Homeಮುಖಪುಟದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? - ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಹಲವಾರು ರಾಜ್ಯಗಳು ಆಮ್ಲಜನಕದ ತುರ್ತುಸ್ಥಿತಿಯನ್ನು ಎದುರಿಸುತ್ತಿರುವ ಸಮಯದಲ್ಲಿ ಆಮ್ಲಜನಕ ರಫ್ತು ಕುರಿತಂತೆ ಲಭ್ಯವಿರುವ ಅಧಿಕೃತ ಅಂಕಿಅಂಶಗಳು ಈ ಸರ್ಕಾರದ ನೀತಿಯ ಕುರಿತು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಪ್ರಿಲ್ 2020 ಮತ್ತು ಜನವರಿ 2021 ರ ನಡುವೆ, ಭಾರತವು 9,000 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದೆ! ಏಪ್ರಿಲ್ 2020 ಅಂದರೆ ಆಗ ಮೊದಲ ಕೋವಿಡ್ ಅಲೆ ತೀವ್ರವಾಗಿತ್ತು ಮತ್ತು ಕಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿತ್ತು. ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ರಫ್ತು ಪ್ರಮಾಣ ಶೇ. 700ರಷ್ಟು ಹೆಚ್ಚಾಗಿದೆ!

ಈಗ ಕೋವಿಡ್‌ನ ಎರಡನೇ ಅಲೆಯ ಭಾರಿ ಉಲ್ಬಣವು ಉಸಿರಾಟದ ತೊಂದರೆಗಳು ಮತ್ತು ಆ ಕಾರಣಕ್ಕೆ ಆಮ್ಲಜನಕದ ಬೇಡಿಕೆಯ ಹೆಚ್ಚಳವನ್ನು ಉಂಟು ಮಾಡಿದೆ. ಆದರೆ, ದೇಶದಲ್ಲಿ ಈಗ ಆಮ್ಲಜನಕದ ಕೊರತೆ ತೀವ್ರವಾಗಿದೆ. ಹಲವಾರು ರಾಜ್ಯಗಳು ಈ ಕುರಿತಂತೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿ ಕೇಂದ್ರದ ನೆರವು ಯಾಚಿಸಿವೆ, ಮಂಗಳವಾರ ರಾತ್ರಿಯ ಭಾಷಣದಲ್ಲಿ ಪ್ರಧಾನಿಯವರು ಸಹ ಆಮ್ಲಜನಕದ ಕೊರತೆಯನ್ನು ದೃಢೀಕರಿಸಿದ್ದಾರೆ. ಆದರೆ, ಭಾರತದಿಂದ ಆಮ್ಲಜನಕದ ರಫ್ತು ದ್ವಿಗುಣಗೊಂಡಿದೆ ಎಂದು ಸರ್ಕಾರದ ಮಾಹಿತಿಯು ತಿಳಿಸುತ್ತದೆ!

2020 ರ ಆರ್ಥಿಕ ವರ್ಷದಲ್ಲಿ ಕೇವಲ 4,500 ಮೆಟ್ರಿಕ್ ಟನ್ ಆಮ್ಲಜನಕವನ್ನು ಮಾತ್ರ ರಫ್ತು ಮಾಡಲಾಗಿತ್ತು. ಆದರೆ 2021ರ ಆರ್ಥಿಕ ವರ್ಷದಲ್ಲಿ, ಅದೂ ಕೊರೊನಾ 1ನೆ ಅಲೆ ತೀವ್ರವಾಗಿದ್ದ ಸಮಯದಲ್ಲಿ, ಈ ರಫ್ತು ದ್ವಿಗುಣಗೊಂಡಿದೆ. ಇದು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

2020 ರ ಜನವರಿಯಿಂದ, ಭಾರತವು 352 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದ್ದಕ್ಕೆ ಹೋಲಿಸಿದಾಗ, ಈಗ 2021 ರ ಜನವರಿಯಲ್ಲಿ ಇದು ಶೇಕಡಾ 734 ರಷ್ಟು ಹೆಚ್ಚಾಗಿದೆ.
ಡಿಸೆಂಬರ್‌ನಲ್ಲಿ ದೇಶವು 2,193 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದೆ. ಇದು 2019 ರ ಡಿಸೆಂಬರ್‌ನಲ್ಲಿ ರಫ್ತಾದ 538 ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ ಇದು ಶೇ. 308 ರಷ್ಟು ಹೆಚ್ಚಾಗಿದೆ.

2021 ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ರಫ್ತು ಅಂಕಿಅಂಶಗಳನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ಇದನ್ನೂ ಓದಿ: ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ಭಾರತವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಆಮ್ಲಜನಕ ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೂ ನಮ್ಮ ದೇಶದ ಪ್ರಜೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಸಿಗುತ್ತಿಲ್ಲ ಏಕೆ ಎಂದು ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತದ ಆಮ್ಲಜನಕ ರಫ್ತು

2019-20: 4502 ಮೆ.ಟನ್
2020-21: 9300 ಮೆ.ಟನ್

ನಮ್ಮಲ್ಲಿ ಆಮ್ಲಜನಕದ ಕೊರತೆ ಇರಲಿಲ್ಲ. ನಾವು ಆಮ್ಲಜನಕದ ಅತಿದೊಡ್ಡ ಉತ್ಪಾದಕರು. ಆದರೆ ಕೊರೊನಾದ ಬೆದರಿಕೆಯ ಹೊರತಾಗಿಯೂ, ಸರ್ಕಾರವು 2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? ಎಂದು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೈಗಾರಿಕಾ ಬಳಕೆಗಾಗಿ ಆಮ್ಲಜನಕವನ್ನು ಏ. 22ರಿಂದ ನಿಷೇಧಿಸುವ ನಿರ್ಧಾರವನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. “ಇಂದು ಅದನ್ನು ಏಕೆ ಮಾಡಬಾರದು? ಏಪ್ರಿಲ್ 22 ರವರೆಗೆ ಏಕೆ ಕಾಯಬೇಕು? ಜೀವಗಳು ಅಪಾಯದಲ್ಲಿದೆ. ಆಮ್ಲಜನಕಕ್ಕಾಗಿ ಏಪ್ರಿಲ್ 22 ರವರೆಗೆ ಕಾಯುವಂತೆ ನೀವು ರೋಗಿಗಳಿಗೆ ಹೇಳಲು ಹೋಗುತ್ತೀರಾ” ಎಂದು ನ್ಯಾಯಾಲಯ ಮಂಗಳವಾರ ಪ್ರಶ್ನಿಸಿದೆ.

“ಆರ್ಥಿಕ ಹಿತಾಸಕ್ತಿಗಳು ಮಾನವ ಜೀವನವನ್ನು ಅತಿಕ್ರಮಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ ನಾವು ವಿಪತ್ತಿನತ್ತ ಸಾಗುತ್ತಿದ್ದೇವೆ’ ಎಂದರ್ಥ ಎಂದು ಕೋರ್ಟ್ ಎಚ್ಚರಿಸಿದೆ.

ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ “ಮಾನಸಿಕ ಉದ್ದೇಶಗಳಿಗಾಗಿ” ಹೆಚ್ಚಿನ ಆಮ್ಲಜನಕವನ್ನು ನೀಡುತ್ತವೆ, ಇದು ದುರುಪಯೋಗಕ್ಕೆ ಕಾರಣವಾಗುತ್ತದೆ ಎಂದು ಕೇಂದ್ರವು ಇತ್ತೀಚೆಗೆ ವಾದಿಸಿತ್ತು. ದೆಹಲಿ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಆಮ್ಲಜನಕದ ಬಳಕೆಯನ್ನು ತರ್ಕಬದ್ಧಗೊಳಿಸುವಂತೆ ಸೂಚಿಸಲಾಗಿದೆ ಮತ್ತು ಪ್ರಾಯೋಗಿಕವಾಗಿ ಅಗತ್ಯವಿಲ್ಲದ ರೋಗಿಗಳಿಗೆ ಆಮ್ಲಜನಕವನ್ನು ನೀಡಬಾರದು ಎಂದು ಕೇಂದ್ರ ತಿಳಿಸಿತ್ತು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...