Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

- Advertisement -
- Advertisement -

ಆಫ್ರಿಕನ್-ಅಮೇರಿಕನ್ ಜಾರ್ಜ್ ಫ್ಲಾಯ್ಡ್‌ನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಾಜಿ ಮಿನ್ನಿಯಾಪೊಲಿಸ್ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಅಪರಾಧಿ ಎಂದು ಸಾಬೀತುಗೊಂಡಿದ್ದು ಶಿಕ್ಷೆಗೆ ಗುರಿಯಾಗಿದ್ದಾನೆ. ಮಂಗಳವಾರ ಈ ತೀರ್ಪು ಪ್ರಕಟಗೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣ ಅಮೆರಿಕದಲ್ಲಿ ತೀವ್ರ ಚರ್ಚೆಯ ವಿಷಯವಾಗಿತ್ತು. ಪೊಲೀಸ್ ಹೊಣೆಗಾರಿಕೆ ಕುರಿತ ಪ್ರಮುಖ ಪರೀಕ್ಷೆಯೆಂದು ಇದನ್ನು ಪರಿಗಣಿಸಲಾಗಿತ್ತು.

ಎರಡನೇ-ದರ್ಜೆ (ಸೆಕೆಂಡ್ ಡಿಗ್ರಿ) ಕೊಲೆ, ಮೂರನೇ-ದರ್ಜೆ (ಥರ್ಡ್ ಡಿಗ್ರಿ) ಕೊಲೆ ಮತ್ತು ನರಹತ್ಯೆ – ಈ ಮೂರೂ ಆರೋಪಗಳಲ್ಲಿ 45 ವರ್ಷದ ಚೌವಿನ್ ತಪ್ಪಿತಸ್ಥನೆಂದು ಪರಿಗಣಿತರಾಗಿದ್ದಾನೆ..

ಮೂರು ವಾರಗಳ ವಿಚಾರಣೆಯ ನಂತರ ತೀರ್ಪುಗಳನ್ನು ಘೋಷಿಸಿದಾಗ ಭಾರಿ ಕಾವಲಿನಲ್ಲಿರುವ ಮಿನ್ನಿಯಾಪೊಲಿಸ್ ನ್ಯಾಯಾಲಯದ ಕೋಣೆಯ ಹೊರಗೆ ನೆರೆದಿದ್ದ ಜನಸಮೂಹವು ಸಂತಸ ವ್ಯಕ್ತಪಡಿಸಿತು.

ವಿವಿಧ ಜನಾಂಗಗಳಿಗೆ ಸೇರಿದ ಏಳು ಮಹಿಳಾ, ಐದು ಪುರುಷ ತೀರ್ಪುಗಾರರ ಸರ್ವಾನುಮತದ ತೀರ್ಪನ್ನು ಹೆನ್ನೆಪಿನ್ ಕೌಂಟಿ ನ್ಯಾಯಾಧೀಶ ಪೀಟರ್ ಕಾಹಿಲ್ ಓದಿದ ನಂತರ ಜಾಮೀನಿನ ಮೇಲೆ ಮುಕ್ತರಾಗಿದ್ದ ಚೌವಿನ್‌ಗೆ ಕೈಕೋಳ ತೊಡಿಸಲಾಗಿತು.

ಫೇಸ್ ಮಾಸ್ಕ್ ಧರಿಸಿದ್ದ ಮತ್ತು ಯಾವುದೇ ಬಾಹ್ಯ ಭಾವನೆಯನ್ನು ಪ್ರದರ್ಶಿಸದ ಚೌವಿನ್ ಅವನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಜಾರ್ಜ್ ಫ್ಲಾಯ್ಡ್ ಸಹೋದರರಲ್ಲಿ ಒಬ್ಬರಾದ ಫಿಲೋನಿಸ್ ಫ್ಲಾಯ್ಡ್ ಪ್ರಾಸಿಕ್ಯೂಟರ್‌ಗಳನ್ನು ಅಭನಂದಿಸಿದರು.

ಚೌವಿನ್ ಅತ್ಯಂತ ಗಂಭೀರವಾದ ಆರೋಪದ ಮೇಲೆ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ ಎನ್ನಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನಂತರ ಘೋಷಿಸಲಾಗುತ್ತದೆ.
ಪೊಲೀಸ್ ಅಧಿಕಾರಿ ಚೌವಿನ್, ಫ್ಲಾಯ್ಡ್‌ನ ಕುತ್ತಿಗೆಗೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ಮಂಡಿಯೂರಿ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಫ್ಲಾಯ್ಡ್ ಉಸಿರುಗಟ್ಟಿ ಮೃತರಾಗಿದ್ದರು.

ನಕಲಿ ಬಿಲ್ ಆರೋಪದ ಮೇಲೆ ಮೇ 25, 2020 ರಂದು ಬಂಧನಕ್ಕೊಳಗಾದ 46 ವರ್ಷದ ಫ್ಲಾಯ್ಡ್ ಹತ್ಯೆ ವಿಶ್ವದಾದ್ಯಂತ ಜನಾಂಗೀಯ ಅನ್ಯಾಯ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆಗೆ ನಾಂದಿ ಹಾಡಿತು. ಅಮೆರಿಕದಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಅಂದೋಲನ ತೀವ್ರವಾಗಿತ್ತು.

ಅಧ್ಯಕ್ಷ ಜೋ ಬಿಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ತೀರ್ಪಿನ ನಂತರ ಫ್ಲಾಯ್ಡ್ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾತನಾಡಿದರು. “ಇದರಿಂದ ಒಮ್ಮೆಲೇ ಏನೂ ಉತ್ತಮವಾಗುವುದಿಲ್ಲ, ಆದರೆ ಕನಿಷ್ಠ ದೇವರು ಈಗ ಸ್ವಲ್ಪ ನ್ಯಾಯದ ಕಡೆಗಿದ್ದಾನೆ ಎಂದು ಸಾಬೀತಾಗಿದೆ’ ಎಂದು ಬಿಡೆನ್ ಹೇಳಿದರು.

“ಇದು ಅಮೆರಿಕದಲ್ಲಿ ನ್ಯಾಯದ ದಿನ” ಎಂದು ಅಮೆರಿಕದ ಮೊದಲ ಕಪ್ಪು ವರ್ಣೀಯ ಉಪಾಧ್ಯಕ್ಷೆ ಹ್ಯಾರಿಸ್ ಹೇಳಿದ್ದಾರೆ. “ಇತಿಹಾಸವು ಈ ಕ್ಷಣದಲ್ಲಿ ಹಿಂತಿರುಗಿ ನೋಡುತ್ತದೆ’ ಎಂದು ಅವರು ಹೇಳಿದ್ದಾರೆ.

ಫ್ಲಾಯ್ಡ್ ಕುಟುಂಬ ವಕೀಲ ಬೆನ್ ಕ್ರಾಂಪ್ ಈ ತೀರ್ಪನ್ನು ನಾಗರಿಕ ಹಕ್ಕುಗಳ ಮಹತ್ವದ ವಿಜಯ, ಎಂದಿದ್ದಾರೆ.

ಅಮೆರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷ ಬರಾಕ್ ಒಬಾಮಾ, “ತೀರ್ಪುಗಾರರು ಸರಿಯಾದ ಕೆಲಸವನ್ನು ಮಾಡಿದ್ದಾರೆ, ಆದರೆ ನಿಜವಾದ ನ್ಯಾಯಕ್ಕೆ ಇನ್ನೂ ಹೆಚ್ಚಿನ ಅಗತ್ಯವಿದೆ” ಎಂದು ಹೇಳಿದ್ದಾರೆ.

ಫ್ಲಾಯ್ಡ್ ಬಂಧನದಲ್ಲಿ ಭಾಗಿಯಾಗಿರುವ ಇತರ ಮೂವರು ಮಾಜಿ ಪೊಲೀಸ್ ಅಧಿಕಾರಿಗಳು ಈ ವರ್ಷದ ಕೊನೆಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.


ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...