Homeಕರೋನಾ ತಲ್ಲಣಮಹಾರಾಷ್ಟ್ರ: ನಾಸಿಕ್‌ನ ಆಸ್ಪತ್ರೆ ಹೊರಗೆ ಆಮ್ಲಜನಕ ಟ್ಯಾಂಕರ್ ಸೋರಿಕೆ, 22 ಮಂದಿ ಸಾವು

ಮಹಾರಾಷ್ಟ್ರ: ನಾಸಿಕ್‌ನ ಆಸ್ಪತ್ರೆ ಹೊರಗೆ ಆಮ್ಲಜನಕ ಟ್ಯಾಂಕರ್ ಸೋರಿಕೆ, 22 ಮಂದಿ ಸಾವು

- Advertisement -
- Advertisement -

ಮಂಗಳವಾರ ಮಹಾರಾಷ್ಟ್ರದ ನಾಸಿಕ್‌ನ ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕರ್ ಸೋರಿಕೆಯಾದ ಹಿನ್ನೆಲೆ 22 ಜನರು ಸಾವನ್ನಪ್ಪಿದ್ದಾರೆ. ಆಮ್ಲಜನಕದ ಟ್ಯಾಂಕರ್‌ ಸೋರಿಕೆಯಿಂದಾಗಿ ಸುಮಾರು 30 ನಿಮಿಷಗಳ ಕಾಲ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆ ಸ್ಥಗಿತಗೊಂಡಿತ್ತು.

ನಾಸಿಕ್‌ ನಗರದ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಇದು ಕೊರೊನಾ ಸೋಂಕಿತ ರೋಗಿಗಳಿಗೆ ಮೀಸಲಾಗಿದೆ. ಸುಮಾರು 150 ರೋಗಿಗಳಿಗೆ ಆಮ್ಲಜನಕದ ಅಗತ್ಯವಿತ್ತು, ಅವರೆಲ್ಲರೂ ವೆಂಟಿಲೇಟರ್‌ಗಳಲ್ಲಿದ್ದರು.

ಮೃತ 11 ಮಂದಿ ಕೊರೊನಾ ಸೋಂಕಿತರು ವೆಂಟಿಲೇಟರ್‌ಗಳಲ್ಲಿದ್ದವರು. ಆಮ್ಲಜನಕದ ಪೂರೈಕೆ ಸ್ಥಗಿತವೇ ಸಾವಿಗೆಮ ಕಾರಣ. ತನಿಖೆ ಬಳಿಕ ತ್ತಷ್ಟು ಮಾಹಿತಿ ದೊರೆಯಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

“ನಮಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ನಾಸಿಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದ 11 ರೋಗಿಗಳು ಸಾವನ್ನಪ್ಪಿದ್ದಾರೆ. ಈ ರೋಗಿಗಳಿಗೆ ಆಮ್ಲಜನಕವನ್ನು ಪೂರೈಸುತ್ತಿದ್ದ ಆಮ್ಲಜನಕ ಟ್ಯಾಂಕರ್‌ನಲ್ಲಿ ಸೋರಿಕೆ ಕಂಡುಬಂದಿದೆ. ಸೋರಿಕೆಯಿಂದಾಗಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿದ್ದು, ಆಸ್ಪತ್ರೆಯಲ್ಲಿದ್ದ 11 ರೋಗಿಗಳ ಸಾವಿಗೆ ಕಾರಣವಾಗಿದೆ” ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ಆಮ್ಲಜನಕ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗಿ, ಸುತ್ತಮುತ್ತಲಿನ ಪ್ರದೇಶಗಳನ್ನು ಹೊಗೆಯಿಂದ ಆವರಿಸುವುದನ್ನು ವಿಡಿಯೋಗಳಲ್ಲಿ ನೋಡಬಹುದು. ಆಮ್ಲಜನಕ ಅಗತ್ಯವಿರುವ 80 ರಲ್ಲಿ 31 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಆಮ್ಲಜನಕ ಸೋರಿಕೆಗೆ ಕಾರಣರಾದ ಜನರಿಗೆ ಶಿಕ್ಷೆಯಾಗಬೇಕು ಎಂದು ಎನ್‌ಸಿಪಿ ನಾಯಕ ಮಜೀದ್ ಮೆಮನ್ ಟ್ವೀಟ್ ಮಾಡಿದ್ದಾರೆ.

“ನಾಸಿಕ್‌ನಲ್ಲಿ ನಡೆದದ್ದು ಭಯಾನಕ ದುರಂತ. 11 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ, ಇದು ತುಂಬಾ ಗೊಂದಲದ ಸಂಗತಿಯಾಗಿದೆ. ಇತರ ರೋಗಿಗಳಿಗೆ ಸರ್ಕಾರ ಸಹಾಯಕ್ಕೆ ನಿಲ್ಲಬೇಕು. ಅಗತ್ಯವಿದ್ದರೆ ಅವರನ್ನು ಬೇರೆಡೆಗೆ ಸ್ಥಳಾಂತರಿಸಬೇಕು. ವಿವರವಾದ ವಿಚಾರಣೆ ನಡೆಯಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...