಗಿಯೂ, ಸರ್ಕಾರವು 2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? ಎಂದು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...