Homeಮುಖಪುಟಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

ಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

- Advertisement -
- Advertisement -

ಲಸಿಕೆಗಳು ಸಾರ್ವಜನಿಕ ಸ್ವತ್ತುಗಳಾಗಿದ್ದು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಲಸಿಕೆ ವಿತರಣೆ ಕುರಿತು ಕೇಂದ್ರದ ಹೊಸ ನೀತಿಯನ್ನು ಮರುಪರಿಶೀಲಿಸುವಂತೆ ಅವರು ಆಗ್ರಹಿಸಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡುವ ಭಾರತ ಸರ್ಕಾರದ ಕ್ರಮವನ್ನು ಪಿಣರಾಯಿ ಸ್ವಾಗತಿಸಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸುಗಮ ವ್ಯಾಕ್ಸಿನೇಷನ್ ಖಾತ್ರಿಪಡಿಸುವಲ್ಲಿ ಕೇಂದ್ರವು ನೀಡಿದ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಲಸಿಕೆ ಯೋಜನೆಯನ್ನು ಜಾರಿಗೆ ತರಲು ಅಗತ್ಯವಿರುವ 50 ಲಕ್ಷ ಲಸಿಕೆ ಪ್ರಮಾಣಗಳ ಬೇಡಿಕೆಯ ಮನವಿಯನ್ನು ಅವರು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಕೇರಳಕ್ಕೆ ಇದುವರೆಗೆ ಕೇವಲ 5.5 ಲಕ್ಷ ಡೋಸ್‌ಗಳು ಮಾತ್ರ ದೊರೆತಿವೆ, ಇದರಿಂದಾಗಿ ಸ್ಪಾಟ್ ನೋಂದಣಿಯನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತಂದಿದೆ. ಇದು ಲಸಿಕಾ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಅಡ್ಡಿಯಾಗಿದೆ. ಬಾಕಿ ಡೋಸ್‌ಗಳನ್ನು ಶೀಘ್ರವಾಗಿ ಹಂಚಿಕೆ ಮಾಡಬೇಕು ಎಂದು ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.

ಲಸಿಕೆ ವಿತರಣೆಯ ಕುರಿತು ಕೇಂದ್ರದ ಹೊಸ ನೀತಿಯಲ್ಲಿ, ಉತ್ಪಾದಕರಿಂದ ನೇರವಾಗಿ ಲಸಿಕೆ ಪಡೆಯಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

“ಸಾಂಕ್ರಾಮಿಕ ಪರಿಣಾಮಗಳಿಂದ ರಾಜ್ಯಗಳು ಈಗಾಗಲೇ ಹೆಚ್ಚುವರಿ ಹಣಕಾಸಿನ ಬದ್ಧತೆಗಳನ್ನು ಎದುರಿಸುತ್ತಿವೆ. ಹೀಗಾಗಿ ಲಸಿಕೆಗಳ ವೆಚ್ಚದಿಂದ ಹೊರೆಯಾಗಬಾರದು. ಲಸಿಕೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕು. ಲಸಿಕೆ ಪಡೆಯಲು ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯನ್ನು ಕೇಂದ್ರ ನೀಡಬೇಕು ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರ್ಥಿಕ ಹಿಂಜರಿತ ಇನ್ನೂ ಮುಂದುವರಿದಂತೆ, ಲಸಿಕೆ ಖರೀದಿಸುವ ಹೆಚ್ಚುವರಿ ಹೊರೆ ರಾಜ್ಯದ ಹಣಕಾಸಿನ ಮೇಲೆ ಸಾಕಷ್ಟು ಒತ್ತಡವನ್ನುಂಟು ಮಾಡುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ, ಅದರ ಪ್ರತಿಯೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

“ರಾಜ್ಯ ಸರ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಸಾಂವಿಧಾನಿಕ ಬಾಧ್ಯತೆಯನ್ನು ಹೊಂದಿವೆ ಮತ್ತು ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಉಚಿತವಾಗಿ ಒದಗಿಸಬೇಕಾದ ಕೋವಿಡ್ ಲಸಿಕೆಯ ಖಚಿತ ಕೋಟಾ ಅಗತ್ಯವಿದೆ. ಲಸಿಕೆಗಳನ್ನು ರಾಜ್ಯಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಉಚಿತವಾಗಿ ನೀಡುವುದು ಕಡ್ಡಾಯವಾಗಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮಾನದಂಡಗಳ ಆಧಾರದ ಮೇಲೆ ಕೇಂದ್ರವು ತನ್ನ ಶೇಕಡಾ 50 ರಷ್ಟು ಕೋಟಾದಿಂದ ರಾಜ್ಯ ಸರ್ಕಾರಗಳಿಗೆ ಲಸಿಕೆ ಉಚಿತವಾಗಿ ನೀಡಲಿದೆ ಎಂದು ನೀತಿ ಹೇಳಿದ್ದರೂ, ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆ ರಾಜ್ಯಗಳಿಗೆ ಇದೆ ಎಂದು ಅವರು ಹೇಳಿದ್ದಾರೆ.

ಕೇರಳವು ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದು, ಪ್ರತಿದಿನ ಗಣನೀಯ ಪ್ರಮಾಣದ ಏರಿಕೆಗೆ ಸಾಕ್ಷಿಯಾಗುತ್ತಿರುವಾಗ, ಹೆಚ್ಚುತ್ತಿರುವ ಪ್ರಕರಣಗಳ ರೇಖೆಯನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...