Homeಕರೋನಾ ತಲ್ಲಣಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ನಾವು ಪ್ರತಿಭಟಿಸುತ್ತಿದ್ದೇವೆ ನಿಜ.  ಆದರೆ ಅದು ಕೊರೊನಾ ರೋಗಿಗಳು, ಕೊರೊನಾ ವಾರಿಯರ್ಸ್ ಅಥವಾ ಸಾಮಾನ್ಯ ನಾಗರಿಕರ ವಿರುದ್ಧ ಅಲ್ಲ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೊರೊನಾ ಸೋಂಕಿತರಿಗಾಗಿ ಬರುತ್ತಿದ್ದ ಆಮ್ಲಜನಕದ ವಾಹನಗಳನ್ನು ರೈತರು ದೆಹಲಿಯ ಗಡಿಗಳಲ್ಲಿ ತಡೆ ಹಿಡಿಯುತ್ತಿದ್ದಾರೆ ಎಂಬ ಬಿಜೆಪಿ ಸಂಸದನ ಆರೋಪಕ್ಕೆ ಬ್ಯಾರಿಕೇಡ್ ಹಾಕಿರುವುದು ಸರ್ಕಾರ, ರೈತರಲ್ಲ ಎನ್ನುವ ಮೂಲಕ ಪ್ರತಿಭಟನಾ ನಿರತ ರೈತರು ತಿರುಗೇಟು ನೀಡಿದ್ದಾರೆ.

ಕೇಂದ್ರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರಿಂದ ದೆಹಲಿಗೆ ವೈದ್ಯಕೀಯ ಬಳಕೆಯ ಆಮ್ಲಜನಕದ ಸಾಗಣೆಗೆ ತೊಂದರೆಯಾಗಿದೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮಂಗಳವಾರ ಆರೋಪಿಸಿದ್ದರು.

ಸಂಸದ ಪವೇಶ್ ವರ್ಮಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ರೈತರು, ’ಪ್ರತಿಭಟನೆ ನಡೆಸುತ್ತಿರುವ ರೈತರು ವೈದ್ಯಕೀಯ ಆಮ್ಲಜನಕ ವಾಹಕಗಳನ್ನು ದೆಹಲಿಗೆ ಬಿಡುತ್ತಿಲ್ಲ ಎಂದು ಅಪ್ರಪ್ರಚಾರ ಮಾಡಲಾಗುತ್ತಿದೆ. ನಾವು ಯಾವುದೇ ಅಗತ್ಯ ಸೇವೆಗೆ ಅಡ್ಡಿಪಡಿಸಿಲ್ಲ’ ಎಂದು ರೈತರು ಆರೋಪಗಳನ್ನು ತಿರಸ್ಕರಿಸಿದರು.

ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮೇ 10 ರಂದು `ರೈತರ ರಾಷ್ಟ್ರೀಯ ಸಮಾವೇಶ’

 

ರೈತ ಸಂಘಗಳ ಪ್ರತಿನಿಧಿ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಬುಧವಾರ, ತಮ್ಮ ಆಂದೋಲನ ಆರಂಭವಾದಾಗಿನಿಂದ ತುರ್ತು ಸೇವೆಗಳಿಗೆ ಒಂದು ರಸ್ತೆಯನ್ನು ತೆರೆದಿಟ್ಟಿದೆ ಎಂದು ಹೇಳಿದೆ.

“ಒಂದೇ ಒಂದು ಆಂಬ್ಯುಲೆನ್ಸ್ ಅಥವಾ ಅಗತ್ಯ ಸರಕುಗಳ ಸೇವೆಯನ್ನು ನಿಲ್ಲಿಸಲಾಗಿಲ್ಲ. ಸರ್ಕಾರವೇ ಬಲವಾದ ಮತ್ತು ಬಹುಪದರದ ಬ್ಯಾರಿಕೇಡ್‌ಗಳನ್ನು ರಸ್ತೆಗಳಲ್ಲಿ ಹಾಕಿದೆ, ರೈತರಲ್ಲ. ರೈತರು ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ಪ್ರತಿಯೊಬ್ಬರು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

’ಸರ್ಕಾರವೇ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ದೆಹಲಿಗೆ ಆಮ್ಲಜನಕವನ್ನು ಬಿಡುವುದಿಲ್ಲ ಎಂದು ರೈತರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಸುಳ್ಳು ಸುದ್ದಿ. ನಾವು ಪ್ರತಿಭಟಿಸುತ್ತಿದ್ದೇವೆ ನಿಜ.  ಆದರೆ  ಅದು ಕೊರೊನಾ ರೋಗಿಗಳು, ಕೊರೊನಾ ವಾರಿಯರ್ಸ್ ಅಥವಾ ಸಾಮಾನ್ಯ ನಾಗರಿಕರ ವಿರುದ್ಧ ಅಲ್ಲ. ಕೃಷಿಯ ಬಗ್ಗೆ ಸರ್ಕಾರದ ತಾರತಮ್ಯ ನೀತಿಯ ವಿರೋಧಿ ಪ್ರತಿಭಟಿಸುತ್ತಿದ್ದೇವೆ” ಎಂದು ರೈತ ಸಂಘಟನೆ ಹೇಳಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಒಕ್ಕೂಟ ಸರ್ಕಾರ ಜಾರಿ ಮಾಡಿದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳ ಲಕ್ಷಾಂತರ ರೈತರು ಕಳೆದ ನವೆಂಬರ್‌ನಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ:  ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...